ಮಹಾಮಾರಿ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೃತ್ಯುಕೇಕೆ ಹಾಕುತ್ತಿದೆ. ನಿನ್ನೆ ಮೂವರನ್ನ ಬಲಿ ಪಡೆದು ಅಟ್ಟಹಾಸ ಮೆರೆದಿದೆ. ಆದ್ರೆ ಮೃತಪಟ್ಟ ಮೂವರು ಕೂಡಾ ಬೆಂಗಳೂರಿನವರೇ ಅನ್ನೋದೆ ಭಯಾನಕ ವಿಷ್ಯ. ಆದ್ರೀಗ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಶಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಕಳೆದ 10 ದಿನಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚಾಮರಾಜಪೇಟೆಯ ಸುಮಾರು 57 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಕೋನೇನ ಅಗ್ರಹಾರ ಮಾರುಕಟ್ಟೆಯಲ್ಲಿ ಈತ ಕೆಲಸ ಮಾಡುತ್ತಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತನ ಗಂಟಲು ದ್ರವ ಪಡೆದು […]

ಮಹಾಮಾರಿ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿ?
ಸಾಧು ಶ್ರೀನಾಥ್​ Edited By:

Updated on: Jun 09, 2020 | 7:23 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೃತ್ಯುಕೇಕೆ ಹಾಕುತ್ತಿದೆ. ನಿನ್ನೆ ಮೂವರನ್ನ ಬಲಿ ಪಡೆದು ಅಟ್ಟಹಾಸ ಮೆರೆದಿದೆ. ಆದ್ರೆ ಮೃತಪಟ್ಟ ಮೂವರು ಕೂಡಾ ಬೆಂಗಳೂರಿನವರೇ ಅನ್ನೋದೆ ಭಯಾನಕ ವಿಷ್ಯ. ಆದ್ರೀಗ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಶಂಕಿತ ವ್ಯಕ್ತಿ ಬಲಿಯಾಗಿದ್ದಾರೆ.

ಕಳೆದ 10 ದಿನಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚಾಮರಾಜಪೇಟೆಯ ಸುಮಾರು 57 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಕೋನೇನ ಅಗ್ರಹಾರ ಮಾರುಕಟ್ಟೆಯಲ್ಲಿ ಈತ ಕೆಲಸ ಮಾಡುತ್ತಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತನ ಗಂಟಲು ದ್ರವ ಪಡೆದು ಕೊವಿಡ್ ಟೆಸ್ಟ್‌ಗೆ ವೈದ್ಯರು ರವಾನಿಸಿದ್ದಾರೆ.

ಇನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮತ್ತೊಬ್ಬ ಕೊರೊನಾ ಶಂಕಿತ ಸಾವು ಸಾವಿಗೀಡಾಗಿದ್ದಾರೆ. ಡಯಾಲಿಸಿಸ್​ನಿಂದ ಬಳಲುತ್ತಿದ್ದ 65 ವರ್ಷದ ವೃದ್ಧ ರಾಜೀವ್‌ಗಾಂಧಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಆಗಿದ್ರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us