AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಿಂದ ರೈಲಿನಲ್ಲಿ ಆಗಮಿಸಿದ್ದ ಇಬ್ಬರು ಆಟೋದಲ್ಲಿ ಪರಾರಿ, ಕ್ರಿಮಿನಲ್ ಕೇಸ್ ಎಚ್ಚರಿಕೆ

ಬೆಂಗಳೂರು: ಸುಮಾರು 2 ತಿಂಗಳ ಬಳಿಕ ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ಆಗಮಿಸಿದ್ದು, ಮುಂಬೈನಿಂದ 1,734 ಪ್ರಯಾಣಿಕರು ಆಗಮಿಸಿದ್ದಾರೆ. ರೈಲಿನಲ್ಲಿ ಬಂದ ಎಲ್ಲ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಿ ಬಳಿಕ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಬೇಕಾಗಿದೆ. ಆದ್ರೆ, ಕ್ವಾರಂಟೈನ್ ಮಾಡುವ ವಿಚಾರದಲ್ಲಿ ಅಧಿಕಾರಿಗಳ ಅಜಾಗರುಕತೆ ಎದ್ದುಕಾಣುತ್ತಿದೆ. ಸರಿಯಾದ ಭದ್ರತೆ ಇಲ್ಲದ ಹಿನ್ನೆಲೆಯಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಇಬ್ಬರು ಪ್ರಯಾಣಿಕರು ಕೆಎ 02, 9780 ನೋಂದಣಿಯ ಆಟೋದಲ್ಲಿ ಪರಾರಿಯಾಗಿದ್ದಾರೆ. ಕ್ವಾರಂಟೈನ್​ನಲ್ಲಿರ ಬೇಕಾಗಿದ್ದವರು ಇದೀಗ ಪರಾರಿಯಾಗಿದ್ದಾರೆ. ಹಾಗಾಗಿ ಬೆಂಗಳೂರಿನ ಜನತೆಗೆ ಆತಂಕ ಶುರುವಾಗಿದೆ. […]

ಮುಂಬೈನಿಂದ ರೈಲಿನಲ್ಲಿ ಆಗಮಿಸಿದ್ದ ಇಬ್ಬರು ಆಟೋದಲ್ಲಿ ಪರಾರಿ, ಕ್ರಿಮಿನಲ್ ಕೇಸ್ ಎಚ್ಚರಿಕೆ
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 10:56 AM

Share

ಬೆಂಗಳೂರು: ಸುಮಾರು 2 ತಿಂಗಳ ಬಳಿಕ ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ಆಗಮಿಸಿದ್ದು, ಮುಂಬೈನಿಂದ 1,734 ಪ್ರಯಾಣಿಕರು ಆಗಮಿಸಿದ್ದಾರೆ. ರೈಲಿನಲ್ಲಿ ಬಂದ ಎಲ್ಲ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಿ ಬಳಿಕ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಬೇಕಾಗಿದೆ.

ಆದ್ರೆ, ಕ್ವಾರಂಟೈನ್ ಮಾಡುವ ವಿಚಾರದಲ್ಲಿ ಅಧಿಕಾರಿಗಳ ಅಜಾಗರುಕತೆ ಎದ್ದುಕಾಣುತ್ತಿದೆ. ಸರಿಯಾದ ಭದ್ರತೆ ಇಲ್ಲದ ಹಿನ್ನೆಲೆಯಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಇಬ್ಬರು ಪ್ರಯಾಣಿಕರು ಕೆಎ 02, 9780 ನೋಂದಣಿಯ ಆಟೋದಲ್ಲಿ ಪರಾರಿಯಾಗಿದ್ದಾರೆ. ಕ್ವಾರಂಟೈನ್​ನಲ್ಲಿರ ಬೇಕಾಗಿದ್ದವರು ಇದೀಗ ಪರಾರಿಯಾಗಿದ್ದಾರೆ. ಹಾಗಾಗಿ ಬೆಂಗಳೂರಿನ ಜನತೆಗೆ ಆತಂಕ ಶುರುವಾಗಿದೆ. ರಾಜ್ಯದ ಪ್ರಯಾಣಿಕರೆಂದು ತಿಳಿದು ಪೊಲೀಸರ ಎಡವಟ್ಟು ಮಾಡಿಕೊಂಡಿದ್ದಾರೆ. ಅವರನ್ನ ಕರೆತರಲು ಪೊಲೀಸ್ ಅಧಿಕಾರಿಗಳು ಬುಲೆಟ್​ ಬೈಕ್​ನಲ್ಲಿ ತೆರಳಿದ್ದಾರೆ.

ಕ್ರಿಮಿನಲ್ ಕೇಸ್ ಎಚ್ಚರಿಕೆ: ಮುಂಬೈನಿಂದ ಆಗಮಿಸಿದ್ದ ಪ್ರಯಾಣಿಕರು ಪರಾರಿಯಾಗಿದ್ದಾರೆ. ಪ್ರಯಾಣಿಕರು ತಾವಾಗಿಯೇ ಬಂದು ಕ್ವಾರಂಟೈನ್ ಆಗಬೇಕು, ಇಲ್ಲದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಯಾಣಿಕರೆಂದು ತಿಳಿದು ಎಡವಟ್ಟು: ಮುಂಬೈನಿಂದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಯಾದಗಿರಿ, ಕಲಬುರಗಿ ಮಾರ್ಗದಲ್ಲಿ ಬೆಂಗಳೂರಿಗೆ ಬಂದಿತ್ತು. ರೈಲಿನಲ್ಲಿ ರಾಜ್ಯದ ಕಾರ್ಮಿಕರು ಬಂದಿದ್ದಾರೆಂದು ಗೊಂದಲವಾಗಿದೆ. ಈ ವೇಳೆ ಮುಂಬೈನಿಂದ ಬಂದವರನ್ನ ಪೊಲೀಸರು ಬಿಟ್ಟಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಹಿರಿಯ ಅಧಿಕಾರಿಗಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ವಾರಂಟೈನ್ ಕೇಂದ್ರಕ್ಕೆ ಹೋಗಲು ಹಣ ನೀಡಲ್ಲ: ಬಿಎಂಟಿಸಿ ಬಸ್ ಪ್ರಯಾಣಕ್ಕೆ 100 ರೂಪಾಯಿ ನೀಡುವುದಿಲ್ಲ. ನನ್ನ ಬಳಿ ಹಣ ಇಲ್ಲ, ಹೀಗಾಗಿ ಹಣವನ್ನು ನೀಡಲ್ಲ. ಬೇಕಿದ್ದರೆ ನನ್ನನ್ನು ಮತ್ತೆ ಮುಂಬೈಗೆ ವಾಪಸ್ ಕಳುಹಿಸಿಬಿಡಿ ಎಂದು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ನಮಗೆ ಎಲ್ಲವೂ ಫ್ರೀ ಇದೆ ಅಂದಿದ್ದಕ್ಕೆ ನಾವು ಬಂದಿದ್ದೇವೆ. ಈಗ ಹಣ ಕೇಳಿದರೆ ಹೇಗೆ? 3 ತಿಂಗಳು ಹೇಗೆ ಜೀವನ ಸಾಗಿಸಿದ್ದೇವೆಂದು ನಮಗೆ ಗೊತ್ತು. ನಾವು ಯಾವುದೇ ಕಾರಣಕ್ಕೂ ಹಣ ನೀಡಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:00 am, Tue, 2 June 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?