
ದಾವಣಗೆರೆ: ಈಜಲು ಹೋಗಿದ್ದ ವಿದ್ಯಾರ್ಥಿ ಕೊಳದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಸಮೀಪದ ಸಾಲಬಾಳುಹಳ್ಳಿಯಲ್ಲಿ ನಡೆದಿದೆ. ನವೀನ್ ಕುಮಾರ (15) ಮೃತ ದುರ್ದೈವಿ.
ನ್ಯಾಮತಿ ಪಟ್ಟಣದ ನಿವಾಸಿ ಹಾಲೇಶಪ್ಪ ಅವರ ಪುತ್ರ ನವೀನ್ ಕುಮಾರ್ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಈಜಲು ಹೋಗಿ ನೀರು ಪಾಲಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಶವವನ್ನು ಹೊರಗೆ ತೆಗೆದಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 10:32 am, Wed, 13 May 20