ನಾಳೆ ಸಿಲಿಕಾನ್ ಸಿಟಿಯಲ್ಲಿ 144 ಸೆಕ್ಷನ್ ಜಾರಿ..

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆಯ ಹಿನ್ನೆಲೆಯಿಂದಾಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ನಾಳೆ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಖಾಕಿಯ ಸರ್ಪಗಾವಲನ್ನು ರಚಿಸಿದ್ದು, ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುವರಿ ಭದ್ರತೆ ಮಾಡಲಾಗಿದೆ. ಜೊತೆಗೆ ನಗರದ ಗಲ್ಲಿಗಲ್ಲಿಯಲ್ಲಿ ಗರುಡ ಪಡೆ ಗಸ್ತು ತಿರುಗಲಿದ್ದು, ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗುವವರು ಭಾರಿ ದಂಡ ತೆರಬೇಕಾಗುತ್ತದೆ. ಹೆಚ್ಚುವರಿ ಭದ್ರತೆಗಾಗಿ 60ಕ್ಕಿಂತಲೂ ಹೆಚ್ಚು KSRP ತುಕಡಿಯನ್ನು ನಗರದಲ್ಲಿ ನಿಯೋಜನೆ ಮಾಡಲಾಗುತ್ತದೆ ಎಂದು ನಗರದ ಹೆಚ್ಚುವರಿ […]

ನಾಳೆ ಸಿಲಿಕಾನ್ ಸಿಟಿಯಲ್ಲಿ 144 ಸೆಕ್ಷನ್ ಜಾರಿ..
ಸಾಧು ಶ್ರೀನಾಥ್​

Updated on: Aug 04, 2020 | 7:13 PM

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆಯ ಹಿನ್ನೆಲೆಯಿಂದಾಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ.

ನಾಳೆ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಖಾಕಿಯ ಸರ್ಪಗಾವಲನ್ನು ರಚಿಸಿದ್ದು, ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುವರಿ ಭದ್ರತೆ ಮಾಡಲಾಗಿದೆ. ಜೊತೆಗೆ ನಗರದ ಗಲ್ಲಿಗಲ್ಲಿಯಲ್ಲಿ ಗರುಡ ಪಡೆ ಗಸ್ತು ತಿರುಗಲಿದ್ದು, ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗುವವರು ಭಾರಿ ದಂಡ ತೆರಬೇಕಾಗುತ್ತದೆ.

ಹೆಚ್ಚುವರಿ ಭದ್ರತೆಗಾಗಿ 60ಕ್ಕಿಂತಲೂ ಹೆಚ್ಚು KSRP ತುಕಡಿಯನ್ನು ನಗರದಲ್ಲಿ ನಿಯೋಜನೆ ಮಾಡಲಾಗುತ್ತದೆ ಎಂದು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us