AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಸಚಿವ ಕೆಎಸ್ ಈಶ್ವರಪ್ಪ

ಕ್ಷೇತ್ರಗಳ ಪುನರ್​ವಿಂಗಡನೆ ಪ್ರಕ್ರಿಯೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಗಡಿ ಮಾತ್ರ ಬದಲಾವಣೆ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಸಚಿವ ಕೆಎಸ್ ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ
TV9 Web
| Edited By: |

Updated on:Dec 30, 2021 | 9:17 PM

Share

ಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ಅಂದರೆ, 2022ರ ಮಾರ್ಚ್​ ತಿಂಗಳ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಕ್ಷೇತ್ರಗಳ ಪುನರ್​ವಿಂಗಡನೆ ಪ್ರಕ್ರಿಯೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಗಡಿ ಮಾತ್ರ ಬದಲಾವಣೆ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ನರೇಗಾ ಯೋಜನೆಯಡಿ 2021-22ನೇ ಸಾಲಿನಲ್ಲಿ ನೀಡಿದ್ದ 13 ಕೋಟಿ ಮಾನವ ದಿನದ ಗುರಿಯನ್ನು ಮೀರಿ ಕರ್ನಾಟಕದಲ್ಲಿ ಉದ್ಯೋಗ ಸೃಜನೆಯಾಗಿದೆ. ಈವರೆಗೆ ₹ 13.14 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆಯಾಗಿದೆ. ಸರ್ಕಾರದ ಬೇಡಿಕೆ ಪರಿಗಣಿಸಿ ಉದ್ಯೋಗ ಸೃಜನೆಗೆ ಅವಕಾಶ ನೀಡಲಾಗಿದೆ. ಈ ಸಾಲಿನಲ್ಲಿ ₹ 1.40 ಕೋಟಿ ಉದ್ಯೋಗ ಸೃಜನೆಗೆ ಕೇಂದ್ರವು ಒಪ್ಪಿಗೆ ನೀಡಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿ ₹ 715 ಕೋಟಿ ಅನುದಾನ ಲಭ್ಯವಾಗಿದೆ. ಈ ವರ್ಷ ₹ 10.68 ಲಕ್ಷ ಜನರು ಯೋಜನೆಗೆ ಸೇರ್ಪಡೆಯಾಗಿದ್ದಾರೆ ಎಂದು ನುಡಿದರು.

ಜಲಶಕ್ತಿ ಅಭಿಯಾನದಲ್ಲಿ $ 4.87 ಲಕ್ಷ ಮೊತ್ತದ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ಮುಗಿಸುವ ವೇಗದಲ್ಲಿ ಕರ್ನಾಟಕವು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ, ಕೊಪ್ಪಳ, ಕಲಬುರಗಿಯಲ್ಲಿ ಜಲಶಕ್ತಿ ಅಭಿಯಾನದಲ್ಲಿ ಹೆಚ್ಚು ಕಾಮಗಾರಿ ನಡೆದಿದೆ.

ದೇಗುಲಗಳನ್ನು ಕಟ್ಟುಪಾಡುಗಳಿಂದ ಮುಕ್ತಗೊಳಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಗುಲದಲ್ಲಿ ಹಣ ಇದ್ದರೂ ದೇಗುಲಕ್ಕೆ ಬಳಸಲು ಅವಕಾಶವಿಲ್ಲ. ಸರ್ಕಾರ ಆ ಹಣಕ್ಕೆ ಕೈಹಾಕದೆ ಭಕ್ತರು ಆಯ್ಕೆ ಮಾಡುವ ಸಮಿತಿಗೆ ಹಣ ಬಳಕೆಯ ವಿವೇಚನೆ ಸಿಗುವಂತೆ ಆಗಬೇಕು. ಸಮಿತಿಗಳಿಗೆ ಹೆಚ್ಚು ಅಧಿಕಾರ ಕೊಡುವ ವ್ಯವಸ್ಥೆಯನ್ನು ನಾವು ರೂಪಿಸುತ್ತೇವೆ. ದೇವಾಲಯದ ಹಣವನ್ನು ಬೇರೆ ಕೆಲಸಗಳಿಗೆ ಬಳಸಲು ಸಾಧ್ಯವಾಗದಂಥ ನೀತಿಯನ್ನು ಇನ್ನಷ್ಟೇ ನಿರೂಪಿಸಬೇಕಿದೆ ಎಂದರು. ಸರ್ಕಾರದ ಉಸ್ತುವಾರಿ ಇದ್ದೇ ಇರುತ್ತದೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಪಕ್ಷದ ವರಿಷ್ಠರು ಸೂಚಿಸಿದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದರು ಹಿರಿಯ ಸಚಿವ ಈಶ್ವರಪ್ಪ ಇದನ್ನೂ ಓದಿ: ಪಕ್ಷದ ವರಿಷ್ಠರು ಸೂಚಿಸಿದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದರು ಹಿರಿಯ ಸಚಿವ ಈಶ್ವರಪ್ಪ

Published On - 9:17 pm, Thu, 30 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?