AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ಯಡವಟ್ಟು, ಮನೆಗೆ ಕಳುಹಿಸಿದ್ದ 13ಮಂದಿಗೂ ಕೊರೊನಾ

ಬೆಳಗಾವಿ: ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಯಲ್ಲಿ ಅಧಿಕಾರಿಗಳ ಮಹಾಯಡವಟ್ಟು ಮಾಡಿಕೊಂಡಿದ್ದಾರೆ. ಕೊರೊನಾ ಪರೀಕ್ಷಾ ವರದಿ ಬರುವ ಮುನ್ನವೇ ಕ್ವಾರಂಟೈನ್​ನಲ್ಲಿದ್ದವರನ್ನು ಬಿಡುಗಡೆ ಮಾಡಿದ್ದಾರೆ. ಅಥಣಿ ತಹಶೀಲ್ದಾರ್ ಬೇಜವಾಬ್ದಾರಿಗೆ ಇದೀಗ 4 ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ. ಮೇ 6ರಂದು ಜಾರ್ಖಂಡ್​ನಿಂದ ಅಥಣಿಗೆ 44 ಜನ ಬಂದಿದ್ದರು. ಹಾಗಾಗಿ ಮೇ 6 ರಿಂದ ಮೇ 20ರವರೆಗೆ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಯಾರಲ್ಲೂ ರೋಗದ ಗುಣಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದ್ದಕ್ಕೆ ಎಲ್ಲರನ್ನೂ ಬಿಡುಗಡೆ […]

DCM ಸವದಿ ಕ್ಷೇತ್ರದಲ್ಲಿ ಯಡವಟ್ಟು, ಮನೆಗೆ ಕಳುಹಿಸಿದ್ದ 13ಮಂದಿಗೂ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 26, 2020 | 4:53 PM

Share

ಬೆಳಗಾವಿ: ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಯಲ್ಲಿ ಅಧಿಕಾರಿಗಳ ಮಹಾಯಡವಟ್ಟು ಮಾಡಿಕೊಂಡಿದ್ದಾರೆ. ಕೊರೊನಾ ಪರೀಕ್ಷಾ ವರದಿ ಬರುವ ಮುನ್ನವೇ ಕ್ವಾರಂಟೈನ್​ನಲ್ಲಿದ್ದವರನ್ನು ಬಿಡುಗಡೆ ಮಾಡಿದ್ದಾರೆ. ಅಥಣಿ ತಹಶೀಲ್ದಾರ್ ಬೇಜವಾಬ್ದಾರಿಗೆ ಇದೀಗ 4 ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ.

ಮೇ 6ರಂದು ಜಾರ್ಖಂಡ್​ನಿಂದ ಅಥಣಿಗೆ 44 ಜನ ಬಂದಿದ್ದರು. ಹಾಗಾಗಿ ಮೇ 6 ರಿಂದ ಮೇ 20ರವರೆಗೆ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಯಾರಲ್ಲೂ ರೋಗದ ಗುಣಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದ್ದಕ್ಕೆ ಎಲ್ಲರನ್ನೂ ಬಿಡುಗಡೆ ಮಾಡಲಾಗಿತ್ತು.

ಮೇ 20ಕ್ಕೆ ಊರಿಗೆ ತೆರಳಿದ ಬಳಿಕ ತಮ್ಮ ಊರು ಸೇರಿದಂತೆ ಅಥಣಿ ತಾಲೂಕಿನಲ್ಲಿ ಮಾರ್ಕೆಟ್ ಹಾಗೂ ಅಕ್ಕಪಕ್ಕದ ಗ್ರಾಮದಲ್ಲಿ ಓಡಾಡಿಕೊಂಡಿದ್ದರು. ಆದ್ರೆ ಇಂದು 13ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಥಣಿ ತಾಲೂಕಿನ ಸವದಿ ಗ್ರಾಮದ 8, ಬೆಳವಕ್ಕಿ ಗ್ರಾಮದ 1, ನಂದಗಾಂವ 3, ಝುಂಜರವಾಡ ಗ್ರಾಮದಲ್ಲಿ 1 ಕೇಸ್ ಪತ್ತೆಯಾಗಿದೆ. ಇದೀಗ ನೆರೆ ಹೊರೆಯ ಗ್ರಾಮಗಳಿಗೆ ಹಾಗೂ ಅಕ್ಕಪಕ್ಕದ ಗ್ರಾಮಸ್ಥರಿಗೆ ಸಂಕಷ್ಟ ಎದುರಾಗಿದೆ.

Published On - 4:52 pm, Tue, 26 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?