AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಚಿರತೆಗಳ ಕಾಳಗ, ಒಂದು ಚಿರತೆ ಸ್ಥಳದಲ್ಲೇ ಸಾವು

ಎರಡು ಚಿರತೆಗಳು ಹೊಡೆದಾಡಿಕೊಂಡ ಪರಿಣಾಮ ಒಂದು ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬದನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರ ವಲಯದಲ್ಲಿನ ಹೊಲವೊಂದರ ಬಳಿ ಚಿರತೆ ಶವ ಬಿದ್ದಿರುವುದನ್ನ ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಕಳೆಬರವನ್ನ ಪರಿಶೀಲಿಸಿದಾಗ ಎರಡು ಚಿರೆತೆಗಳು ಹೊಡೆದಾಡಿಕೊಂಡ ಪರಿಣಾಮ ಚಿರತೆ ಸಾವು ಸಂಭವಿಸಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಹುಪಾಲು ಪ್ರದೇಶ ಕಾಡಿನಿಂದ ಸುತ್ತುವರೆದಿದ್ದು ಕಾಡು […]

ಹೊಲದಲ್ಲಿ ಚಿರತೆಗಳ ಕಾಳಗ, ಒಂದು ಚಿರತೆ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:May 27, 2020 | 5:04 PM

Share

ಎರಡು ಚಿರತೆಗಳು ಹೊಡೆದಾಡಿಕೊಂಡ ಪರಿಣಾಮ ಒಂದು ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬದನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರ ವಲಯದಲ್ಲಿನ ಹೊಲವೊಂದರ ಬಳಿ ಚಿರತೆ ಶವ ಬಿದ್ದಿರುವುದನ್ನ ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಕಳೆಬರವನ್ನ ಪರಿಶೀಲಿಸಿದಾಗ ಎರಡು ಚಿರೆತೆಗಳು ಹೊಡೆದಾಡಿಕೊಂಡ ಪರಿಣಾಮ ಚಿರತೆ ಸಾವು ಸಂಭವಿಸಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಹುಪಾಲು ಪ್ರದೇಶ ಕಾಡಿನಿಂದ ಸುತ್ತುವರೆದಿದ್ದು ಕಾಡು ಪ್ರಾಣಿಗಳು ಆಹಾರ ಅರಸಿ ಆಗಾಗ್ಗೆ ಊರಿನತ್ತ ಬರುವುದು ಮಾಮೂಲಿಯಾಗಿದೆ. ಮಳವಳ್ಳಿ ತಾಲೂಕಿನ ಬಿಜಿಪುರ ಹೋಬಳಿ ವ್ಯಾಪ್ತಿಯಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು ಚಿರತೆ ಹಾವಳಿ ನಿಯಂತ್ರಿಸುವಂತೆ ಸ್ಥಳೀಯರು ಒತ್ತಾಯಿಸುತ್ತಲೇ ಬಂದಿದ್ದರು. ಹೀಗಿರುವಾಗಲೇ ಬದನಕೆರೆ ಗ್ರಾಮದ ಹೊರ ವಲಯದಲ್ಲಿನ ಹೊಲದ ಬಳಿ ಸುಮಾರು 5 ವರ್ಷದ ಗಂಡು ಚಿರತೆಯೊಂದು ಸತ್ತುಬಿದ್ದಿರುವುದನ್ನ ಕಂಡ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಚಿರತೆ ಸಾವಿಗೆ ನಿಖರ ಕಾರಣ ಏನು ಅನ್ನೋದನ್ನ ತಿಳಿದುಕೊಳ್ಳುವ ತವಕದಲ್ಲಿದ್ದರು. ಸ್ಥಳಕ್ಕಾಗಮಿಸಿದ ಮಳವಳ್ಳಿ ತಾಲೂಕು ಅರಣ್ಯಾಧಿಕಾರಿಗಳ ತಂಡ ಸತ್ತು ಬಿದ್ದಿದ್ದ ಚಿರತೆಯ ಮೃತದೇಹವನ್ನ ಪರಿಶೀಲಿಸಿದಾಗ ಎರಡು ಚಿರತೆಯ ನಡುವೆ ಕಾಳಗ ನಡೆದು ಈ ಚಿರತೆ ಮೃತಪಟ್ಟಿದೆ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ.

ಮೃತಪಟ್ಟಿರುವ ಚಿರತೆಯ ದೇಹದ ಮೇಲೆ ಮತ್ತೊಂದು ಚಿರತೆ ಪರಚಿದ ಗುರುತುಗಳಿದ್ದು ಎರಡು ಸಮಬಲದ ಚಿರತೆಗಳು ಮುಖಾಮುಖಿಯಾದ ಕೆಲವು ಸಂದರ್ಭದಲ್ಲಿ ಈ ರೀತಿಯ ಘಟನೆಗಳು ನಡೆಯುತ್ತವೆ. ವನ್ಯ ಪ್ರಾಣಿಗಳಲ್ಲಿ ಇದು ಸಹಜ ಪ್ರಕ್ರಿಯೆಯಾಗಿದೆ ಎಂದು ಮಾಹಿತಿ ನೀಡಿರುವ ಅರಣ್ಯಾಧಿಕಾರಿಗಳು ಮೃತ ಚಿರತೆಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅಲ್ಲದೆ ತಾಲೂಕಿನಲ್ಲಿ ಚಿರತೆ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ಕಾರ್ಯಪ್ರವೃತ್ತರಾಗಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗದದಿರುವಂತೆ ಮನವಿ ಮಾಡಿದ್ದಾರೆ.

Published On - 4:59 pm, Wed, 27 May 20

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?