AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ:ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡನ ಪುತ್ರ ಮದ್ವೆಯಾಗುವುದಾಗಿ ನಂಬಿಸಿ ಬಳಿಕ ಯುವತಿಗೆ ಮೋಸ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ಇದೇ ರೀತಿ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಸಂತ್ರಸ್ತೆ ಯುವತಿ ಆರೋಪಿಸಿದ್ದು, ಈ ಸಂಬಂಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾಳೆ.

ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ:ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು
Prateek Chauhan
TV9 Web
| Edited By: |

Updated on:Jul 17, 2025 | 11:48 PM

Share

ಬೆಂಗಳೂರು/ಬೀದರ್, ಜುಲೈ 17): ಮಾಜಿ ಸಚಿವ, ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಪ್ರತೀಕ್ ಚೌಹಾಣ್  ಮೋಸ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಖುದ್ದು ಮೋಸ ಹೋದ ಸಂತ್ರಸ್ತೆ ಮಹಿಳಾ ಆಯೋಗಕ್ಕೆ (Women’s Commission) ದೂರು ನೀಡಿದ್ದಾಳೆ. ಪ್ರತೀಕ್ ಚೌಹಾಣ್ ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ಸಂಬಂಧ ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರೆ, ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಆರೋಪಿಸಿದ್ದಾಳೆ.

ಮದುವೆಯಾಗುವುದಾಗಿ ನಂಬಿಸಿ  ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ, ಶಾಸಕ  ಪಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್  ವಿರುದ್ಧ ಆರೋಪಿಸಿದ್ದು, ಈ ಸಂಬಂಧ ನ್ಯಾಯ ಒದಗಿಸುವಂತೆ ಸಂತ್ರಸ್ತೆ ಯುವತಿ, ಪ್ರತೀಕ್ ಚೌಹಾಣ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.

ಇದನ್ನೂ ಓದಿ: ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್, ವಿಡಿಯೋ ವೈರಲ್

ಯುವತಿ ದೂರಿನಲ್ಲೇನಿದೆ?

2023ರ ಡಿಸೆಂಬರ್ 25ರಂದು ಪೋಷಕರು ನಿಶ್ಚಿತಾರ್ಥ ಮಾಡಿದ್ದರು. ನಿಶ್ಚಿತಾರ್ಥದ ನಂತರ ಪ್ರತೀಕ್ ಜೊತೆ ಹೊಂದಾಣಿಕೆಗಾಗಿ ಬೇರೆ ಸ್ಥಳಗಳಿಗೆ ಕಳಿಸಿ ಕೊಟ್ಟಿದ್ದರು. ಅದರಂತೆ ಪ್ರತೀಕ್ ಮಹಾರಾಷ್ಟ್ರದ ಲಾತೂರ್​ ಗೆ ಕರೆದುಕೊಂಡು ಹೋಗಿದ್ದು, ಆ ವೇಳೆ ಪ್ರತೀಕ್​ ಚೌಹಾಣ್​ ಒತ್ತಾಯಪೂರ್ವಕವಾಗಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಮದುವೆಗೆ ಒತ್ತಾಯ ಮಾಡಿದ್ರೆ ಮುಂದೂಡಿದ್ದಾರೆ. ಸಾಲದಕ್ಕೆ ಅವರ ಮನೆಗೆ ಹೋಗಿ ನನ್ನ ಪೋಷಕರು ಕೇಳಿದ್ರೆ ಗಲಾಟೆ ಮಾಡಿದ್ದು, ನಮ್ಮ ಮನೆಯವರನ್ನ ಬಡವರು ಎಂದು‌ ಹೀಯಾಳಿಸಿದ್ದಾರೆ. ಈ ಕುರಿತು 2025ರ ಜುಲೈ 6ರಂದು ಔರಾದ್‌ನ ಹೋಕ್ರಾಣ್ ಠಾಣೆಗೆ ದೂರು ಕೊಡಲು ಹೋಗಿದ್ವಿ. ಆದ್ರೆ, ಪೊಲೀಸರು ದೂರನ್ನ ಸ್ವೀಕಾರ ಮಾಡಿಲ್ಲ ಎಂದು ಆರೋಪಿಸಿದ್ದಾಳೆ.

ಇದನ್ನೂ ಓದಿ
Image
ಯುವತಿಯ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರ ಕೊನೆಗೂ ಬಂಧನ
Image
ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!
Image
ಬಿಜೆಪಿ ಮುಖಂಡನ ಮಗನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಯುವತಿ
Image
ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ!

ಮಹಾರಾಷ್ಟ್ರದ (Maharashtra) ಉದ್ದಗೀರ್ ಯುವತಿಯೊಂದಿಗೆ ಪ್ರಭು ಚೌಹಾಣ್ ಮಗ ಪ್ರತೀಕ್ ಚೌಹಾಣ್‌ನೊಂದಿಗೆ ನಿಶ್ಚಿತಾರ್ಥವಾಗಿದ್ದು, ಕೆಲ ದಿನಗಳಿಂದ ಅಷ್ಟೇ  ಮದುವೆ ಲೇಟಾದ ವಿಚಾರಕ್ಕೆ ಎರಡು ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು. ಘಟನೆ ವಿಕೋಪಕ್ಕೆ ತಿರುಗಿ ಸಂಬಂಧಿಕರು ಹೊಡೆದಾಡಿಕೊಂಡಿದ್ದರು. ಆ ವೇಳೆ ಶಾಸಕ ಪ್ರಭು ಚೌಹಾಣ್ ಒಬ್ಬರಿಗೆ ಕಾಪಾಳಕ್ಕೆ ಬಾರಿಸಿದ್ದು, ಗಲಾಟೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದೀಗ ಅದೇ ಪ್ರಕರಣ ಸಂಬಂಧ ನಿಶ್ಚಿತಾರ್ಥ ಮಾಡಿಕೊಂಡು ಮದುವೆ ಮಾಡಿಕೊಳ್ಳದೇ ಮೋಸ ಮಾಡಿದ್ದಕ್ಕೆ ಯುವತಿ, ಭು ಚೌಹಾಣ್ ಮಗ ಪ್ರತೀಕ್ ಚೌಹಾಣ್‌ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:35 pm, Thu, 17 July 25

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ