10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ. ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 […]

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ
ಸಾಧು ಶ್ರೀನಾಥ್​ Edited By:

Updated on: Mar 31, 2020 | 1:59 AM

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ.

ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 ವರ್ಷ ಕಳೆದ್ರೂ ಇನ್ನೂ ಮನೆಗಳ ಹಂಚಿಕೆಯಾಗಿಲ್ಲ.

ನೆರೆ ಸಂತ್ರಸ್ತರಿಗೆ ಹಂಚಿಕೆಯಾಗದೆ ಮನೆಗಳು ಶಿಥಿಲಾವಸ್ಥೆ ತಲುಪಿವೆ. ಮನೆಗಳಿಗೆ ಅಳವಡಿಸಲಾಗಿದ್ದ ಕಿಟಕಿ, ಬಾಗಿಲು ಕಳ್ಳತನವಾಗಿದೆ. ನೂರಾರು ಮನೆಗಳು ವಾಸಿಸಲು ಯೋಗ್ಯವಿಲ್ಲದಂತಾಗಿವೆ. ಇಷ್ಟಾದ್ರೂ ಯಾವುದೇ ಕ್ರಮಕೈಗೊಳ್ಳದಿರುವ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:42 am, Mon, 20 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us