AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಹೊಟ್ಟೆಯಲ್ಲಿ ಒಂದಲ್ಲ, ಎರಡಲ್ಲ.. 15 ಕೆಜಿ ಗಡ್ಡೆ ಪತ್ತೆ! ಏನು ಮಾಡಿದರು ವೈದ್ಯರು?

ಚಿಕ್ಕಮಗಳೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 15 ಕೆ.ಜಿ ಗಡ್ಡೆಯನ್ನ ಯಶಸ್ವಿಯಾಗಿ ಹೊರತೆಗೆದು ಅವರಿಗೆ ಪುನರ್ಜನ್ಮ ನೀಡಿರೋ ಅಪರೂಪದ ಘಟನೆ ಜಿಲ್ಲೆಯ ಕೊಪ್ಪ ಆಸ್ಪತ್ರೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ 45 ವರ್ಷದ ಶಫುರಭಿ ಎಂಬ ಮಹಿಳೆಯ ಹೊಟ್ಟೆಯಲ್ಲಿದ್ದ ಗಡ್ಡೆಯನ್ನ ಶಸ್ತ್ರಚಿಕಿತ್ಸೆ ಮಾಡಿ ಕೊಪ್ಪದ ವೈದ್ಯ ಡಾ. ಬಾಲಕೃಷ್ಣ ಹೊರತೆಗೆದಿದ್ದಾರೆ. ಅಪರೇಶನ್ ವೇಳೆ ಡಾ.ಬಾಲಕೃಷ್ಣಗೆ ಡಾ. ಧನಂಜಯ್, ನರ್ಸ್ ರೇಷ್ಮಾ ಮತ್ತು ಸಿಬ್ಬಂದಿಯಾದ ಮಂಜುನಾಥ್ ಸಹಾಯ ಮಾಡಿದ್ದರು. ಯಶಸ್ವಿ ಚಿಕಿತ್ಸೆ ಬಳಿಕ ಆರೋಗ್ಯವಾಗಿರೋ ಮಹಿಳೆ ಸದ್ಯ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. […]

ಮಹಿಳೆ ಹೊಟ್ಟೆಯಲ್ಲಿ ಒಂದಲ್ಲ, ಎರಡಲ್ಲ.. 15 ಕೆಜಿ ಗಡ್ಡೆ ಪತ್ತೆ! ಏನು ಮಾಡಿದರು ವೈದ್ಯರು?
KUSHAL V
| Edited By: |

Updated on: Jul 04, 2020 | 12:42 PM

Share

ಚಿಕ್ಕಮಗಳೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 15 ಕೆ.ಜಿ ಗಡ್ಡೆಯನ್ನ ಯಶಸ್ವಿಯಾಗಿ ಹೊರತೆಗೆದು ಅವರಿಗೆ ಪುನರ್ಜನ್ಮ ನೀಡಿರೋ ಅಪರೂಪದ ಘಟನೆ ಜಿಲ್ಲೆಯ ಕೊಪ್ಪ ಆಸ್ಪತ್ರೆಯಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ 45 ವರ್ಷದ ಶಫುರಭಿ ಎಂಬ ಮಹಿಳೆಯ ಹೊಟ್ಟೆಯಲ್ಲಿದ್ದ ಗಡ್ಡೆಯನ್ನ ಶಸ್ತ್ರಚಿಕಿತ್ಸೆ ಮಾಡಿ ಕೊಪ್ಪದ ವೈದ್ಯ ಡಾ. ಬಾಲಕೃಷ್ಣ ಹೊರತೆಗೆದಿದ್ದಾರೆ. ಅಪರೇಶನ್ ವೇಳೆ ಡಾ.ಬಾಲಕೃಷ್ಣಗೆ ಡಾ. ಧನಂಜಯ್, ನರ್ಸ್ ರೇಷ್ಮಾ ಮತ್ತು ಸಿಬ್ಬಂದಿಯಾದ ಮಂಜುನಾಥ್ ಸಹಾಯ ಮಾಡಿದ್ದರು. ಯಶಸ್ವಿ ಚಿಕಿತ್ಸೆ ಬಳಿಕ ಆರೋಗ್ಯವಾಗಿರೋ ಮಹಿಳೆ ಸದ್ಯ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಶಫುರಭಿರ ಹೊಟ್ಟೆಯ ಭಾಗ ಉಬ್ಬ ತೊಡಗಿತ್ತು. ದಪ್ಪ ಆಗಿರೋ ಪರಿಣಾಮದಿಂದಲೇ ಹೊಟ್ಟೆ ಕೂಡ ಉಬ್ಬಿರಬಹುದು ಅಂತಾ ಭಾವಿಸಿ ಸುಮ್ಮನಾಗಿದ್ರು. ಆದ್ರೆ ಕೆಲವು ದಿನಗಳ ನಂತರ ಉಸಿರಾಟದ ಸಮಸ್ಯೆ ಎದುರಾಗ ತೊಡಗಿತು. ಈ ವೇಳೆ ಸ್ಕ್ಯಾನಿಂಗ್ ಮಾಡಿಸಿದಾಗ ಅವರ ಹೊಟ್ಟೆಯಲ್ಲಿ ಬರೋಬ್ಬರಿ 15 ಕೆ.ಜಿ ಗಡ್ಡೆಯಿದೆ ಎಂದು ತಿಳಿದುಬಂತು.

ಸಾಧಾರಣವಾಗಿ ಅರ್ಧ ಕೆಜಿ, 1 ಕೆಜಿ ಅಥವಾ ಹೆಚ್ಚು ಅಂದ್ರೆ 2 ಕೆಜಿಯ ಗಡ್ಡೆಯನ್ನು ಕಂಡಿದ್ದ ವೈದ್ಯರಿಗೆ ಇದನ್ನು ನೋಡಿ ನಿಜವಾಗಿಯೂ ಶಾಕ್​ ಆಗಿತ್ತು. ಕೂಡಲೇ ಆಪರೇಷನ್​ಗೆ ಮುಂದಾದ ವೈದ್ಯರು ತಮ್ಮ ಸರ್ಕಾರಿ ಆಸ್ಪತ್ರೆಯಲ್ಲೇ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಹೊರತೆಗೆದರು. ಸದ್ಯ ಮಹಿಳೆ ಚೇತರಿಸಿಕೊಳ್ಳುತ್ತಿದ್ದು ಮಹತ್ತರ ಬೇನೆ ಕಳೆದುಕೊಂಡಂತೆ ಭಾಸವಾಗಿದೆ.

ಒಟ್ನಲ್ಲಿ, ಇಂಥ ದೊಡ್ಡ ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದಿರುವ ವೈದ್ಯರಿಗೆ ಹಾಗೂ ಅವರ ತಂಡಕ್ಕೆ ಇದು ತಮ್ಮ ವೃತ್ತಿಜೀವನದಲ್ಲೇ ಮಹತ್ತರ ಮೈಲಿಗಲ್ಲಾಗಿದೆ. -ಪ್ರಶಾಂತ್

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್