AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ, ಜಮೀರ್ ಘೋಷಣೆ

ತಮ್ಮ ಅಲ್ಪಸಂಖ್ಯಾತ ಸಮುದಾಯದ ಎಸ್​​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ವಿದ್ಯಾರ್ಧಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ಎಸ್​​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ವಂತ ಹಣದಿಂದಲೇ ದ್ವಿಚಕ್ರ ವಾಹನ ಕೊಡಿಸುವುದಾಗಿ ಘೋಷಣೆ ಮಾಡಿದ್ದಾರೆ.

SSLC, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ, ಜಮೀರ್ ಘೋಷಣೆ
ಜಮೀರ್ ಅಹ್ಮದ್ ಖಾನ್
ಪ್ರಸನ್ನ ಗಾಂವ್ಕರ್​
| Edited By: |

Updated on: Jul 29, 2024 | 6:24 PM

Share

ಬೆಂಗಳೂರು, (ಜುಲೈ 29): ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಎಸ್​ಎಸ್​ಎಲ್​ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜನ್ಸಿಗಳ ಮೂಲಕ ಅರ್ಹ ವಿಧ್ಯಾರ್ಥಿಗಳ ಮನೆಗಳಿಗೆ ವಾಹನ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.

ಎಷ್ಟು ದಿನ ನಾನು ಸಚಿವನಾಗಿ ಇರುತ್ತೇನೋ ಇಲ್ವೋ ಗೊತ್ತಿಲ್ಲ. ನಾನು ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ಯಾಕಂದ್ರೆ ದೇವರು ಹಣೆ ಬರಹ ಬರೆದಿರುತ್ತಾನೆ. ಮುಂದೆ ನಾನು ಮಂತ್ರಿ ಆಗ್ತಿನೋ, ಇರ್ತಿನೋ ಗೊತ್ತಿಲ್ಲ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಮಂತ್ರಿ ಆಗಿ ಇರ್ತಿನಿ ಅನ್ನೋ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಈ ಮೂಲಕ ಜಮೀರ್ ಸಂಪುಟ ಸರ್ಜರಿ ಹಾಗೂ ಖಾತೆ ಬದಲಾವಣೆ ವಿಚಾರಕ್ಕೆ ಪುಷ್ಟಿ ನೀಡಿದ್ದಾರೆ.

ಇದನ್ನೂ ಓದಿ: ಸಂಪ್ರದಾಯಕ್ಕೆ ಎಳ್ಳು-ನೀರು: ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ

ಸಚಿವ ಜಮೀರ್ ಅಹ್ಮದ್ ಹೇಳಿಕೆ ಯಾವ ಹಗರಣವೂ ಇಲ್ಲ, ಬಿಜೆಪಿ ಅವರಿಗೆ ಇಶ್ಯೂ ಇಲ್ಲ. ಹೀಗಾಗಿ ಇಶ್ಯೂ ಮಾಡುವುದಕ್ಕೆ ಹೊರಟ್ಟಿದ್ದಾರೆ. ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಕ್ಲಾರಿಫಿಕೇಶನ್ ನೀಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಪಾತ್ರ ಏನಿದೆ? ಯಾವುದೋ ದೇವರಾಜ್ ಕಡೆಯಿಂದ ಬಾಮೈದ ಕೊಂಡುಕೊಂಡಿದ್ದಾರೆ . ಬಾಮೈದ ಅವರ ಅಕ್ಕನಿಗೆ ಗಿಫ್ಟ್ ಮಾಡಿದ್ದಾರೆ. ಅವರದೇ ಸೈಟಿನಲ್ಲಿ ಮೂಡ ಲೇಔಟ್ ಮಾಡಿದೆ. ಸಿದ್ದರಾಮಯ್ಯನವರು ಸೈಟ್ ಹಂಚಿಕೆ ಮಾಡಿದ್ದಾರಾ? ಮುಖ್ಯಮಂತ್ರಿ ಇರುವಾಗ ಕೊಟ್ರಾ? ಬಿಜೆಪಿ ಸರ್ಕಾರ ಇರುವಾಗ ಕೊಟ್ಟಿದ್ದು ಸೈಟು. ಬಿಜೆಪಿ ಸರ್ಕಾರದಲ್ಲಿ ಕೊಟ್ಟಿದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸೈಟ್ ಕೊಟ್ಟಿದ್ದಲ್ಲ ಎಂದು ಸಮಜಾಯಿಷಿ ನೀಡಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ ಯಾವತ್ತೂ ಸಿಎಂ ಆಗುವ ಅವಕಾಶ ಸಿಗಲ್ಲ ಎಂದು ಬಿಜೆಪಿಗೂ ಕುಮಾರಸ್ವಾಮಿಗೂ ಗೊತ್ತು . ಏನೋ ಅವಕಾಶ ಸಿಕ್ಕಿದೆ, ಕೆಣಕಬೇಕು ಎಂದು ಕೆಣಕುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ ಜೀವನದಲ್ಲೇ ಇನ್ನು ಮುಂದೆ ಬರೋಕೆ ಆಗಲ್ಲ ಅನ್ನೋ ಕಾರಣಕ್ಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅವರು ಇದರಲ್ಲಿ ಯಾಕೆ ಕೈ ಜೋಡಿಸುತ್ತಾರೆ? ನಮ್ಮ ಪಕ್ಷ ಹೈಕಮಾಂಡ್ ಪಕ್ಷ. ಹೈಕಮಾಂಡ್ ಏನ್ ತೀರ್ಮಾನ ಮಾಡತ್ತು ನಾವು ಯಾರು ಏನು ಮಾಡಕ್ಕಾಗಲ್ಲ . ಕೇಂದ್ರ ಸರ್ಕಾರದವರು ನಮಗೆ ಏನು ದುಡ್ಡು ಕೊಡಬೇಕು ಕೊಡ್ಲಿ, ಅದು ಕೊಟ್ಟು ಬಿಡ್ಲಿ ಎಲ್ಲ ಸರಿ ಹೋಗ್ಬಿಡುತ್ತೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಇದ್ದಾರೆ. ಈಗ ಮುಖ್ಯಮಂತ್ರಿ ಯಾವುದು ಖಾಲಿ ಇಲ್ಲ. ಮುಖ್ಯಮಂತ್ರಿ ಕುರ್ಚಿ ಕಾಲಿ ಇದ್ದರೆ ತಾನೆ ಚರ್ಚೆ ಮಾಡಬೇಕಾಗಿರುವುದು. ಈಗ ಮುಖ್ಯಮಂತ್ರಿ ಜಾಗದಲ್ಲಿ ಸಿದ್ದರಾಮಯ್ಯ ಇದ್ದಾರೆ , ನಮ್ಮ ಪಕ್ಷ ಹೈಕಮಾಂಡ್ ಪಕ್ಷ ಹೈಕಮಾಂಡ್ ಗೆರೆ ಹಾಕಿದರೆ ಆ ಗೆರೆ ನಾವೆಲ್ಲ ದಾಟುವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ