AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಮೀರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು: ಎಐಸಿಸಿ ಅಧ್ಯಕ್ಷರಿಗೆ ದೂರು

ಕಾಂಗ್ರೆಸ್ ಶಾಸಕರು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ವಕ್ಫ್ ವಿಚಾರದಲ್ಲಿ ಜಮೀರ್ ಅವರ ಹೇಳಿಕೆಗಳು ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಪತ್ರದಲ್ಲೇನಿದೆ ಎಂಬ ವಿವರ ಇಲ್ಲಿದೆ.

ಸಚಿವ ಜಮೀರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು: ಎಐಸಿಸಿ ಅಧ್ಯಕ್ಷರಿಗೆ ದೂರು
ಜಮೀರ್ ಅಹ್ಮದ್
ಪ್ರಸನ್ನ ಗಾಂವ್ಕರ್​
| Edited By: |

Updated on: Nov 05, 2024 | 2:10 PM

Share

ಬೆಂಗಳೂರು, ನವೆಂಬರ್ 5: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೀಗ ಕಾಂಗ್ರೆಸ್ ಶಾಸಕರು, ಪಕ್ಷದ ಪದಾಧಿಕಾರಿಗಳೇ ಸಿಡಿದೆದ್ದಿದ್ದಾರೆ. ಇದರೊಂದಿಗೆ ಜಮೀರ್ ಅಹ್ಮದ್ ಸ್ವಪಕ್ಷ, ಪ್ರತಿಕ್ಷಗಳ ಕೆಂಗಣ್ಣಿಗೆ ಗುರಿಯಾದಂತಾಗಿದೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇದೀಗ ಕಾಂಗ್ರೆಸ್ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್​​ರನ್ನೇ ಗುರಿಯಾಗಿಸಿಕೊಂಡಿದ್ದಾರೆ. ಇತ್ತ ಆಡಳಿತ ಪಕ್ಷದ ಒಳಗೂ ಜಮೀರ್ ವಿರುದ್ಧ ಮೇಲ್ವರ್ಗದ ಶಾಸಕರು, ಸಚಿವರಿಂಧ ಬೇಸರ ವ್ಯಕ್ತವಾಗಿದೆ.

ವಕ್ಫ್​​ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈಗಿನ ಬೆಳವಣಿಗೆಗಳಿಗೆಲ್ಲ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮೀರ್ ಹೇಳಿಕೆಗಳಿಗೆ ಕಡಿವಾಣ ಹಾಕಲು ಆಗ್ರಹ

ಸದ್ಯ ಉಪಚುನಾವಣೆಗೆ ಸಜ್ಜಾಗಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ತಾನೇ ಮುಂದೆ ನಿಂತು ಓಡಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜಮೀರ್ ವಿರುದ್ಧ ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ ಕೈ ಶಾಸಕರು, ಜಮೀರ್ ಹೇಳಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಶಾಸಕರ ಪತ್ರದಲ್ಲೇನಿದೆ?

ಜಮೀರ್ ಅಹ್ಮದ್ ಪದೇ ಪದೇ ಸರ್ಕಾರಕ್ಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ, ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ. ಶಿಗ್ಗಾವಿ ಉಪಚುನಾವಣೆ ಅಭ್ಯರ್ಥಿ ವಿಷಯವಾಗಿಯೂ ಅನಗತ್ಯ ಗೊಂದಲ ಸೃಷ್ಟಿ ಮಾಡಿದ್ದರು. ನಮ್ಮಲ್ಲಿ ಸಾಕಷ್ಟು ಅಲ್ಪಸಂಖ್ಯಾತ ಶಾಸಕರಿದ್ದಾರೆ, ಆದರೆ ಜಮೀರ್ ಮಾತ್ರ ವಿಶೇಷವಾಗಿ ನಡೆದುಕೊಳ್ಳುತ್ತಿದ್ದಾರೆ. ತಾವು ಮಧ್ಯಪ್ರವೇಶಿಸಿ ಜಮೀರ್ ಹೇಳಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದೆ ಪಕ್ಷ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ ಎಂದು ಖರ್ಗೆಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಶಾಸಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮತಾಂಧ ಜಮೀರ್ ತಾನು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಮಂತ್ರಿ ಅಂದುಕೊಂಡಂತಿದೆ: ರೇಣುಕಾಚಾರ್ಯ

ಕಾಂಗ್ರೆಸ್ ಶಾಸಕರು ಬರೆದಿರವುದು ಎನ್ನಲಾದ ಪತ್ರ ಪ್ರತಿಯೊಂದು ಸದ್ಯ ವಾಟ್ಸ್​ಆ್ಯಪ್ ಗ್ರೂಪ್​ಗಳಲ್ಲಿ ಹರಿದಾಡುತ್ತಿದೆ. ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಮತ್ತು ವಕ್ಫ್ ವಿವಾದ ವಿಚಾರವಾಗಿ ಜಮೀರ್ ಅಹ್ಮದ್ ಕಳೆದ ಕೆಲವು ದಿನಗಳಲ್ಲಿ ನೀಡಿರುವ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಈ ವಿಚಾರವನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್