AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ: ಸಚಿವ ಶರಣ ಪ್ರಕಾಶ್ ಪಾಟೀಲ್

ರಾಜ್ಯ ಕಾಂಗ್ರೆಸ್​ ಸರ್ಕಾರದ ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ "ಯುವ ನಿಧಿ" ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ. ಈ ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ.

ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ: ಸಚಿವ ಶರಣ ಪ್ರಕಾಶ್ ಪಾಟೀಲ್
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್
ವಿವೇಕ ಬಿರಾದಾರ
|

Updated on:Jan 10, 2024 | 7:35 AM

Share

ಬೆಂಗಳೂರು, ಜನವರಿ 10: ರಾಜ್ಯ ಕಾಂಗ್ರೆಸ್​ ಸರ್ಕಾರದ (Congress Government) ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ “ಯುವ ನಿಧಿ” (Yuva Nidhi) ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ.

ಇನ್ನು ಈ ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ. ಕೌಶಲ್ಯವಂತರಾಗಿ ಅವರು ಉದ್ಯೋಗದಲ್ಲಿ ತೊಡಗಿಸಿಕೊಂಡರೇ, ಅವರಿಗೆ ನಾವು ಮಾಸಿಕ ಹಣ ನೀಡಬೇಕಾಗುವುದಿಲ್ಲ. ಈ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಮುಂದೆ ಬರುವ ಕಂಪನಿಗಳತ್ತ ನಾವು ಗಮನ ಹರಿಸಿದ್ದೇವೆ. ಈ ಸಂಬಂಧ ಹೊಸ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ತರಬೇತಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ದಿ ನ್ಯೂ ಇಂಡಿಯನ್​ ಎಕ್ಸಪ್ರೆಸ್​ ಖಾಸಗಿ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಯುವ ನಿಧಿ ಯೋಜನೆಯ ಫಲಾನುಭವಿಗಳು ಸರ್ಕಾರದ ಸ್ಕಿಲ್ ಕನೆಕ್ಟ್ ಪೋರ್ಟಲ್​ನಲ್ಲಿ ನೋಂದಣಿಯಾಗಿರುತ್ತಾರೆ. ನಂತರ ಅವರನ್ನು ಕೌಶಲ್ಯವಂತರನ್ನಾಗಿಸಿ, ಉದ್ಯೋಗ ಕೊಡಿಸಲಾಗುತ್ತದೆ. ಜೊತೆಗೆ ಸ್ಕಿಲ್​ ಕೌನ್ಸಿಲ್​ ರಚಿಸಲಾಗಿದ್ದು, ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರದವರು ಅದರಲ್ಲಿ ಇದ್ದಾರೆ. ಬೇರೆ ಯಾವೆಲ್ಲ ಕ್ಷೇತ್ರದಲ್ಲಿ ಕೌಶಲ್ಯ ನೀಡಬುದಹು ಎಂಬ ಬಗ್ಗೆ ಅವರು ಸಲಹೆ ನೀಡುತ್ತಾರೆ ಎಂದರು.

ಇದನ್ನೂ ಓದಿ: ಯುವ ನಿಧಿ ಗ್ಯಾರಂಟಿ ಜಾರಿಗೆ ದಿನಗಣನೆ: ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ಯೋಜನೆಗೆ ಈಗಾಗಲೇ 50 ಸಾವಿರಕ್ಕೂ ಹೆಚ್ಚು ಪದವೀಧರರು ನೋಂದಣಿಯಾಗಿದ್ದಾರೆ. ಒಂದು ಸಕಾರಾತ್ಮಕ ವಿಷಯವೆಂದರೆ ರಾಷ್ಟ್ರೀಯ ಶೈಕ್ಷಣಿಕ ಠೇವಣಿ (NAD) 2022-23 ಪದವೀಧರರ ಸುಮಾರು 4.12 ಲಕ್ಷ ಪ್ರಮಾಣಪತ್ರಗಳನ್ನು ಠೇವಣಿ ಮಾಡಿದೆ. ಇದು ನೋಂದಣಿ ಪ್ರಕ್ರಿಯೆಗೆ ಸಹಾಯಕವಾಗಿದೆ. ಯುವನಿಧಿಗೆ ಒಟ್ಟು 5.29 ಲಕ್ಷ ಫಲಾನುಭವಿಗಳು ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.

ಈ ಯೋಜನೆಯು ವಿದ್ಯಾರ್ಥಿಯ ಫಲಿತಾಂಶದ ದಿನಾಂಕದಿಂದ ಆರು ತಿಂಗಳವರೆಗೆ ಅನ್ವಯಿಸುತ್ತದೆ. ಉದಾಹರಣೆಗೆ: BSc ಫಲಿತಾಂಶ ಇಂದು ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಆರು ತಿಂಗಳ ನಂತರ ಆ ವಿದ್ಯಾರ್ಥಿ ಯೋಜನೆಗೆ ಅರ್ಹನಾಗುತ್ತೇನೆ. ಆದ್ದರಿಂದ, ಅವರು ಕಾಲಾವಧಿಯಲ್ಲಿ ಅರ್ಹರಾಗುತ್ತಾರೆ ಮತ್ತು ಅವರು ಅರ್ಹತೆ ಪಡೆದಾಗ ಯೋಜನೆಯ ಪ್ರಯೋಜನೆ ಪಡೆಯುತ್ತಾರೆ ಎಂದು ಹೇಳಿದರು.

ಸದ್ಯ 50,000 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದಿನಕಳೆದಂತೆ ಈ ಸಂಖ್ಯೆ ಹೆಚ್ಚುತ್ತದೆ. ನಾವು ಪ್ರತಿದಿನ 4,000-5,000 ದಾಖಲಾತಿಯನ್ನು ನಿರೀಕ್ಷಿಸುತ್ತೇವೆ. ಯೋಜಿತ ಸಂಖ್ಯೆಯ ಫಲಾನುಭವಿಗಳನ್ನು ತಲುಪಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. 2022-23ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಯುವ ನಿಧಿಗೆ ಅರ್ಹರು ಎಂಬುದು ಕ್ಯಾಬಿನೆಟ್​ನಲ್ಲಿ ನಿರ್ಧರಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Wed, 10 January 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್