AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೂ ಕಿಡ್ನಿ ಫೇಲ್, ಆದ್ರೂ ಕೊವಿಡ್ ವಾರಿಯರ್ ಆಗಿ ದುಡಿಯುತ್ತಿದ್ದಾರೆ ಈ ನರ್ಸಮ್ಮ

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಶುಶ್ರೂಷಕಿ ಸಂಧ್ಯಾ ಎಸ್ ಹಾನಗಲ್ ಎಲ್ಲರೂ ಗ್ರೇಟ್ ಎನ್ನುವಂತಹ ಕೆಲಸ ಮಾಡುತ್ತಿದ್ದಾರೆ. ಕಳೆದ 21 ವರ್ಷಗಳಿಂದ ನರ್ಸ್ ಆಗಿ ಕೆಲಸ ಮಾಡುತ್ತಿರುವ ಸಂಧ್ಯಾ, ಕಳೆದ ಕೆಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಎರಡೂ ಕಿಡ್ನಿಗಳು ಫೇಲ್ ಆಗಿದ್ದರೂ ಕರ್ತವ್ಯವನ್ನು ಮಾತ್ರ ಎಂದಿಗೂ ಬಿಟ್ಟಿಲ್ಲ. ಕೊರೊನಾ ಸಂದರ್ಭದಲ್ಲೂ ವಾರಿಯರ್ ಆಗಿ ಸೇವೆ: ಈಗ ಎಲ್ಲೆಲ್ಲೂ ಹೆಮ್ಮಾರಿ ಕೊರೊನಾದ ಆರ್ಭಟ ಶುರುವಾಗಿದೆ. ಆದರೂ ನರ್ಸ್ ಸಂಧ್ಯಾ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ‌ ವಾರ್ಡಿನಲ್ಲಿ ಕೊವಿಡ್ […]

ಎರಡೂ ಕಿಡ್ನಿ ಫೇಲ್, ಆದ್ರೂ ಕೊವಿಡ್ ವಾರಿಯರ್ ಆಗಿ ದುಡಿಯುತ್ತಿದ್ದಾರೆ ಈ ನರ್ಸಮ್ಮ
ಸಾಧು ಶ್ರೀನಾಥ್​
| Edited By: |

Updated on: Jun 02, 2020 | 6:48 AM

Share

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಶುಶ್ರೂಷಕಿ ಸಂಧ್ಯಾ ಎಸ್ ಹಾನಗಲ್ ಎಲ್ಲರೂ ಗ್ರೇಟ್ ಎನ್ನುವಂತಹ ಕೆಲಸ ಮಾಡುತ್ತಿದ್ದಾರೆ. ಕಳೆದ 21 ವರ್ಷಗಳಿಂದ ನರ್ಸ್ ಆಗಿ ಕೆಲಸ ಮಾಡುತ್ತಿರುವ ಸಂಧ್ಯಾ, ಕಳೆದ ಕೆಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಎರಡೂ ಕಿಡ್ನಿಗಳು ಫೇಲ್ ಆಗಿದ್ದರೂ ಕರ್ತವ್ಯವನ್ನು ಮಾತ್ರ ಎಂದಿಗೂ ಬಿಟ್ಟಿಲ್ಲ.

ಕೊರೊನಾ ಸಂದರ್ಭದಲ್ಲೂ ವಾರಿಯರ್ ಆಗಿ ಸೇವೆ: ಈಗ ಎಲ್ಲೆಲ್ಲೂ ಹೆಮ್ಮಾರಿ ಕೊರೊನಾದ ಆರ್ಭಟ ಶುರುವಾಗಿದೆ. ಆದರೂ ನರ್ಸ್ ಸಂಧ್ಯಾ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ‌ ವಾರ್ಡಿನಲ್ಲಿ ಕೊವಿಡ್ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಭಯ ಶುರುವಾದ್ಮೇಲೆ ಜಿಲ್ಲಾಸ್ಪತ್ರೆ ಮುಖ್ಯಸ್ಥರು ಸೇರಿದಂತೆ ವೈದ್ಯರು ನರ್ಸ್ ಸಂಧ್ಯಾರಿಗೆ ಕೆಲಸಕ್ಕೆ ಬರಬೇಡಿ, ಮನೆಯಲ್ಲೇ ಆರಾಮಾಗಿರಿ ಎಂದು ಸಲಹೆ ನೀಡಿದ್ದರಂತೆ. ಆದರೆ ಕರ್ತವ್ಯವನ್ನೆ ದೇವರು ಎಂದು ನಂಬಿರುವ ನರ್ಸ್ ಸಂಧ್ಯಾ, ಕೆಲವೇ ಕೆಲವು ದಿನಗಳ ಕಾಲ‌ ರಜೆ ಪಡೆದು ಮತ್ತೆ ಕರ್ತವ್ಯಕ್ಕೆ ಮರಳಿದ್ದಾರೆ.

ತಾಯಂದಿರು ಮತ್ತು ಮಕ್ಕಳ ಆರೈಕೆ: ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ 19 ಆಸ್ಪತ್ರೆ ಆರಂಭವಾಗಿದೆ. ಹೀಗಾಗಿ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳನ್ನು ನೋಡಿಕೊಳ್ಳಲು ಹೆಚ್ಚಿನ ಸಿಬ್ಬಂದಿ ಇಲ್ಲ. ಇಂತಹ ಸಮಯದಲ್ಲೂ ರಜೆ ಪಡೆದು ಮನೆಯಲ್ಲಿ ಕುಳಿತುಕೊಳ್ಳುವುದು ಬೇಡವೆಂದು ನರ್ಸ್ ಸಂಧ್ಯಾ, ಮಹಿಳಾ ಮತ್ತು ಮಕ್ಕಳ ವಾರ್ಡಿನಲ್ಲಿ ಹೆರಿಗೆಯಾದ ತಾಯಂದಿರು ಮತ್ತು ಮಕ್ಕಳ ಆರೈಕೆ ಮಾಡುತ್ತಿದ್ದಾರೆ. ಇದರ ಜೊತೆಗೆ ಹೆರಿಗೆಯಾದ ತಾಯಂದಿರಿಗೆ ಅಗತ್ಯ ಸಲಹೆಗಳನ್ನು ನೀಡುತ್ತಾ ತಮ್ಮ ಮಕ್ಕಳಂತೆಯೇ ಆಗ ತಾನೆ ಜನಿಸಿದ ಮಕ್ಕಳನ್ನ ಆರೈಕೆ ಮಾಡುತ್ತಿದ್ದಾರೆ.

ಎಲ್ಲೆಡೆ ಕೊರೊನಾ ಅಬ್ಬರ ಜೋರಾಗಿ ಇರುವುದರಿಂದ ಅನೇಕರು ಮನೆಯಲ್ಲಿರುವ ಅವಕಾಶ ಸಿಕ್ಕರೆ ಸಾಕು ಎನ್ನುತ್ತಾರೆ. ಅಂಥವರ ನಡುವೆ ನರ್ಸ್ ಸಂಧ್ಯಾ ಎರಡೂ ಕಿಡ್ನಿಗಳು ಇಲ್ಲದಿದ್ದರೂ ಕೊವಿಡ್ ವಾರಿಯರ್ಸ್ ಆಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ತೊಂದರೆಗಳು ಆಗದಂತೆ ಕೆಲಸ‌ ಮಾಡುತ್ತಿದ್ದಾರೆ. 2013ರಿಂದಲೂ ನರ್ಸ್ ಸಂಧ್ಯಾ ರೋಗಿಗಳ ಪಾಲಿಗೆ ದೇವರಾಗಿ ಕೆಲಸ ಮಾಡುತ್ತಿದ್ದಾರೆ. ಎದೆಯಲ್ಲಿ ಸಾಕಷ್ಟು ನೋವು, ಯಾವಾಗ ಏನಾಗುತ್ತದೆಯೋ ಎಂಬ ಭಯವಿದೆ. ಆದರೂ ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಾ ಕರ್ತವ್ಯದಲ್ಲಿ ನಿರತರಾಗಿದ್ದಾರೆ.

ಒಂದೆಡೆ ಕಿಡ್ನಿಗಳು ವೈಫಲ್ಯ ಆಗಿರುವ ನೋವು, ಮತ್ತೊಂದೆಡೆ ರೋಗಿಗಳ ಆರೈಕೆ ಮಾಡಬೇಕು ಎನ್ನುವ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವ ನರ್ಸ್ ಸಂಧ್ಯಾರ ಕೆಲಸ ಶ್ಲಾಘನೀಯವೆ. ಆದರೆ ಸರ್ಕಾರ ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿರುವ ನರ್ಸಮ್ಮನಿಗೆ ಕಿಡ್ನಿ ಟ್ರಾನ್ಸಫರೆಂಟ್ ಮಾಡಿಸುವ ಮೂಲಕ ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಾ ರೋಗಿಗಳ ಆರೈಕೆಯಲ್ಲಿ ತೊಡಗಿರುವ ನರ್ಸಮ್ಮನ ಕಣ್ಣೀರು ಒರೆಸುವ ಕೆಲಸ ಮಾಡಬೇಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​