AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ದೋಣಿ ದುರಂತ ಪ್ರಕರಣ; ಈಜಿ ದಡ ಸೇರಿದ ಮತ್ತೊಬ್ಬ ಯುವಕ

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ನಿನ್ನೆ ಮುಳುಗಡೆಯಾಗಿತ್ತು. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು.

ಮಂಗಳೂರು ದೋಣಿ ದುರಂತ ಪ್ರಕರಣ; ಈಜಿ ದಡ ಸೇರಿದ ಮತ್ತೊಬ್ಬ ಯುವಕ
ಈಜಿ ದಡ ಸೇರಿದ ನಸೀಮ್
sandhya thejappa
|

Updated on:May 16, 2021 | 12:00 PM

Share

ಉಡುಪಿ: ಮಂಗಳೂರು ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಸಮುದ್ರದಲ್ಲಿ ಈಜಿ ಮತ್ತೊಬ್ಬ ಯುವಕ ದಡ ಸೇರಿದ್ದಾನೆ. ಹರಿಯಾಣ ಮೂಲದ ನಸೀಮ್ ಉಡುಪಿಯ ಪಡುತೋನ್ಸೆ ಬೆಂಗ್ರೆ ಬಳಿ ಬಂದಿದ್ದಾನೆ. ಮಂಗಳೂರಿನ ಎಂಆರ್​ಪಿಎಲ್​ ಕಂಪನಿಯ ನೌಕರ ಟ್ಯೂಬ್ ಸಹಾಯದಿಂದ ಸತತವಾಗಿ ಈಜಿ ದಡ ಸೇರಿದ್ದಾನೆ. ಮಂಗಳೂರಿನಲ್ಲಿ ದೋಣಿ ಮಗುಚಿ ಬಿದ್ದ ಸಂದರ್ಭದಲ್ಲಿ ನಸೀಮ್ ನೀರುಪಾಲಾಗಿದ್ದ. ಈತನ ಜೊತೆಗೆ ನೀರುಪಾಲಾಗಿದ್ದ ಇನ್ನಿಬ್ಬರು ಮಟ್ಟು ಕೊಪ್ಪ ಬಳಿ ದಡ ಸೇರಿದ್ದರು. ಈಗ ನಸೀಮ್ ಕೂಡಾ ಅಪಾಯದಿಂದ ಪಾರಾಗಿದ್ದು, ಮಲ್ಪೆ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ನಿನ್ನೆ ಮುಳುಗಡೆಯಾಗಿತ್ತು. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು.  7 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ ಇಬ್ಬರು ಮೊಮಿರುಲ್ ಮುಲ್ಲಾ( 34), ಕರೀಮುಲ್ಲಾ ಶೇಕ್ (24) ಎಂಬುವರು ಟ್ಯೂಬ್​ನಲ್ಲಿ ಈಜಿಕೊಂಡು ಬಂದು ಜೀವ ಉಳಿಸಿಕೊಂಡಿದ್ದು, ಇಂದು ಮತ್ತೊಬ್ಬ ಯುವಕ ನಸೀಮ್ ಈಜಿ ದಡ ಸೇರಿದ್ದಾನೆ .

8 ಗಂಟೆ ಕಾಲ ಟ್ಯೂಬ್ ಬಳಸಿ ಈಜಿ ದಡ ಸೇರಿದ ಇಬ್ಬರು ಮಂಗಳೂರು ಎಂಆರ್​ಪಿಎಲ್​ನ ಎರಡು ಟಗ್ ಮುಳುಗಡೆ ಪ್ರಕರಣದಲ್ಲಿ ಈಜಿ ದಡ ಸೇರಿದ್ದ ಇಬ್ಬರು ನೌಕರರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಡುಪಿ ಹೊರವಲಯದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಮಿರುಲ್ ಮುಲ್ಲಾ (34) ಹಾಗೂ ಕರೀಮುಲ್ಲಾ ಶೇಖ್ (24) ಸತತ 8 ಗಂಟೆ ಕಾಲ ಟ್ಯೂಬ್ ಬಳಸಿ ಈಜಿ ದಡ ಸೇರಿದ್ದರು. ಉಡುಪಿ ಜಿಲ್ಲೆಯ ಮಟ್ಟು ಕೊಪ್ಲ ಬಳಿ ದಡ ಸೇರಿದ್ದರು. ಸ್ಥಳೀಯರು ಅವರ ರಕ್ಷಣೆ ಮಾಡಿದ್ದರು. ಸುರತ್ಕಲ್​ನ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತದೇಹಗಳು ಪತ್ತೆ ಟಗ್ ಬೋಟ್ ದುರಂತದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ ಒಂದು ಶವ ಮಾತ್ರ ಬೋಟ್​ನಲ್ಲಿದ್ದವರದ್ದು ಎನ್ನಲಾಗಿದೆ. ಉಡುಪಿ-ಮಂಗಳೂರು ಗಡಿಭಾಗದಲ್ಲಿ ಸಿಕ್ಕಿದ್ದ ಮೃತದೇಹಗಳಲ್ಲಿ ಎರಡು ಮೃತದೇಹಗಳು ಬೇರೆಯದ್ದು ಎಂದು ತಿಳಿದುಬಂದಿದೆ. 8 ಜನರ ಪೈಕಿ ಓರ್ವ ಸಾವನ್ನಪ್ಪಿದ್ದು, ಮೂವರು ಬಚಾವ್ ಆಗಿದ್ದಾರೆ. ನಾಪತ್ತೆಯಾದ ಇನ್ನುಳಿದ 4 ಜನರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ

ಟಗ್ ಮುಳುಗಡೆ ಪ್ರಕರಣ: ಪತ್ತೆಯಾದ 9 ಮಂದಿ ರಕ್ಷಣೆಗೆ ಗಾಳಿ ಮಳೆ ಅಡ್ಡಿ; ನಾಳೆ ಮುಂಜಾನೆವರೆಗೆ ಸಮುದ್ರದಲ್ಲೇ ಇರುವ ಅನಿವಾರ್ಯತೆ

ರೋಗಿಗೆ ಹಾಕಿದ್ದ ಗ್ಲೂಕೋಸ್ ಮುಗಿದಿದ್ದರೂ ಡ್ರಿಪ್ಸ್ ತೆಗೆಯದೆ ರಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ; ಸಂಬಂಧಿಕರ ಆಕ್ರೋಶ

young man who had fallen into the water in a boat disaster has come out of water at udupi

Published On - 11:04 am, Sun, 16 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ