AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಹಲ್ಲೆಗೈದಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜು ಅರೆಸ್ಟ್​

ಹಿತೇಶಾ ಚಂದ್ರಾಣಿ ಎಂಬ ಯುವತಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಮಧ್ಯಾಹ್ನ ಹಸಿವಾದಾಗ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್ಕಿಂಗ್ ಮಾಡಿದ್ದಾರೆ.

ಮಹಿಳೆ ಮೇಲೆ ಹಲ್ಲೆಗೈದಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜು ಅರೆಸ್ಟ್​
ಡೆಲಿವರಿ ಬಾಯ್​ ಕಾಮರಾಜ್​-ಯುವತಿ ಹಿತೇಶಾ ಚಂದ್ರಾಣಿ
ರಾಜೇಶ್ ದುಗ್ಗುಮನೆ
|

Updated on: Mar 10, 2021 | 7:57 PM

Share

ಬೆಂಗಳೂರು: ಆನ್​ಲೈನ್​ ಮೂಲಕ ಊಟ ಆರ್ಡರ್ ಮಾಡಿದ್ದ ಯುವತಿ ಮೇಲೆ ಹಲ್ಲೆ ಮಾಡಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜ್​ ಎಂಬಾತ ಹಿತೇಶಾ ಚಂದ್ರಾಣಿ ಎಂಬ ಯುವತಿಯ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಆಘಾತಕ್ಕೊಳಗಾಗಿರುವ ಯುವತಿ ಘಟನಾವಳಿಯ ವಿವರಗಳನ್ನು ಇಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದು ಭಾರೀ ಚರ್ಚೆ ಹುಟ್ಟುಹಾಕಿತ್ತು. 

ಘಟನೆಯ ಹಿನ್ನೆಲೆ ಹಿತೇಶಾ ಚಂದ್ರಾಣಿ ಎಂಬ ಯುವತಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಮಧ್ಯಾಹ್ನ ಹಸಿವಾದಾಗ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್ಕಿಂಗ್ ಮಾಡಿದ್ದಾರೆ. ಆ್ಯಪ್​ ಲೆಕ್ಕಾಚಾರದ ಪ್ರಕಾರ 4.30ರ ಒಳಗಾಗಿ ಊಟ ತಲುಪಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಆಹಾರ ಬಾರದಿದ್ದಾಗ ಯುವತಿ ಗ್ರಾಹಕ ಸೇವಾ ಕೇಂದ್ರದ ಸಿಬ್ಬಂದಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ಹೇಳಿಕೊಂಡು, ತಡವಾಗುತ್ತಿರುವ ಕಾರಣ ಆರ್ಡರ್ ಕ್ಯಾನ್ಸಲ್ ಮಾಡಬಹುದಾ ಎಂದು ಕೇಳಿದ್ದಾರೆ. ಇದೆಲ್ಲಾ ಆಗುವಾಗ ಡೆಲಿವರಿ ಬಾಯ್ ಮನೆಗೆ ಆಗಮಿಸಿದ್ದಾನೆ. ಮೊದಲೇ ತಡವಾಗಿದ್ದ ಕಾರಣ ಅಸಮಾಧಾನಗೊಂಡ ಯುವತಿ, ಜೊಮ್ಯಾಟೋ ಟೀಂ ಜೊತೆ ಮಾತಾಡಿದ್ದೇನೆ. ಈಗ ನನಗೆ ಯಾವುದೇ ಖರ್ಚಿಲ್ಲದೇ ಊಟ ಕೊಡ್ತೀರಾ? ನಿಮ್ಮ ಕಡೆಯವರಿಂದ ಉತ್ತರ ಬರುವ ತನಕ ಕಾದು ನಿಲ್ಲಲು ಸೂಚಿಸಿದ್ದಾರೆ. ಆದರೆ, ಯುವತಿ ಹೇಳುವ ಪ್ರಕಾರ ಮೊದಲೇ ಸಿಡಿಮಿಡಿ ಎನ್ನುತ್ತಿದ್ದ ಡೆಲಿವರಿ ಬಾಯ್, ಕಾಯಲು ಹೇಳಿದಾಕ್ಷಣ ಬಾಯಿಗೆ ಬಂದಂತೆ ಮಾತನಾಡಿ ನಾನೇನು ನಿಮ್ಮ ಆಳಾ? ಎಂದು ಕೂಗಾಡಿದ್ದಾನೆ. ಭಯಗೊಂಡ ಯುವತಿ ಬಾಗಿಲು ಹಾಕಿಕೊಳ್ಳಲು ಮುಂದಾದಾಗ ಜೋರಾಗಿ ಬಾಗಿಲು ತಳ್ಳಿದಾತ ಸೀದಾ ಒಳನುಗ್ಗಿ ಟೇಬಲ್ಲಿನ ಮೇಲಿಟ್ಟಿದ್ದ ಪೊಟ್ಟಣವನ್ನು ಕಿತ್ತುಕೊಂಡಿದ್ದಲ್ಲದೇ, ಮುಷ್ಠಿಯಿಂದ ಯುವತಿಯ ಮುಖಕ್ಕೆ ಬಲವಾಗಿ ಗುದ್ದಿ ಓಡಿ ಹೋಗಿದ್ದಾನೆ.

ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾದ ಯುವತಿಯ ಮೂಗಿನಿಂದ ರಕ್ತ ಸುರಿಯಲಾರಂಭಿಸಿದ್ದು, ಕಂಗಾಲಾಗಿ ಘಟನೆಯ ಬಗ್ಗೆ ವಿಡಿಯೋ ಮಾಡಿದ್ದಾರೆ. ನಂತರ ಆಸ್ಪತ್ರೆಗೂ ತೆರಳಿದ ಯುವತಿ ಚಿಕಿತ್ಸೆ ಪಡೆದಿದ್ದಾರೆ. ಯುವತಿ ವಿಡಿಯೋದಲ್ಲಿ ತಿಳಿಸಿರುವಂತೆ ಮೂಗಿನ ಮೂಳೆಗೆ ಬಲವಾದ ಹೊಡೆತ ಬಿದ್ದಿರುವ ಕಾರಣ ಅದರಲ್ಲಿ ಬಿರುಕು ಮೂಡಿದ್ದು, ಸರ್ಜರಿ ಮಾಡಿಸಿಕೊಳ್ಳಬೇಕಾಗಿದೆ. ಸದ್ಯ ಈ ಕುರಿತು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಯುವತಿಗೆ ನ್ಯಾಯ ಕೊಡಿಸುವ ಧೈರ್ಯದ ಮಾತುಗಳನ್ನಾಡಿದ್ದಾರೆ. ಯುವತಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಆಕೆಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ನಿಗದಿತ ಸಮಯಕ್ಕೆ ಬಾರದ ಊಟ; ಪ್ರಶ್ನಿಸಿದ್ದಕ್ಕೆ ಯುವತಿಯ ಮೂಗು ಮುರಿದ ಜೊಮ್ಯಾಟೋ ಡೆಲಿವರಿ ಬಾಯ್​

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ