AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಧರಿಸಲು ಹೇಳಿದ KSRTC ಬಸ್ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು

ಮಾಸ್ಕ್​ ಧರಿಸಬೇಕು ಎಂದು ಕೃಷ್ಣಪ್ಪ ಹೇಳಿದಾಗ ಹಲ್ಲೆ ಮಾಡಿದ ಯುವಕರು ನಿರ್ವಾಹಕರ ಮುಖ ಮೂತಿ ನೋಡದೇ ಥಳಿಸಿ, ಎದೆ ಭಾಗಕ್ಕೆ ಗುದ್ದಿದ್ದಾರೆ. ಅಲ್ಲದೇ ಮುಖಕ್ಕೆ ಹೊಡೆದು ಹಲ್ಲನ್ನೂ ಮುರಿದು ಗಾಯಗೊಳಿಸಿದ್ದಾರೆ.

ಮಾಸ್ಕ್​ ಧರಿಸಲು ಹೇಳಿದ KSRTC ಬಸ್ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು
ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಯುವಕ
TV9 Web
| Updated By: Skanda|

Updated on:Jul 16, 2021 | 9:20 AM

Share

ಚಿಕ್ಕಬಳ್ಳಾಪುರ: ಬಸ್​ನಲ್ಲಿ ಪ್ರಯಾಣಿಸುವಾಗ ಮಾಸ್ಕ್ (Mask)​ ಧರಿಸಬೇಕು ಎಂದು ಹೇಳಿದ್ದಕ್ಕೆ ಯುವಕರಿಬ್ಬರು ಕೆಎಸ್​ಆರ್​ಟಿಸಿ (KSRTC) ಬಸ್​ ನಿರ್ವಾಹಕನ ಮೇಲೆ ಹಲ್ಲೆ (Assault) ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕೋಲಾರದಿಂದ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದ ಮುಳಬಾಗಿಲು ಡಿಪೋಗೆ ಸೇರಿದ ಕೆಎ 07 ಎಫ್ 1608 ಸಂಖ್ಯೆಯ ಬಸ್​ನ ಕಂಡಕ್ಟರ್ ಎಂ.ಸಿ.ಕೃಷ್ಣಯ್ಯ ಅವರ ಮೇಲೆ ಯುಕರಿಬ್ಬರು ಗಂಭೀರ ಹಲ್ಲೆ ನಡೆಸಿದ್ದು, ಕೃಷ್ಣಯ್ಯ ಅವರ ಹಲ್ಲು ಮುರಿದಿದ್ದಾರೆ. ಅಲ್ಲದೇ, ಮುಖಮೂತಿ ನೋಡದೇ ಥಳಿಸಿ, ಎದೆ ಭಾಗಕ್ಕೆ ಗುದ್ದಿ ಹಲ್ಲೆ ಮಾಡಿರುವುದರಿಂದ ಗಾಯಗೊಂಡ ಕೃಷ್ಣಪ್ಪ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಎರಡನೇ ಅಲೆ ಕೊಂಚ ಇಳಿಮುಖವಾಗಿದೆ ಎಂದ ಮಾತ್ರಕ್ಕೆ ಅಪಾಯದಿಂದ ಪಾರಾಗಿದ್ದೇವೆ ಎಂದು ಅರ್ಥವಲ್ಲ. ಡೆಲ್ಟಾ ರೂಪಾಂತರಿ ಹಾಗೂ ಮೂರನೇ ಅಲೆ ಯಾವ ಕ್ಷಣದಲ್ಲಿ ಬೇಕಿದ್ದರೂ ಪರಿಸ್ಥಿತಿಯನ್ನು ಗಂಭೀರವಾಗಿಸಬಹುದು ಎಂದು ತಜ್ಞರು ಮೇಲಿಂದ ಮೇಲೆ ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಹೀಗಾಗಿ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಹೇಳಿದ್ದಾರೆ. ಆದರೆ, ಅನ್​ಲಾಕ್​ ಆದ ತಕ್ಷಣ ಜನರು ಕೊರೊನಾ ನಿಯಮಾವಳಿಗಳನ್ನೇ ಮರೆಯುತ್ತಿದ್ದು, ಅದನ್ನು ನೆನಪಿಸಿದ ತಪ್ಪಿಗೆ ಕೆಎಸ್​ಆರ್​ಟಿಸಿ ನಿರ್ವಾಹಕ ಕೃಷ್ಣಪ್ಪ ಪೆಟ್ಟು ತಿನ್ನುವಂತಾಗಿದೆ.

ಚಿಕ್ಕಬಳ್ಳಾಫುರ ತಾಲೂಕಿನ ಚದಲಪುರದ ಬಳಿ ಬಸ್ ಹತ್ತಿದ್ದ ಯುವಕರು ಮಾಸ್ಕ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ನಿರ್ವಾಹಕ ಎಂ.ಸಿ.ಕೃಷ್ಣಪ್ಪ ಯುವಕರನ್ನು ಪ್ರಶ್ನಿಸಿದ್ದಾರೆ. ಆದರೆ, ಪ್ರಶ್ನಿಸಿದ್ದನ್ನೇ ತಪ್ಪು ಎಂಬಂತೆ ವರ್ತಿಸಿದ ಯುವಕರು ಕೃಷ್ಣಪ್ಪ ಅವರೊಂದಿಗೆ ಜಗಳಕ್ಕೆ ನಿಂತಿದ್ದಾರೆ. ಮಾಸ್ಕ್​ ಧರಿಸಬೇಕು ಎಂದು ಕೃಷ್ಣಪ್ಪ ಹೇಳಿದಾಗ ಹಲ್ಲೆ ಮಾಡಿದ ಯುವಕರು ನಿರ್ವಾಹಕರ ಮುಖ ಮೂತಿ ನೋಡದೇ ಥಳಿಸಿ, ಎದೆ ಭಾಗಕ್ಕೆ ಗುದ್ದಿದ್ದಾರೆ. ಅಲ್ಲದೇ ಮುಖಕ್ಕೆ ಹೊಡೆದು ಹಲ್ಲನ್ನೂ ಮುರಿದು ಗಾಯಗೊಳಿಸಿದ್ದಾರೆ.

ಘಟನೆ ನಡೆಯುತ್ತಿದ್ದಂತೆಯೇ ಸ್ಥಳೀಯರ ಸಹಾಯದಿಂದ ಆರೋಪಿ ಯುವಕರನ್ನು ಪೊಲೀಸರಿಗೆ ಒಪ್ಪಿಸಲು ಪ್ರಯತ್ನಿಸಲಾಯಿತಾದರೂ ಓರ್ವ ಯುವಕ ಪೊಲೀಸ್​ ಠಾಣೆಯ ಬಳಿಯೇ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ಸದ್ಯ ಮತ್ತೋರ್ವ ಯುವಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಇದೀಗ ಗಾಯಾಳು ನಿರ್ವಾಹಕ ಕೃಷ್ಣಪ್ಪ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಾಸ್ಕ್ ಹಾಕಿ ಎಂದಿದ್ದಕ್ಕೆ ಹೆಡ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ.. 6 ಜನರ ಬಂಧನ 

ಗಿರಿಧಾಮ,ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದ ಜನರ ಗುಂಪು ಕಳವಳವನ್ನುಂಟು ಮಾಡುತ್ತಿದೆ: ಮೋದಿ

Published On - 9:20 am, Fri, 16 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ