ರಾಜ್ಯದ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಶೂನ್ಯ ಬಡ್ಡಿ ದರದಲ್ಲಿ ಸಾಲ

ಬೆಂಗಳೂರು: ಕೊರೊನಾ ಪೀಡೆಯಿಂದ ನರಳುತ್ತಿರುವ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಸೂಚಿಸಲಾಗಿದೆ. ಸಹಕಾರ ಸಂಸ್ಥೆಗಳಿಂದ ₹3 ಲಕ್ಷದವರೆಗೆ ಅಲ್ಪಾವಧಿ ಸಾಲ ನೀಡಲು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ 3 ಲಕ್ಷದ ವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಸಿಗಲಿದೆ. ಅಲ್ಪಾವಧಿ ಕೃಷಿ ಸಾಲ ನೀಡಲು ಸರ್ಕಾರದ ಆದೇಶ ನೀಡಿದೆ. ಕೃಷಿ ಪತ್ತಿನ ಸಹಕಾರಿ ಸಂಘ, ಕೇಂದ್ರ ಸಹಕಾರಿ […]

ರಾಜ್ಯದ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಶೂನ್ಯ ಬಡ್ಡಿ ದರದಲ್ಲಿ ಸಾಲ
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಆಯೇಷಾ ಬಾನು

Updated on: May 22, 2020 | 12:50 PM

ಬೆಂಗಳೂರು: ಕೊರೊನಾ ಪೀಡೆಯಿಂದ ನರಳುತ್ತಿರುವ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಸೂಚಿಸಲಾಗಿದೆ.

ಸಹಕಾರ ಸಂಸ್ಥೆಗಳಿಂದ ₹3 ಲಕ್ಷದವರೆಗೆ ಅಲ್ಪಾವಧಿ ಸಾಲ ನೀಡಲು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ 3 ಲಕ್ಷದ ವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಸಿಗಲಿದೆ. ಅಲ್ಪಾವಧಿ ಕೃಷಿ ಸಾಲ ನೀಡಲು ಸರ್ಕಾರದ ಆದೇಶ ನೀಡಿದೆ. ಕೃಷಿ ಪತ್ತಿನ ಸಹಕಾರಿ ಸಂಘ, ಕೇಂದ್ರ ಸಹಕಾರಿ ಬ್ಯಾಂಕ್, ಪಿಕಾರ್ಡ್​ ಬ್ಯಾಂಕ್​ಗಳ ಮೂಲಕ ಸಾಲ ಸಿಗಲಿದೆ.

Published On - 10:54 am, Fri, 22 May 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us