AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ದೋಣಿ ದುರಂತ ಪ್ರಕರಣ; ಈಜಿ ದಡ ಸೇರಿದ ಮತ್ತೊಬ್ಬ ಯುವಕ

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ನಿನ್ನೆ ಮುಳುಗಡೆಯಾಗಿತ್ತು. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು.

ಮಂಗಳೂರು ದೋಣಿ ದುರಂತ ಪ್ರಕರಣ; ಈಜಿ ದಡ ಸೇರಿದ ಮತ್ತೊಬ್ಬ ಯುವಕ
ಈಜಿ ದಡ ಸೇರಿದ ನಸೀಮ್
sandhya thejappa
|

Updated on:May 16, 2021 | 12:00 PM

Share

ಉಡುಪಿ: ಮಂಗಳೂರು ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಸಮುದ್ರದಲ್ಲಿ ಈಜಿ ಮತ್ತೊಬ್ಬ ಯುವಕ ದಡ ಸೇರಿದ್ದಾನೆ. ಹರಿಯಾಣ ಮೂಲದ ನಸೀಮ್ ಉಡುಪಿಯ ಪಡುತೋನ್ಸೆ ಬೆಂಗ್ರೆ ಬಳಿ ಬಂದಿದ್ದಾನೆ. ಮಂಗಳೂರಿನ ಎಂಆರ್​ಪಿಎಲ್​ ಕಂಪನಿಯ ನೌಕರ ಟ್ಯೂಬ್ ಸಹಾಯದಿಂದ ಸತತವಾಗಿ ಈಜಿ ದಡ ಸೇರಿದ್ದಾನೆ. ಮಂಗಳೂರಿನಲ್ಲಿ ದೋಣಿ ಮಗುಚಿ ಬಿದ್ದ ಸಂದರ್ಭದಲ್ಲಿ ನಸೀಮ್ ನೀರುಪಾಲಾಗಿದ್ದ. ಈತನ ಜೊತೆಗೆ ನೀರುಪಾಲಾಗಿದ್ದ ಇನ್ನಿಬ್ಬರು ಮಟ್ಟು ಕೊಪ್ಪ ಬಳಿ ದಡ ಸೇರಿದ್ದರು. ಈಗ ನಸೀಮ್ ಕೂಡಾ ಅಪಾಯದಿಂದ ಪಾರಾಗಿದ್ದು, ಮಲ್ಪೆ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ನಿನ್ನೆ ಮುಳುಗಡೆಯಾಗಿತ್ತು. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು.  7 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ ಇಬ್ಬರು ಮೊಮಿರುಲ್ ಮುಲ್ಲಾ( 34), ಕರೀಮುಲ್ಲಾ ಶೇಕ್ (24) ಎಂಬುವರು ಟ್ಯೂಬ್​ನಲ್ಲಿ ಈಜಿಕೊಂಡು ಬಂದು ಜೀವ ಉಳಿಸಿಕೊಂಡಿದ್ದು, ಇಂದು ಮತ್ತೊಬ್ಬ ಯುವಕ ನಸೀಮ್ ಈಜಿ ದಡ ಸೇರಿದ್ದಾನೆ .

8 ಗಂಟೆ ಕಾಲ ಟ್ಯೂಬ್ ಬಳಸಿ ಈಜಿ ದಡ ಸೇರಿದ ಇಬ್ಬರು ಮಂಗಳೂರು ಎಂಆರ್​ಪಿಎಲ್​ನ ಎರಡು ಟಗ್ ಮುಳುಗಡೆ ಪ್ರಕರಣದಲ್ಲಿ ಈಜಿ ದಡ ಸೇರಿದ್ದ ಇಬ್ಬರು ನೌಕರರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಡುಪಿ ಹೊರವಲಯದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಮಿರುಲ್ ಮುಲ್ಲಾ (34) ಹಾಗೂ ಕರೀಮುಲ್ಲಾ ಶೇಖ್ (24) ಸತತ 8 ಗಂಟೆ ಕಾಲ ಟ್ಯೂಬ್ ಬಳಸಿ ಈಜಿ ದಡ ಸೇರಿದ್ದರು. ಉಡುಪಿ ಜಿಲ್ಲೆಯ ಮಟ್ಟು ಕೊಪ್ಲ ಬಳಿ ದಡ ಸೇರಿದ್ದರು. ಸ್ಥಳೀಯರು ಅವರ ರಕ್ಷಣೆ ಮಾಡಿದ್ದರು. ಸುರತ್ಕಲ್​ನ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತದೇಹಗಳು ಪತ್ತೆ ಟಗ್ ಬೋಟ್ ದುರಂತದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ ಒಂದು ಶವ ಮಾತ್ರ ಬೋಟ್​ನಲ್ಲಿದ್ದವರದ್ದು ಎನ್ನಲಾಗಿದೆ. ಉಡುಪಿ-ಮಂಗಳೂರು ಗಡಿಭಾಗದಲ್ಲಿ ಸಿಕ್ಕಿದ್ದ ಮೃತದೇಹಗಳಲ್ಲಿ ಎರಡು ಮೃತದೇಹಗಳು ಬೇರೆಯದ್ದು ಎಂದು ತಿಳಿದುಬಂದಿದೆ. 8 ಜನರ ಪೈಕಿ ಓರ್ವ ಸಾವನ್ನಪ್ಪಿದ್ದು, ಮೂವರು ಬಚಾವ್ ಆಗಿದ್ದಾರೆ. ನಾಪತ್ತೆಯಾದ ಇನ್ನುಳಿದ 4 ಜನರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ

ಟಗ್ ಮುಳುಗಡೆ ಪ್ರಕರಣ: ಪತ್ತೆಯಾದ 9 ಮಂದಿ ರಕ್ಷಣೆಗೆ ಗಾಳಿ ಮಳೆ ಅಡ್ಡಿ; ನಾಳೆ ಮುಂಜಾನೆವರೆಗೆ ಸಮುದ್ರದಲ್ಲೇ ಇರುವ ಅನಿವಾರ್ಯತೆ

ರೋಗಿಗೆ ಹಾಕಿದ್ದ ಗ್ಲೂಕೋಸ್ ಮುಗಿದಿದ್ದರೂ ಡ್ರಿಪ್ಸ್ ತೆಗೆಯದೆ ರಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ; ಸಂಬಂಧಿಕರ ಆಕ್ರೋಶ

young man who had fallen into the water in a boat disaster has come out of water at udupi

Published On - 11:04 am, Sun, 16 May 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ