AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ: ಸಚಿವ ಶರಣ ಪ್ರಕಾಶ್ ಪಾಟೀಲ್

ರಾಜ್ಯ ಕಾಂಗ್ರೆಸ್​ ಸರ್ಕಾರದ ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ "ಯುವ ನಿಧಿ" ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ. ಈ ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ.

ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ: ಸಚಿವ ಶರಣ ಪ್ರಕಾಶ್ ಪಾಟೀಲ್
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್
Follow us
ವಿವೇಕ ಬಿರಾದಾರ
|

Updated on:Jan 10, 2024 | 7:35 AM

ಬೆಂಗಳೂರು, ಜನವರಿ 10: ರಾಜ್ಯ ಕಾಂಗ್ರೆಸ್​ ಸರ್ಕಾರದ (Congress Government) ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ “ಯುವ ನಿಧಿ” (Yuva Nidhi) ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ.

ಇನ್ನು ಈ ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ. ಕೌಶಲ್ಯವಂತರಾಗಿ ಅವರು ಉದ್ಯೋಗದಲ್ಲಿ ತೊಡಗಿಸಿಕೊಂಡರೇ, ಅವರಿಗೆ ನಾವು ಮಾಸಿಕ ಹಣ ನೀಡಬೇಕಾಗುವುದಿಲ್ಲ. ಈ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಮುಂದೆ ಬರುವ ಕಂಪನಿಗಳತ್ತ ನಾವು ಗಮನ ಹರಿಸಿದ್ದೇವೆ. ಈ ಸಂಬಂಧ ಹೊಸ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ತರಬೇತಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ದಿ ನ್ಯೂ ಇಂಡಿಯನ್​ ಎಕ್ಸಪ್ರೆಸ್​ ಖಾಸಗಿ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಯುವ ನಿಧಿ ಯೋಜನೆಯ ಫಲಾನುಭವಿಗಳು ಸರ್ಕಾರದ ಸ್ಕಿಲ್ ಕನೆಕ್ಟ್ ಪೋರ್ಟಲ್​ನಲ್ಲಿ ನೋಂದಣಿಯಾಗಿರುತ್ತಾರೆ. ನಂತರ ಅವರನ್ನು ಕೌಶಲ್ಯವಂತರನ್ನಾಗಿಸಿ, ಉದ್ಯೋಗ ಕೊಡಿಸಲಾಗುತ್ತದೆ. ಜೊತೆಗೆ ಸ್ಕಿಲ್​ ಕೌನ್ಸಿಲ್​ ರಚಿಸಲಾಗಿದ್ದು, ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರದವರು ಅದರಲ್ಲಿ ಇದ್ದಾರೆ. ಬೇರೆ ಯಾವೆಲ್ಲ ಕ್ಷೇತ್ರದಲ್ಲಿ ಕೌಶಲ್ಯ ನೀಡಬುದಹು ಎಂಬ ಬಗ್ಗೆ ಅವರು ಸಲಹೆ ನೀಡುತ್ತಾರೆ ಎಂದರು.

ಇದನ್ನೂ ಓದಿ: ಯುವ ನಿಧಿ ಗ್ಯಾರಂಟಿ ಜಾರಿಗೆ ದಿನಗಣನೆ: ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ಯೋಜನೆಗೆ ಈಗಾಗಲೇ 50 ಸಾವಿರಕ್ಕೂ ಹೆಚ್ಚು ಪದವೀಧರರು ನೋಂದಣಿಯಾಗಿದ್ದಾರೆ. ಒಂದು ಸಕಾರಾತ್ಮಕ ವಿಷಯವೆಂದರೆ ರಾಷ್ಟ್ರೀಯ ಶೈಕ್ಷಣಿಕ ಠೇವಣಿ (NAD) 2022-23 ಪದವೀಧರರ ಸುಮಾರು 4.12 ಲಕ್ಷ ಪ್ರಮಾಣಪತ್ರಗಳನ್ನು ಠೇವಣಿ ಮಾಡಿದೆ. ಇದು ನೋಂದಣಿ ಪ್ರಕ್ರಿಯೆಗೆ ಸಹಾಯಕವಾಗಿದೆ. ಯುವನಿಧಿಗೆ ಒಟ್ಟು 5.29 ಲಕ್ಷ ಫಲಾನುಭವಿಗಳು ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.

ಈ ಯೋಜನೆಯು ವಿದ್ಯಾರ್ಥಿಯ ಫಲಿತಾಂಶದ ದಿನಾಂಕದಿಂದ ಆರು ತಿಂಗಳವರೆಗೆ ಅನ್ವಯಿಸುತ್ತದೆ. ಉದಾಹರಣೆಗೆ: BSc ಫಲಿತಾಂಶ ಇಂದು ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಆರು ತಿಂಗಳ ನಂತರ ಆ ವಿದ್ಯಾರ್ಥಿ ಯೋಜನೆಗೆ ಅರ್ಹನಾಗುತ್ತೇನೆ. ಆದ್ದರಿಂದ, ಅವರು ಕಾಲಾವಧಿಯಲ್ಲಿ ಅರ್ಹರಾಗುತ್ತಾರೆ ಮತ್ತು ಅವರು ಅರ್ಹತೆ ಪಡೆದಾಗ ಯೋಜನೆಯ ಪ್ರಯೋಜನೆ ಪಡೆಯುತ್ತಾರೆ ಎಂದು ಹೇಳಿದರು.

ಸದ್ಯ 50,000 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದಿನಕಳೆದಂತೆ ಈ ಸಂಖ್ಯೆ ಹೆಚ್ಚುತ್ತದೆ. ನಾವು ಪ್ರತಿದಿನ 4,000-5,000 ದಾಖಲಾತಿಯನ್ನು ನಿರೀಕ್ಷಿಸುತ್ತೇವೆ. ಯೋಜಿತ ಸಂಖ್ಯೆಯ ಫಲಾನುಭವಿಗಳನ್ನು ತಲುಪಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. 2022-23ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಯುವ ನಿಧಿಗೆ ಅರ್ಹರು ಎಂಬುದು ಕ್ಯಾಬಿನೆಟ್​ನಲ್ಲಿ ನಿರ್ಧರಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Wed, 10 January 24

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?