ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು: ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. […]

ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!
ಸಾಧು ಶ್ರೀನಾಥ್​

Updated on: May 10, 2020 | 1:11 PM

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು:
ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಭಾಗಿಯಾಗಿದ್ದರು.

ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಆತಂಕ:
ಮೇ 5ರಂದು ವೃದ್ಧನ ಮನೆಗೆ ತಾಲೂಕು ಅಧಿಕಾರಿ ಭೇಟಿ ನೀಡಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಸೂಚಿಸಿದ್ದರು. ಕೊರೊನಾ ಸೋಂಕಿತ ವೃದ್ಧ ಹಲವೆಡೆ ಓಡಾಡಿದ್ದ ಹಿನ್ನೆಲೆಯಲ್ಲಿ ಯಾವ ಮೂಲದಿಂದ ವೃದ್ಧನಿಗೆ ಸೋಂಕು ಹರಡಿತು ಎಂದು ವೃದ್ಧನ ಸೋಂಕಿನ ಮೂಲದ ಬಗ್ಗೆ ಅಧಿಕಾರಿಗಳಿಂದ ತನಿಖೆ ನಡೆಸುತ್ತಿದ್ದಾರೆ.

ಲಂಡನ್​ನಿಂದ 2 ತಿಂಗಳ ಹಿಂದೆ ಬಂದಿದ್ದ ಮೊಮ್ಮಗ:
ಇದೀಗ ವೃದ್ಧನ ಮೊಮ್ಮಗ 22 ವರ್ಷದ ಯುವಕನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಈತ ಲಂಡನ್​ನಿಂದ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಮೂಲತಃ ಬೆಂಗಳೂರಿನ ವಿಜಯನಗರ ನಿವಾಸಿಯಾಗಿದ್ದು, ಚಿಂತಾಮಣಿಯ ತಾತನ ಮನೆಗೆ ಇತ್ತೀಚೆಗೆ ಆಗಮಿಸಿದ್ದ. ಮೇ 5ರಂದು ಮೃತಪಟ್ಟಿದ್ದ ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ. ಯುವಕನ ಜೊತೆ 60ಕ್ಕೂ ಹೆಚ್ಚು ಜನ ಭಾಗಿಯಾಗಿದ್ರು.

ಚಿಂತಾಮಣಿಯ ತಾತ-ಮೊಮ್ಮೊಗನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ 73 ಮಂದಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us