AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ನಮ್ಮ ತಂದೆಯನ್ನು ಉಳಿಸಿ; ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಯುವಕ

ಹೃದಯಾಘಾತ, ಸ್ಟ್ರೋಕ್ ಸಮಸ್ಯೆಗೆ ಒಳಗಾಗಿರುವ ಪವನ್ ಅವರ ತಂದೆ ಹಾಸನದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಚಿಕಿತ್ಸೆ ವೆಚ್ಚವನ್ನು ಭರಿಸುವುದು ಕಷ್ಟವಾಗಿದ್ದು, ಹೇಗಾದರೂ ಮಾಡಿ ತಂದೆಯನ್ನು ಉಳಿಸಿಕೊಡಿ ಎಂದು ಯುವಕ ಪವನ್ ಕಣ್ಣೀರಿಟ್ಟಿದ್ದಾರೆ.

ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ನಮ್ಮ ತಂದೆಯನ್ನು ಉಳಿಸಿ; ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಯುವಕ
ವಿಡಿಯೋದಲ್ಲಿ ಕಣ್ಣೀರಿಡುತ್ತಾ ಯಡಿಯೂರಪ್ಪ ಹಾಗೂ ಸುಧಾಕರ್​ಗೆ ಮನವಿ ಸಲ್ಲಿಸಿದ ಯುವಕ
Skanda
|

Updated on: May 22, 2021 | 8:50 AM

Share

ಹಾಸನ: ಕೊರೊನಾ ಆರಂಭವಾದ ನಂತರ ಸಾವು, ನೋವು, ಸಂಕಟದ ಘಟನೆಗಳಿಗೆ ಕೊನೆಯೇ ಇಲ್ಲವೆಂಬಂತಾಗಿದೆ. ಸೋಂಕು ತಗುಲಿದವರು ಹೇಗೆ ಪಡಬಾರದ ಪಾಡು ಅನುಭವಿಸುತ್ತಾರೋ ಅದೇ ರೀತಿ ಕೊರೊನಾ ಅಲ್ಲದೇ ಬೇರೆ ಕಾಯಿಲೆಗೆ ತುತ್ತಾದವರೂ ಕಷ್ಟವನ್ನು ಅನುಭವಿಸುವುದು ತಪ್ಪಿದ್ದಲ್ಲ. ಒಂದೆಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋದರೆ ಎಲ್ಲಿ ಕೊರೊನಾ ತಗುಲುತ್ತದೋ ಎಂಬ ಭಯ, ಇನ್ನೊಂದೆಡೆ ಇದೇ ಕೊರೊನಾ ಉಂಟು ಮಾಡಿರುವ ಆರ್ಥಿಕ ಸಂಕಷ್ಟ ಎಂತಹವರನ್ನೂ ನಲುಗಿಸುತ್ತಿದೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯೆಂಬಂತೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಯುವಕ ಪವನ್ ಎಂಬುವವರು ತನ್ನ ತಂದೆಯನ್ನು ಉಳಿಸಿಕೊಡುವಂತೆ ಕಣ್ಣೀರಿಡುತ್ತಾ, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸುವ ವಿಡಿಯೋವೊಂದನ್ನು ಮಾಡಿದ್ದಾರೆ.

ಹೃದಯಾಘಾತ, ಸ್ಟ್ರೋಕ್ ಸಮಸ್ಯೆಗೆ ಒಳಗಾಗಿರುವ ಪವನ್ ಅವರ ತಂದೆ ಹಾಸನದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಚಿಕಿತ್ಸೆ ವೆಚ್ಚವನ್ನು ಭರಿಸುವುದು ಕಷ್ಟವಾಗಿದ್ದು, ಹೇಗಾದರೂ ಮಾಡಿ ತಂದೆಯನ್ನು ಉಳಿಸಿಕೊಡಿ ಎಂದು ಯುವಕ ಪವನ್ ಕಣ್ಣೀರಿಟ್ಟಿದ್ದಾರೆ. ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸೇರಿದಂತೆ ಎಲ್ಲರಲ್ಲೂ ಮನವಿ ಮಾಡಿರುವ ಪವನ್, ಆಸ್ಪತ್ರೆಯ ಬಿಲ್ ಪಾವತಿಸಲು ನಮ್ಮ ಬಳಿ ಹಣವಿಲ್ಲ. ದಯವಿಟ್ಟು ನಮ್ಮ ತಂದೆಗೆ ಚಿಕಿತ್ಸೆ ಕೊಡಿಸಿ ಎಂದು ಕೇಳಿಕೊಂಡಿದ್ದಾರೆ.

ನಮ್ಮ ತಂದೆ ನಮ್ಮನ್ನು ಕಷ್ಟಪಟ್ಟು ಸಾಕಿದ್ದಾರೆ. ಈಗ ಆರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ಸೇರಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕು. ಆದರೆ, ಅದಕ್ಕೆ ಬೇಕಾದ ಚಿಕಿತ್ಸೆಗೆ ನೀಡುವಷ್ಟು ಹಣ ನಮ್ಮ ಬಳಿ ಇಲ್ಲ. ದಯವಿಟ್ಟು ನೀವು ಸಹಾಯ ಮಾಡಿ. ತಂದೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ. ಆ ಮೂಲಕ ನಮ್ಮ ತಂದೆಯ ಜೀವ ಉಳಿಸಿ ಎಂದು ಪವನ್​ ಪರಿಪರಿಯಾಗಿ ವಿನಂತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ವೆಂಟಿಲೇಟರ್, ಬೆಡ್ ಒದಗಿಸಿ ಬಹಳಷ್ಟು ಜನರ ಜೀವ ಉಳಿಸಿದ್ದಾರೆ ಖ್ಯಾತ ನಟ ಪ್ರಕಾಶ ರೈ!

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಬಿಎಸ್​ವೈ ಮನೆ ಮುಂದೆ ಧರಣಿ; ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ

(Youth records video requesting CM BS Yediyurappa and Health Minister Dr Sudhakar to help him to save his hospitalised father)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್