AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ:ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡನ ಪುತ್ರ ಮದ್ವೆಯಾಗುವುದಾಗಿ ನಂಬಿಸಿ ಬಳಿಕ ಯುವತಿಗೆ ಮೋಸ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ಇದೇ ರೀತಿ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಸಂತ್ರಸ್ತೆ ಯುವತಿ ಆರೋಪಿಸಿದ್ದು, ಈ ಸಂಬಂಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾಳೆ.

ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ:ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು
Prateek Chauhan
TV9 Web
| Edited By: |

Updated on:Jul 17, 2025 | 11:48 PM

Share

ಬೆಂಗಳೂರು/ಬೀದರ್, ಜುಲೈ 17): ಮಾಜಿ ಸಚಿವ, ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಪ್ರತೀಕ್ ಚೌಹಾಣ್  ಮೋಸ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಖುದ್ದು ಮೋಸ ಹೋದ ಸಂತ್ರಸ್ತೆ ಮಹಿಳಾ ಆಯೋಗಕ್ಕೆ (Women’s Commission) ದೂರು ನೀಡಿದ್ದಾಳೆ. ಪ್ರತೀಕ್ ಚೌಹಾಣ್ ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ಸಂಬಂಧ ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರೆ, ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಆರೋಪಿಸಿದ್ದಾಳೆ.

ಮದುವೆಯಾಗುವುದಾಗಿ ನಂಬಿಸಿ  ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ, ಶಾಸಕ  ಪಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್  ವಿರುದ್ಧ ಆರೋಪಿಸಿದ್ದು, ಈ ಸಂಬಂಧ ನ್ಯಾಯ ಒದಗಿಸುವಂತೆ ಸಂತ್ರಸ್ತೆ ಯುವತಿ, ಪ್ರತೀಕ್ ಚೌಹಾಣ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.

ಇದನ್ನೂ ಓದಿ: ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್, ವಿಡಿಯೋ ವೈರಲ್

ಯುವತಿ ದೂರಿನಲ್ಲೇನಿದೆ?

2023ರ ಡಿಸೆಂಬರ್ 25ರಂದು ಪೋಷಕರು ನಿಶ್ಚಿತಾರ್ಥ ಮಾಡಿದ್ದರು. ನಿಶ್ಚಿತಾರ್ಥದ ನಂತರ ಪ್ರತೀಕ್ ಜೊತೆ ಹೊಂದಾಣಿಕೆಗಾಗಿ ಬೇರೆ ಸ್ಥಳಗಳಿಗೆ ಕಳಿಸಿ ಕೊಟ್ಟಿದ್ದರು. ಅದರಂತೆ ಪ್ರತೀಕ್ ಮಹಾರಾಷ್ಟ್ರದ ಲಾತೂರ್​ ಗೆ ಕರೆದುಕೊಂಡು ಹೋಗಿದ್ದು, ಆ ವೇಳೆ ಪ್ರತೀಕ್​ ಚೌಹಾಣ್​ ಒತ್ತಾಯಪೂರ್ವಕವಾಗಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಮದುವೆಗೆ ಒತ್ತಾಯ ಮಾಡಿದ್ರೆ ಮುಂದೂಡಿದ್ದಾರೆ. ಸಾಲದಕ್ಕೆ ಅವರ ಮನೆಗೆ ಹೋಗಿ ನನ್ನ ಪೋಷಕರು ಕೇಳಿದ್ರೆ ಗಲಾಟೆ ಮಾಡಿದ್ದು, ನಮ್ಮ ಮನೆಯವರನ್ನ ಬಡವರು ಎಂದು‌ ಹೀಯಾಳಿಸಿದ್ದಾರೆ. ಈ ಕುರಿತು 2025ರ ಜುಲೈ 6ರಂದು ಔರಾದ್‌ನ ಹೋಕ್ರಾಣ್ ಠಾಣೆಗೆ ದೂರು ಕೊಡಲು ಹೋಗಿದ್ವಿ. ಆದ್ರೆ, ಪೊಲೀಸರು ದೂರನ್ನ ಸ್ವೀಕಾರ ಮಾಡಿಲ್ಲ ಎಂದು ಆರೋಪಿಸಿದ್ದಾಳೆ.

ಇದನ್ನೂ ಓದಿ
Image
ಯುವತಿಯ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರ ಕೊನೆಗೂ ಬಂಧನ
Image
ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!
Image
ಬಿಜೆಪಿ ಮುಖಂಡನ ಮಗನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಯುವತಿ
Image
ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ!

ಮಹಾರಾಷ್ಟ್ರದ (Maharashtra) ಉದ್ದಗೀರ್ ಯುವತಿಯೊಂದಿಗೆ ಪ್ರಭು ಚೌಹಾಣ್ ಮಗ ಪ್ರತೀಕ್ ಚೌಹಾಣ್‌ನೊಂದಿಗೆ ನಿಶ್ಚಿತಾರ್ಥವಾಗಿದ್ದು, ಕೆಲ ದಿನಗಳಿಂದ ಅಷ್ಟೇ  ಮದುವೆ ಲೇಟಾದ ವಿಚಾರಕ್ಕೆ ಎರಡು ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು. ಘಟನೆ ವಿಕೋಪಕ್ಕೆ ತಿರುಗಿ ಸಂಬಂಧಿಕರು ಹೊಡೆದಾಡಿಕೊಂಡಿದ್ದರು. ಆ ವೇಳೆ ಶಾಸಕ ಪ್ರಭು ಚೌಹಾಣ್ ಒಬ್ಬರಿಗೆ ಕಾಪಾಳಕ್ಕೆ ಬಾರಿಸಿದ್ದು, ಗಲಾಟೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದೀಗ ಅದೇ ಪ್ರಕರಣ ಸಂಬಂಧ ನಿಶ್ಚಿತಾರ್ಥ ಮಾಡಿಕೊಂಡು ಮದುವೆ ಮಾಡಿಕೊಳ್ಳದೇ ಮೋಸ ಮಾಡಿದ್ದಕ್ಕೆ ಯುವತಿ, ಭು ಚೌಹಾಣ್ ಮಗ ಪ್ರತೀಕ್ ಚೌಹಾಣ್‌ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:35 pm, Thu, 17 July 25

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ