AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿಗೂ ಮುನ್ನ ಕೊರೊನಾ ಕರಾಳತೆ, ಆಸ್ಪತ್ರೆ ಅವ್ಯವಸ್ಥೆ ಬಯಲು ಮಾಡಿದ ಯುವಕ.. ಕೊನೆಗೆ ನರಳಿ ನರಳಿ ಪ್ರಾಣ ಬಿಟ್ಟ

ಆಕ್ಸಿಜನ್ ವ್ಯವಸ್ಥೆಯಿಂದ ಮೂಗು ಬಾಯಲ್ಲಿ ರಕ್ತ ಸೋರಿದು ಯುವಕ ಮೃತಪಟ್ಟಿದ್ದಾನೆ. ಕ್ರೂರಿ ಕೊರೊನಾವನ್ನು ಗೆಲ್ಲಲಾಗದೆ 30 ವರ್ಷದ ಯುವಕ ಬಲಿಯಾಗಿದ್ದಾನೆ. ಯುವಕನ ಈ ಕೊನೆ ಕ್ಷಣದ ವಿಡಿಯೋ ನೋಡಿದರೆ ಎಂತಹ ಕಲ್ಲು ಹೃದಯ ಕೂಡ ಒಂದು ಕ್ಷಣ ಮರುಗದೆ ಇರಲಾರದು.

ಸಾವಿಗೂ ಮುನ್ನ ಕೊರೊನಾ ಕರಾಳತೆ, ಆಸ್ಪತ್ರೆ ಅವ್ಯವಸ್ಥೆ ಬಯಲು ಮಾಡಿದ ಯುವಕ.. ಕೊನೆಗೆ ನರಳಿ ನರಳಿ ಪ್ರಾಣ ಬಿಟ್ಟ
ಸಾವಿಗೂ ಮುನ್ನ ಸೋಂಕಿತ ಚಿತ್ರಿಸಿದ ವಿಡಿಯೋ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Apr 20, 2021 | 1:55 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ತನ್ನ ಕಬಂದ ಬಾಹುಗಳನ್ನು ಚಾಚಿಕೊಂಡು ಮುನ್ನುಗ್ಗುತ್ತಿದೆ. ಸೋಂಕಿತರು ಕಣ್ಣ ಮುಂದೆಯೇ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಷ್ಟೆಲ್ಲಾ ಆದರೂ ನಮ್ಮ ಜನ ಮಾತ್ರ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೊರೊನಾ ನಮಗೆ ಬರಲ್ಲ ಎನ್ನುವ ಭ್ರಮೆಯಲ್ಲಿ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಯುವಕನೋರ್ವ ಸಾವಿಗೂ ಮುನ್ನ ಕೊರೊನಾ ಕರಾಳತೆ ಹಾಗೂ ಆಸ್ಪತ್ರೆ ಅವ್ಯವಸ್ಥೆಯ ಸತ್ಯವನ್ನು ಬಿಚ್ಚಿಟ್ಟಿದ್ದಾನೆ. ಕೊರೊನಾ ಕರಾಳತೆ ಜತೆ ಆಸ್ಪತ್ರೆ ಅವ್ಯವಸ್ಥೆಯನ್ನೂ ಬಯಲು ಮಾಡಿದ್ದಾನೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಸಾವಿನ ಒಂದು ದಿನ ಮುಂಚೆ ವಿಡಿಯೋ ಮಾಡಿ ಪೋಷಕರಿಗೆ ಕಳಿಸಿದ್ದಾನೆ. ಆ ವಿಡಿಯೋದಲ್ಲಿ ಕೊರೊನಾ ಕರಾಳತೆ ಜತೆ ಆಸ್ಪತ್ರೆ ಅವ್ಯವಸ್ಥೆಯೂ ಬಯಲಾಗಿದೆ. ವಿಡಿಯೋ ಮಾಡುವ ಮುನ್ನ ಯುವಕ ತನ್ನ ಪೋಷಕರಿಗೆ ಕರೆ ಮಾಡಿ ಆಸ್ಪತ್ರೆಯಲ್ಲಿ ನೀರು, ಊಟ ಕೊಡ್ತಿಲ್ಲ, ಚಿಕಿತ್ಸೆ ಕೊಡ್ತಿಲ್ಲ, ನನ್ನನ್ನು ಕರೆದುಕೊಂಡು ಹೋಗಿ ಎಂದು ಅಳಲು ತೋಡಿಕೊಂಡಿದ್ದ. ಆಗ ಸರಿ ನಾಳೆ ಕರೆದುಕೊಂಡು ಹೋಗ್ತೀವಿ ಎಂದು ಹೇಳಿ ಸಮಾಧಾನ ಮಾಡಿದ್ದರು. ಅದಾಗಿ ಮರುದಿನವೇ ಯುವಕನ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಲುಪಿದೆ. ಆಸ್ಪತ್ರೆಗೆ ಅಡ್ಮಿಟ್ ಆದ ಎರಡೇ ದಿನಕ್ಕೆ ಯುವಕ ಬಲಿಯಾಗಿದ್ದಾನೆ.

ಯುವಕ ಮಾಡಿದ್ದ ವಿಡಿಯೋದಲ್ಲಿ ಏನಿದೆ? ಕುಟುಂಬಸ್ಥರ ಬಳಿ ಏನೋ ಹೇಳಿಕೊಳ್ಳಬೇಕೆಂದು ಆಸೆ ಪಟ್ಟಿದ್ದ ಯುವಕ ಮಾತನಾಡಲು ಸಾಧ್ಯವಾಗದೇ ಮೂಕರೋಧನೆಯ ಅನುಭವಿಸಿದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಐಸಿಯುವಿನಲ್ಲಿ ತನ್ನವರಿಗಾಗಿ ಕೊನೆಯ ಕ್ಷಣದಲ್ಲಿ ಹಂಬಲಿಸಿದ ಯುವಕನ ಮನ ಕಲಕುವ ದೃಶ್ಯಗಳು ಸೆರೆಯಾಗಿವೆ. ತನ್ನ ಕೊನೆ ಕ್ಷಣದ ನೋವಿನ ಕಥೆಯನ್ನು ಮೂಕ ರೋಧನೆಯನ್ನು ಚಿತ್ರಿಸಿ ಯುವಕ ತನ್ನ ಪೋಷಕರಿಗೆ ಕಳಿಸಿದ್ದಾನೆ. ಕೊನೆಗೆ ಆಕ್ಸಿಜನ್ ವ್ಯವಸ್ಥೆಯಿಂದ ಮೂಗು ಬಾಯಲ್ಲಿ ರಕ್ತ ಸೋರಿದು ಯುವಕ ಮೃತಪಟ್ಟಿದ್ದಾನೆ. ಕ್ರೂರಿ ಕೊರೊನಾವನ್ನು ಗೆಲ್ಲಲಾಗದೆ 30 ವರ್ಷದ ಯುವಕ ಬಲಿಯಾಗಿದ್ದಾನೆ. ಯುವಕನ ಈ ಕೊನೆ ಕ್ಷಣದ ವಿಡಿಯೋ ನೋಡಿದರೆ ಎಂತಹ ಕಲ್ಲು ಹೃದಯ ಕೂಡ ಒಂದು ಕ್ಷಣ ಮರುಗದೆ ಇರಲಾರದು. ಎಂತಹವರ ಕಣ್ಣಾಲೆಯೂ ಒದ್ದೆಯಾಗದೆ ಇರಲಾರದು. ಸದ್ಯ ವಿಡಿಯೋ ನೋಡಿದ ಕುಟುಂಬಸ್ಥರು ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ತಮ್ಮ ಬಲಿಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

ಯುವಕನ ಸಾವಿಗೆ ಕುಟುಂಬಸ್ಥರ ಆಕ್ರೋಶ ಹೊರ ಹಾಕಿದ್ದಾರೆ. ದಿನಕ್ಕೆ ಸಾವಿರಾರು ರೋಗಿಗಳು ದಾಖಲಾಗುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಟ್ರೀಟ್ ಮೆಂಟ್ ಸಿಗ್ತಿಲ್ಲ. ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿರುವ ಆರೋಪ ಮಾಡಿ ಆಸ್ಪತ್ರೆಯ ಮುಂದೆ ಯುವಕನ ಕುಟುಂಬಸ್ಥರು ಕಣ್ಣೀರು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಇಲ್ಲಿ ಸೋಂಕಿತರಿಗೆ ನೀರು ಕೊಡಬೇಕು ಅಂದ್ರೂ ಇಲ್ಲಿರುವ ಸಿಬ್ಬಂದಿಗೆ ಐನೂರು ರೂಪಾಯಿ ಕೊಡಬೇಕು, ದುಡ್ಡಿದ್ರೇ ಎಲ್ಲಾ ಇಲ್ದೆ ಇದ್ರೇ ಊಟ ತಿಂಡಿ ಕುಡಿಯೋಕೆ ನೀರು ಸಹ ಸೋಂಕಿತರಿಗೆ ನೀಡಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಲಾರಿ ಬೀಳ್ಲಿ, ಯಾರೇ ಸಾಯ್ಲಿ ಹೆಂಡ ಮಾತ್ರ ಸಿಗ್ಲಿ; ಲಾಠಿ ಏಟು ಬಿದ್ರೂ ಬೀಳ್ಲಿ ಬಾಚ್ಕೋ ಸಿಕ್ದಷ್ಟ್ ಬಾಟ್ಲಿ!

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು