AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಪಿ ಬರ್ತ್​ಡೇ ಚಿನ್ಮಯಿ: ನೆಚ್ಚಿನ ಹಸುವಿನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಅಚರಿಸಿದ ಯುವಕ!

ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದಲ್ಲಿ ಯುವಕನೊಬ್ಬ ತನ್ನ ನೆಚ್ಚಿನ ಹಸುವಿನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾನೆ. ಧೃವರಾಜ್‌ ಎಂಬ ಯುವಕ ತನ್ನ ಪ್ರೀತಿಯ ಹಸುವಾದ ಚಿನ್ಮಯಿಯ ಮೂರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದಾನೆ.

ಹ್ಯಾಪಿ ಬರ್ತ್​ಡೇ ಚಿನ್ಮಯಿ: ನೆಚ್ಚಿನ ಹಸುವಿನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಅಚರಿಸಿದ ಯುವಕ!
ನೆಚ್ಚಿನ ಹಸುವಿನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಅಚರಿಸಿದ ಯುವಕ!
KUSHAL V
|

Updated on:Feb 26, 2021 | 11:08 PM

Share

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದಲ್ಲಿ ಯುವಕನೊಬ್ಬ ತನ್ನ ನೆಚ್ಚಿನ ಹಸುವಿನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾನೆ. ಧೃವರಾಜ್‌ ಎಂಬ ಯುವಕ ತನ್ನ ಪ್ರೀತಿಯ ಹಸುವಾದ ಚಿನ್ಮಯಿಯ ಮೂರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದಾನೆ.

ಕೇಕ್ ಕಟ್ ಮಾಡಿ 3ನೇ ವರ್ಷದ ಹುಟ್ಟುಹಬ್ಬ ಆಚರಣೆ ಮಾಡಿದ ಧೃವರಾಜ್​ ಮತ್ತು ಆತನ ಸ್ನೇಹಿತರು ಹಸುವಿನ ಜೊತೆ ಫೋಟೋಗೆ ಪೋಸ್ ಕೊಟ್ಟರು. ಅಷ್ಟೇ ಅಲ್ಲ, ಬಲೂನ್​ಗಳಿಂದ ವೇದಿಕೆಯನ್ನ ಸಿಂಗರಿಸಿದ ಧೃವರಾಜ್​ ಪಟಾಕಿ ಸಿಡಿಸಿ ಭರ್ಜರಿಯಾಗಿ ಚಿನ್ಮಯಿ ಬರ್ತ್​ಡೇಯನ್ನು ಆಚರಿಸಿದ್ದಾನೆ.

RMG COW BIRTHDAY 1

ಕೇಕ್ ಕಟ್ ಮಾಡಿ ಹಸುವಿನ 3ನೇ ವರ್ಷದ ಹುಟ್ಟುಹಬ್ಬ ಆಚರಣೆ ಮಾಡಿದ ಧೃವರಾಜ್​

RMG COW BIRTHDAY 2

ಕೇಕ್​ ಸವಿದ ಬರ್ತ್​ಡೇ ಗರ್ಲ್​ ಚಿನ್ಮಯಿ!

‘ಜಮೀನಿಗೆ ಗೋವು ಸಾಗಿಸುವ ರೈತರ ವಿರುದ್ಧ ಕ್ರಮವಿಲ್ಲ’ ಇತ್ತ, ಗೋ ಹತ್ಯೆ ಪ್ರತಿಬಂಧಕ ಕಾನೂನು ಪ್ರಶ್ನಿಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬುವವರು ಹೈಕೋರ್ಟ್​ಗೆ ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಈ ವೇಳೆ, ಸರ್ಕಾರ ಸದ್ಯದಲ್ಲೇ ನಿಯಮಾವಳಿ ಜಾರಿಗೊಳಿಸಲಿದೆ. ನಿಯಮಾವಳಿ ಜಾರಿಯಾಗುವವರೆಗೂ ಕ್ರಮವಿಲ್ಲ. ಜಾರಿವರೆಗೂ ಸೆಕ್ಷನ್‌ 5ರಡಿ ಬಲವಂತದ ಕ್ರಮವಿಲ್ಲ. ಜಮೀನಿಗೆ ಗೋವು ಸಾಗಿಸುವ ರೈತರ ವಿರುದ್ಧ ಕ್ರಮವಿಲ್ಲ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರದ ಹೇಳಿಕೆ ನೀಡಿದೆ.

ಸುಗ್ರೀವಾಜ್ಞೆ ಇದೀಗ ಕಾಯ್ದೆಯಾಗಿರುವ ಹಿನ್ನೆಲೆಯಲ್ಲಿ ಕಾಯ್ದೆ ಪ್ರಶ್ನಿಸಿ ಅರ್ಜಿ ತಿದ್ದುಪಡಿಗೆ ಅರ್ಜಿದಾರರಿಗೆ ಕಾಲಾವಕಾಶ ನೀಡಲಾಗಿದೆ. ಜೊತೆಗೆ, ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್​​ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ: ನನ್ನ ಮಕ್ಕಳು, ಮೊಮ್ಮಕ್ಕಳು BJPಯಲ್ಲೇ ಇರಬೇಕೆಂದು ವಿಲ್​ನಲ್ಲಿ ಬರೆದಿಟ್ಟು ಬಿಡುತ್ತೇನೆ -ಸಚಿವ ನಾರಾಯಣಗೌಡ

Published On - 10:49 pm, Fri, 26 February 21

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ