AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು: ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. […]

ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!
ಸಾಧು ಶ್ರೀನಾಥ್​
|

Updated on: May 10, 2020 | 1:11 PM

Share

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು: ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಭಾಗಿಯಾಗಿದ್ದರು.

ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಆತಂಕ: ಮೇ 5ರಂದು ವೃದ್ಧನ ಮನೆಗೆ ತಾಲೂಕು ಅಧಿಕಾರಿ ಭೇಟಿ ನೀಡಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಸೂಚಿಸಿದ್ದರು. ಕೊರೊನಾ ಸೋಂಕಿತ ವೃದ್ಧ ಹಲವೆಡೆ ಓಡಾಡಿದ್ದ ಹಿನ್ನೆಲೆಯಲ್ಲಿ ಯಾವ ಮೂಲದಿಂದ ವೃದ್ಧನಿಗೆ ಸೋಂಕು ಹರಡಿತು ಎಂದು ವೃದ್ಧನ ಸೋಂಕಿನ ಮೂಲದ ಬಗ್ಗೆ ಅಧಿಕಾರಿಗಳಿಂದ ತನಿಖೆ ನಡೆಸುತ್ತಿದ್ದಾರೆ.

ಲಂಡನ್​ನಿಂದ 2 ತಿಂಗಳ ಹಿಂದೆ ಬಂದಿದ್ದ ಮೊಮ್ಮಗ: ಇದೀಗ ವೃದ್ಧನ ಮೊಮ್ಮಗ 22 ವರ್ಷದ ಯುವಕನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಈತ ಲಂಡನ್​ನಿಂದ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಮೂಲತಃ ಬೆಂಗಳೂರಿನ ವಿಜಯನಗರ ನಿವಾಸಿಯಾಗಿದ್ದು, ಚಿಂತಾಮಣಿಯ ತಾತನ ಮನೆಗೆ ಇತ್ತೀಚೆಗೆ ಆಗಮಿಸಿದ್ದ. ಮೇ 5ರಂದು ಮೃತಪಟ್ಟಿದ್ದ ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ. ಯುವಕನ ಜೊತೆ 60ಕ್ಕೂ ಹೆಚ್ಚು ಜನ ಭಾಗಿಯಾಗಿದ್ರು.

ಚಿಂತಾಮಣಿಯ ತಾತ-ಮೊಮ್ಮೊಗನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ 73 ಮಂದಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು