AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಆರ್ಭಟದ ನಡುವೆಯೂ ಚಿಣ್ಣರ ಮೋಜು ಮಸ್ತಿ, ಯುವಕರ Stunts!

[lazy-load-videos-and-sticky-control id=”69BueS3J-fY”] ಬೆಂಗಳೂರು: ಮಳೆರಾಯನ ಅವಾಂತರಕ್ಕೆ ರಾಜ್ಯದ ಹಲವು ಭಾಗಗಳು ನಲುಗಿ ಹೋಗಿದೆ. ಆದರೆ, ಈ ನಡುವೆ ಕೆಲವು ಯುವಕರು ಹಾಗೂ ಚಿಣ್ಣರು ಮಳೆಯಲ್ಲಿ ಮೋಜು ಮಸ್ತಿ ಮಾಡಲು ಸಹ ಮುಂದಾಗಿದ್ದಾರೆ. ನೇತ್ರಾವತಿ‌ ನದಿಯಲ್ಲಿ ಯುವಕರ ಮೋಜು ಮಸ್ತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ‌ ನದಿಯ ಹರಿವು ಕೊಂಚ ಕಡಿಮೆಯಾಗಿದೆ. ಆದ್ದರಿಂದ ಬಂಟ್ವಾಳದ ಕೆಲ ಯುವಕರು ಸಂದರ್ಭ ಬಳಸಿಕೊಂಡು ಮೋಜು ಮಸ್ತಿಯಲ್ಲಿ ತೊಡಗಿಕೊಂಡರು. ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಜಲ‌ ಸಾಹಸಕ್ಕೆ […]

ಮಳೆರಾಯನ ಆರ್ಭಟದ ನಡುವೆಯೂ ಚಿಣ್ಣರ ಮೋಜು ಮಸ್ತಿ, ಯುವಕರ Stunts!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 09, 2020 | 2:35 PM

[lazy-load-videos-and-sticky-control id=”69BueS3J-fY”]

ಬೆಂಗಳೂರು: ಮಳೆರಾಯನ ಅವಾಂತರಕ್ಕೆ ರಾಜ್ಯದ ಹಲವು ಭಾಗಗಳು ನಲುಗಿ ಹೋಗಿದೆ. ಆದರೆ, ಈ ನಡುವೆ ಕೆಲವು ಯುವಕರು ಹಾಗೂ ಚಿಣ್ಣರು ಮಳೆಯಲ್ಲಿ ಮೋಜು ಮಸ್ತಿ ಮಾಡಲು ಸಹ ಮುಂದಾಗಿದ್ದಾರೆ. ನೇತ್ರಾವತಿ‌ ನದಿಯಲ್ಲಿ ಯುವಕರ ಮೋಜು ಮಸ್ತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ‌ ನದಿಯ ಹರಿವು ಕೊಂಚ ಕಡಿಮೆಯಾಗಿದೆ. ಆದ್ದರಿಂದ ಬಂಟ್ವಾಳದ ಕೆಲ ಯುವಕರು ಸಂದರ್ಭ ಬಳಸಿಕೊಂಡು ಮೋಜು ಮಸ್ತಿಯಲ್ಲಿ ತೊಡಗಿಕೊಂಡರು.

ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಜಲ‌ ಸಾಹಸಕ್ಕೆ ಮುಂದಾದರು. ಜಿಲ್ಲೆಯಲ್ಲಿ ಇಂದು ಕೂಡಾ ರೆಡ್ ಅಲರ್ಟ್ ಇದ್ದು ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಆದರೂ ಹದಿಹರೆಯದ ಬಿಸಿರಕ್ತದ ಯುವಕರು ಮಾತ್ರ ನೀರಗೆ ಡೈವ್​ ಹೊಡೆಯುತ್ತಾ ಮಜಾ ಮಾಡಿದರು.

ಬಾಲಿವುಡ್​ ಹಾಡಿಗೆ ನದಿಗೆ ಡೈವ್​ ಹೊಡೆದ ಯುವಕ ಇನ್ನು ಇತ್ತ ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲೂ ಯುವಕನೊಬ್ಬನ ಹುಚ್ಚು ಸಾಹಸ ಬೆಳಕಿಗೆ ಬಂದಿದೆ. ಘಟಪ್ರಭಾ ನದಿ ಪ್ರವಾಹದಲ್ಲೂ ಯುವಕ ಹುಚ್ಚು ಸಾಹಸಕ್ಕೆ ಮುಂದಾಗಿದ್ದಾನೆ. ಬಾಲಿವುಡ್​ನ ಹಿಂದಿ ಹಾಡಿಗೆ ನದಿಗೆ ಡೈವ್​ ಹೊಡೆದ ಯುವಕ ತನ್ನ ಕಪಿಚೇಷ್ಟೆಯ ವಿಡಿಯೋ ಬೇರೆ ತೆಗೆದಿದ್ದಾನೆ. ಇದೀಗ ಈ ವಿಡಿಯೊ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ.

ಸ್ಲೋ‌ಮೋಷನ್ ವಿಡಿಯೊ ತೆಗೆದಿರುವ ಯುವಕ ಜಿಲ್ಲೆಯ ಮುಧೋಳ -ಯಾದವಾಡ ಘಟಪ್ರಭಾ ಸೇತುವೆ ಮೇಲಿಂದ ಜಂಪ್‌ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಯುವಕನ ವಿಡಿಯೋ ವೈರಲ್​ ಆಗ್ತಿದ್ದಂತೆ ಪೊಲೀಸರು ಅವನನ್ನ ಹಿಡಿಯಲು ಮುಂದಾಗಿದ್ದಾರಂತೆ.

ಹೆದ್ದಾರಿ ಬಂದ್​, ಚಿಣ್ಣರ ಮೋಜು ಮಸ್ತಿ ಶುರು ಇನ್ನು ಮೈಸೂರಿನ ಊಟಿ ಹೆದ್ದಾರಿಯಲ್ಲಿ ಮಕ್ಕಳ ಮೋಜಿನಾಟ ನೋಡಲು ಬಲು ಚಂದವಾಗಿತ್ತು. ಪ್ರವಾಹದಿಂದ ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ನೀರು ಹರಿದು ಬಂದು ಹೆದ್ದಾರಿ ಜಲಾವೃತಗೊಂಡಿದೆ. ಹೀಗಾಗಿ, ಆಡಳಿತದಿಂದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾಗಿ, ಯಾವುದೇ ಆತಂಕ ಇಲ್ಲದೆ ಪುಟಾಣಿಗಳು ಬಿಂದಾಸ್​ ಆಗಿ, ನೀರಿನಲ್ಲಿ ಆಟವಾಡುತ್ತಾ ಸಂಭ್ರಮಿಸಿದರು.

https://www.facebook.com/Tv9Kannada/posts/1410794279122798

Published On - 2:28 pm, Sun, 9 August 20

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ