AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ […]

ಯುವಕರಿಂದ ಬಾಲಕನಿಗೆ ಚಿತ್ರಹಿಂಸೆ, ಕಂಠೀರವ ಸ್ಟೇಡಿಯಂ ಕೆರೆಯಲ್ಲಿ ಪುಂಡಾಟ
ಸಾಧು ಶ್ರೀನಾಥ್​
|

Updated on:Nov 21, 2019 | 12:30 PM

Share

ಬೆಂಗಳೂರು: ಯುವಕರ ಗುಂಪೊಂದು ಬಾಲಕನನ್ನು ನೀರಿನಲ್ಲಿ ಮುಳುಗಿಸಿ ಚಿತ್ರ ಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಹರ್ಷವರ್ಧನ ಎಂಬ ಬಾಲಕನನ್ನು ಮ್ಯಾನುಯಲ್, ಸೂರ್ಯ , ಚರಣ್ ಮುಂತಾದ ಯುವಕರ ಗುಂಪು ನೀರಲ್ಲಿ ಮುಳುಗಿಸಿ ಚಿತ್ರಹಿಂಸೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇರುವ ಐತಿಹಾಸಿಕ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ.

ಬಾಲಕ ಎಷ್ಟೇ ಅಂಗಲಾಚಿದರೂ, ಈಜು ಬರಲ್ಲ ಬಿಡಿ ಅಣ್ಣಾ, ಜೀವ ಹೋಗತ್ತೆ ಎಂದು ಚೀರಿದರೂ ಕ್ಯಾರೇ ಅನ್ನದೆ ಯುವಕರು ಚಿತ್ರಹಿಂಸೆ ನೀಡಿದ್ದಾರೆ. ಪ್ರಕರಣ ಇದೀಗ ಸಂಪಂಗಿ ರಾಮ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

6ಆರೋಪಿಗಳ ಬಂಧನ: ಪ್ರಕರಣದ ಸಂಬಂಧ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಐವರು ಅಪ್ರಾಪ್ತರು. ಅವರನ್ನ ಜ್ಯೂವೆನಲ್ ಕೋರ್ಟ್​ಗೆ ಹಾಜರುಪಡಿಸಿ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು. ಈ ಕೇಸಲ್ಲಿ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಚೇತನ್ ಸಿಂಗ್ ರಾತೋರ್ ತಿಳಿಸಿದ್ದಾರೆ.

Published On - 10:02 am, Thu, 21 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More