AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಹಲ್ಲೆಗೈದಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜು ಅರೆಸ್ಟ್​

ಹಿತೇಶಾ ಚಂದ್ರಾಣಿ ಎಂಬ ಯುವತಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಮಧ್ಯಾಹ್ನ ಹಸಿವಾದಾಗ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್ಕಿಂಗ್ ಮಾಡಿದ್ದಾರೆ.

ಮಹಿಳೆ ಮೇಲೆ ಹಲ್ಲೆಗೈದಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜು ಅರೆಸ್ಟ್​
ಡೆಲಿವರಿ ಬಾಯ್​ ಕಾಮರಾಜ್​-ಯುವತಿ ಹಿತೇಶಾ ಚಂದ್ರಾಣಿ
ರಾಜೇಶ್ ದುಗ್ಗುಮನೆ
|

Updated on: Mar 10, 2021 | 7:57 PM

Share

ಬೆಂಗಳೂರು: ಆನ್​ಲೈನ್​ ಮೂಲಕ ಊಟ ಆರ್ಡರ್ ಮಾಡಿದ್ದ ಯುವತಿ ಮೇಲೆ ಹಲ್ಲೆ ಮಾಡಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜ್​ ಎಂಬಾತ ಹಿತೇಶಾ ಚಂದ್ರಾಣಿ ಎಂಬ ಯುವತಿಯ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಆಘಾತಕ್ಕೊಳಗಾಗಿರುವ ಯುವತಿ ಘಟನಾವಳಿಯ ವಿವರಗಳನ್ನು ಇಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದು ಭಾರೀ ಚರ್ಚೆ ಹುಟ್ಟುಹಾಕಿತ್ತು. 

ಘಟನೆಯ ಹಿನ್ನೆಲೆ ಹಿತೇಶಾ ಚಂದ್ರಾಣಿ ಎಂಬ ಯುವತಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಮಧ್ಯಾಹ್ನ ಹಸಿವಾದಾಗ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್ಕಿಂಗ್ ಮಾಡಿದ್ದಾರೆ. ಆ್ಯಪ್​ ಲೆಕ್ಕಾಚಾರದ ಪ್ರಕಾರ 4.30ರ ಒಳಗಾಗಿ ಊಟ ತಲುಪಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಆಹಾರ ಬಾರದಿದ್ದಾಗ ಯುವತಿ ಗ್ರಾಹಕ ಸೇವಾ ಕೇಂದ್ರದ ಸಿಬ್ಬಂದಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ಹೇಳಿಕೊಂಡು, ತಡವಾಗುತ್ತಿರುವ ಕಾರಣ ಆರ್ಡರ್ ಕ್ಯಾನ್ಸಲ್ ಮಾಡಬಹುದಾ ಎಂದು ಕೇಳಿದ್ದಾರೆ. ಇದೆಲ್ಲಾ ಆಗುವಾಗ ಡೆಲಿವರಿ ಬಾಯ್ ಮನೆಗೆ ಆಗಮಿಸಿದ್ದಾನೆ. ಮೊದಲೇ ತಡವಾಗಿದ್ದ ಕಾರಣ ಅಸಮಾಧಾನಗೊಂಡ ಯುವತಿ, ಜೊಮ್ಯಾಟೋ ಟೀಂ ಜೊತೆ ಮಾತಾಡಿದ್ದೇನೆ. ಈಗ ನನಗೆ ಯಾವುದೇ ಖರ್ಚಿಲ್ಲದೇ ಊಟ ಕೊಡ್ತೀರಾ? ನಿಮ್ಮ ಕಡೆಯವರಿಂದ ಉತ್ತರ ಬರುವ ತನಕ ಕಾದು ನಿಲ್ಲಲು ಸೂಚಿಸಿದ್ದಾರೆ. ಆದರೆ, ಯುವತಿ ಹೇಳುವ ಪ್ರಕಾರ ಮೊದಲೇ ಸಿಡಿಮಿಡಿ ಎನ್ನುತ್ತಿದ್ದ ಡೆಲಿವರಿ ಬಾಯ್, ಕಾಯಲು ಹೇಳಿದಾಕ್ಷಣ ಬಾಯಿಗೆ ಬಂದಂತೆ ಮಾತನಾಡಿ ನಾನೇನು ನಿಮ್ಮ ಆಳಾ? ಎಂದು ಕೂಗಾಡಿದ್ದಾನೆ. ಭಯಗೊಂಡ ಯುವತಿ ಬಾಗಿಲು ಹಾಕಿಕೊಳ್ಳಲು ಮುಂದಾದಾಗ ಜೋರಾಗಿ ಬಾಗಿಲು ತಳ್ಳಿದಾತ ಸೀದಾ ಒಳನುಗ್ಗಿ ಟೇಬಲ್ಲಿನ ಮೇಲಿಟ್ಟಿದ್ದ ಪೊಟ್ಟಣವನ್ನು ಕಿತ್ತುಕೊಂಡಿದ್ದಲ್ಲದೇ, ಮುಷ್ಠಿಯಿಂದ ಯುವತಿಯ ಮುಖಕ್ಕೆ ಬಲವಾಗಿ ಗುದ್ದಿ ಓಡಿ ಹೋಗಿದ್ದಾನೆ.

ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾದ ಯುವತಿಯ ಮೂಗಿನಿಂದ ರಕ್ತ ಸುರಿಯಲಾರಂಭಿಸಿದ್ದು, ಕಂಗಾಲಾಗಿ ಘಟನೆಯ ಬಗ್ಗೆ ವಿಡಿಯೋ ಮಾಡಿದ್ದಾರೆ. ನಂತರ ಆಸ್ಪತ್ರೆಗೂ ತೆರಳಿದ ಯುವತಿ ಚಿಕಿತ್ಸೆ ಪಡೆದಿದ್ದಾರೆ. ಯುವತಿ ವಿಡಿಯೋದಲ್ಲಿ ತಿಳಿಸಿರುವಂತೆ ಮೂಗಿನ ಮೂಳೆಗೆ ಬಲವಾದ ಹೊಡೆತ ಬಿದ್ದಿರುವ ಕಾರಣ ಅದರಲ್ಲಿ ಬಿರುಕು ಮೂಡಿದ್ದು, ಸರ್ಜರಿ ಮಾಡಿಸಿಕೊಳ್ಳಬೇಕಾಗಿದೆ. ಸದ್ಯ ಈ ಕುರಿತು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಯುವತಿಗೆ ನ್ಯಾಯ ಕೊಡಿಸುವ ಧೈರ್ಯದ ಮಾತುಗಳನ್ನಾಡಿದ್ದಾರೆ. ಯುವತಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಆಕೆಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ನಿಗದಿತ ಸಮಯಕ್ಕೆ ಬಾರದ ಊಟ; ಪ್ರಶ್ನಿಸಿದ್ದಕ್ಕೆ ಯುವತಿಯ ಮೂಗು ಮುರಿದ ಜೊಮ್ಯಾಟೋ ಡೆಲಿವರಿ ಬಾಯ್​

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!