AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಚಿರತೆಗಳ ಕಾಳಗ, ಒಂದು ಚಿರತೆ ಸ್ಥಳದಲ್ಲೇ ಸಾವು

ಎರಡು ಚಿರತೆಗಳು ಹೊಡೆದಾಡಿಕೊಂಡ ಪರಿಣಾಮ ಒಂದು ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬದನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರ ವಲಯದಲ್ಲಿನ ಹೊಲವೊಂದರ ಬಳಿ ಚಿರತೆ ಶವ ಬಿದ್ದಿರುವುದನ್ನ ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಕಳೆಬರವನ್ನ ಪರಿಶೀಲಿಸಿದಾಗ ಎರಡು ಚಿರೆತೆಗಳು ಹೊಡೆದಾಡಿಕೊಂಡ ಪರಿಣಾಮ ಚಿರತೆ ಸಾವು ಸಂಭವಿಸಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಹುಪಾಲು ಪ್ರದೇಶ ಕಾಡಿನಿಂದ ಸುತ್ತುವರೆದಿದ್ದು ಕಾಡು […]

ಹೊಲದಲ್ಲಿ ಚಿರತೆಗಳ ಕಾಳಗ, ಒಂದು ಚಿರತೆ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:May 27, 2020 | 5:04 PM

Share

ಎರಡು ಚಿರತೆಗಳು ಹೊಡೆದಾಡಿಕೊಂಡ ಪರಿಣಾಮ ಒಂದು ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬದನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರ ವಲಯದಲ್ಲಿನ ಹೊಲವೊಂದರ ಬಳಿ ಚಿರತೆ ಶವ ಬಿದ್ದಿರುವುದನ್ನ ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಕಳೆಬರವನ್ನ ಪರಿಶೀಲಿಸಿದಾಗ ಎರಡು ಚಿರೆತೆಗಳು ಹೊಡೆದಾಡಿಕೊಂಡ ಪರಿಣಾಮ ಚಿರತೆ ಸಾವು ಸಂಭವಿಸಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಹುಪಾಲು ಪ್ರದೇಶ ಕಾಡಿನಿಂದ ಸುತ್ತುವರೆದಿದ್ದು ಕಾಡು ಪ್ರಾಣಿಗಳು ಆಹಾರ ಅರಸಿ ಆಗಾಗ್ಗೆ ಊರಿನತ್ತ ಬರುವುದು ಮಾಮೂಲಿಯಾಗಿದೆ. ಮಳವಳ್ಳಿ ತಾಲೂಕಿನ ಬಿಜಿಪುರ ಹೋಬಳಿ ವ್ಯಾಪ್ತಿಯಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು ಚಿರತೆ ಹಾವಳಿ ನಿಯಂತ್ರಿಸುವಂತೆ ಸ್ಥಳೀಯರು ಒತ್ತಾಯಿಸುತ್ತಲೇ ಬಂದಿದ್ದರು. ಹೀಗಿರುವಾಗಲೇ ಬದನಕೆರೆ ಗ್ರಾಮದ ಹೊರ ವಲಯದಲ್ಲಿನ ಹೊಲದ ಬಳಿ ಸುಮಾರು 5 ವರ್ಷದ ಗಂಡು ಚಿರತೆಯೊಂದು ಸತ್ತುಬಿದ್ದಿರುವುದನ್ನ ಕಂಡ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಚಿರತೆ ಸಾವಿಗೆ ನಿಖರ ಕಾರಣ ಏನು ಅನ್ನೋದನ್ನ ತಿಳಿದುಕೊಳ್ಳುವ ತವಕದಲ್ಲಿದ್ದರು. ಸ್ಥಳಕ್ಕಾಗಮಿಸಿದ ಮಳವಳ್ಳಿ ತಾಲೂಕು ಅರಣ್ಯಾಧಿಕಾರಿಗಳ ತಂಡ ಸತ್ತು ಬಿದ್ದಿದ್ದ ಚಿರತೆಯ ಮೃತದೇಹವನ್ನ ಪರಿಶೀಲಿಸಿದಾಗ ಎರಡು ಚಿರತೆಯ ನಡುವೆ ಕಾಳಗ ನಡೆದು ಈ ಚಿರತೆ ಮೃತಪಟ್ಟಿದೆ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ.

ಮೃತಪಟ್ಟಿರುವ ಚಿರತೆಯ ದೇಹದ ಮೇಲೆ ಮತ್ತೊಂದು ಚಿರತೆ ಪರಚಿದ ಗುರುತುಗಳಿದ್ದು ಎರಡು ಸಮಬಲದ ಚಿರತೆಗಳು ಮುಖಾಮುಖಿಯಾದ ಕೆಲವು ಸಂದರ್ಭದಲ್ಲಿ ಈ ರೀತಿಯ ಘಟನೆಗಳು ನಡೆಯುತ್ತವೆ. ವನ್ಯ ಪ್ರಾಣಿಗಳಲ್ಲಿ ಇದು ಸಹಜ ಪ್ರಕ್ರಿಯೆಯಾಗಿದೆ ಎಂದು ಮಾಹಿತಿ ನೀಡಿರುವ ಅರಣ್ಯಾಧಿಕಾರಿಗಳು ಮೃತ ಚಿರತೆಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅಲ್ಲದೆ ತಾಲೂಕಿನಲ್ಲಿ ಚಿರತೆ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ಕಾರ್ಯಪ್ರವೃತ್ತರಾಗಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗದದಿರುವಂತೆ ಮನವಿ ಮಾಡಿದ್ದಾರೆ.

Published On - 4:59 pm, Wed, 27 May 20

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ