AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು: ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. […]

ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!
ಸಾಧು ಶ್ರೀನಾಥ್​
|

Updated on: May 10, 2020 | 1:11 PM

Share

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು: ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಭಾಗಿಯಾಗಿದ್ದರು.

ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಆತಂಕ: ಮೇ 5ರಂದು ವೃದ್ಧನ ಮನೆಗೆ ತಾಲೂಕು ಅಧಿಕಾರಿ ಭೇಟಿ ನೀಡಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಸೂಚಿಸಿದ್ದರು. ಕೊರೊನಾ ಸೋಂಕಿತ ವೃದ್ಧ ಹಲವೆಡೆ ಓಡಾಡಿದ್ದ ಹಿನ್ನೆಲೆಯಲ್ಲಿ ಯಾವ ಮೂಲದಿಂದ ವೃದ್ಧನಿಗೆ ಸೋಂಕು ಹರಡಿತು ಎಂದು ವೃದ್ಧನ ಸೋಂಕಿನ ಮೂಲದ ಬಗ್ಗೆ ಅಧಿಕಾರಿಗಳಿಂದ ತನಿಖೆ ನಡೆಸುತ್ತಿದ್ದಾರೆ.

ಲಂಡನ್​ನಿಂದ 2 ತಿಂಗಳ ಹಿಂದೆ ಬಂದಿದ್ದ ಮೊಮ್ಮಗ: ಇದೀಗ ವೃದ್ಧನ ಮೊಮ್ಮಗ 22 ವರ್ಷದ ಯುವಕನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಈತ ಲಂಡನ್​ನಿಂದ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಮೂಲತಃ ಬೆಂಗಳೂರಿನ ವಿಜಯನಗರ ನಿವಾಸಿಯಾಗಿದ್ದು, ಚಿಂತಾಮಣಿಯ ತಾತನ ಮನೆಗೆ ಇತ್ತೀಚೆಗೆ ಆಗಮಿಸಿದ್ದ. ಮೇ 5ರಂದು ಮೃತಪಟ್ಟಿದ್ದ ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ. ಯುವಕನ ಜೊತೆ 60ಕ್ಕೂ ಹೆಚ್ಚು ಜನ ಭಾಗಿಯಾಗಿದ್ರು.

ಚಿಂತಾಮಣಿಯ ತಾತ-ಮೊಮ್ಮೊಗನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ 73 ಮಂದಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?