AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tragedy: ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ವಿಶುಕುಮಾರ್ ನಿನ್ನೆ ಮಧ್ಯಾಹ್ನ 1.45 ರಲ್ಲಿ ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿದ್ದಾಗ ಎರಡನೇ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಮೇಲಿಂದ ಕೆಳಗೆ ಬಿದ್ದಿದ್ದ ವಿಶುಕುಮಾರ್ ತಲೆಗೆ ಗಂಭೀರ ಗಾಯಗಳಾಗಿದ್ದವು.

Tragedy: ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ
HBR​​ ಲೇಔಟ್​​ನಲ್ಲಿ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ಯುವ ಟೆಕ್ಕಿ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on:Aug 15, 2022 | 2:47 PM

Share

ಬೆಂಗಳೂರು: ಬೆಂಗಳೂರಿನ HBR​​ ಲೇಔಟ್​​ನಲ್ಲಿ (HBR Layout Bangalore) ನಿನ್ನೆ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸುಳ್ಯ ಮೂಲದ ವಿಶುಕುಮಾರ್ (33) ಮೃತ ದುರ್ದೈವಿ. ವಿಶುಕುಮಾರ್ (sullia vishu kumar) ನಿನ್ನೆ ಟೆರಸ್ ಮೇಲೆ ಧ್ವಜ ಕಟ್ಟುತ್ತಿದ್ದಾಗ ಬಿದ್ದಿದ್ದ. ಆತನನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ (Azadi Ka Amrit Mahotsav).

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ವಿಶುಕುಮಾರ್ ನಿನ್ನೆ ಭಾನುವಾರ ಮಧ್ಯಾಹ್ನ 1.45 ರಲ್ಲಿ ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿದ್ದಾಗ ಎರಡನೇ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಮೇಲಿಂದ ಕೆಳಗೆ ಬಿದ್ದಿದ್ದ ವಿಶುಕುಮಾರ್ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ವಿಶುಕುಮಾರ್ ಕೊನೆಯುಸಿರೆಳೆದ್ದಾರೆ. ಘಟನೆ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಅವರು ದೂರು ನೀಡಿದ್ದು, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Tragedy: ಸ್ವಾತಂತ್ರೋತ್ಸವದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಬರುವಾಗ ಅಪಘಾತ: ಕಾಲೇಜು ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ವಿಜಯಪುರ: 75ನೇ ವರ್ಷದ ಸ್ವಾತಂತ್ರೋತ್ಸವ (Independence 75) ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಸ್ಕೂಟಿಯಲ್ಲಿ ಬರುತ್ತಿದ್ದ ವಿದ್ಯಾರ್ಥಿಗಳಿಗೆ ಅಪಘಾತವಾಗಿದೆ. ವಿಜಯಪುರ ನಗರದ ಹೊರ ಭಾಗದ ರಿಂಗ್ ರೋಡ್ ನಲ್ಲಿ ವಿದ್ಯಾರ್ಥಿಗಳ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ(Accident) ಓರ್ವ ವಿದ್ಯಾರ್ಥಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವನಿಗೆ ಗಂಭೀರ‌ ಗಾಯಗಳಾಗಿವೆ.

ಸ್ವರೂಪ‌ ನಾಗೇಶ ಸಾರವಾಡ (19) ಮೃತ ವಿದ್ಯಾರ್ಥಿ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಸ್ವರೂಪ, ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅವಘಡ ನಡೆದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಕೂಟಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆಗಾಗಿ ಪೊಲೀಸರು ತಲಾಷ್ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Published On - 2:07 pm, Mon, 15 August 22

‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು