AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIA: ಬೆಳ್ಳಂದೂರಿನಲ್ಲಿ ಪತ್ತೆಯಾಗಿರುವುದು 43 ಅಕ್ರಮ ಬಾಂಗ್ಲಾ ವಲಸಿಗರು, ಏನಿದರ ಹಕೀಕತ್ತು?

Bangladeshi immigrants: ಬೆಳ್ಳಂದೂರಿನಲ್ಲಿ ಒಟ್ಟು 43 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿರುವ ಬಗ್ಗೆ ಎನ್​ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮೊದಲು ಕೇವಲ ಮೂವರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಇತ್ತು.

NIA: ಬೆಳ್ಳಂದೂರಿನಲ್ಲಿ ಪತ್ತೆಯಾಗಿರುವುದು 43 ಅಕ್ರಮ ಬಾಂಗ್ಲಾ ವಲಸಿಗರು, ಏನಿದರ ಹಕೀಕತ್ತು?
ಬೆಳ್ಳಂದೂರಿನಲ್ಲಿ ಪತ್ತೆಯಾಗಿರುವುದು 24 ಅಕ್ರಮ ಬಾಂಗ್ಲಾ ವಲಸಿಗರು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 11, 2023 | 2:16 PM

Share

ಬೆಂಗಳೂರು, ಆಗಸ್ಟ್​ 11: ಇತ್ತೀಚೆಗೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (illegal Bangladeshi immigrants) ಪತ್ತೆಯಾಗಿದ್ದು, ಆ ಪ್ರಕರಣದ ಪರಿಶೀಲನೆ ವೇಳೆ ಪತ್ತೆಯಾಗಿದ್ದು ಮೂವರಲ್ಲ 43 ಬಾಂಗ್ಲಾ ವಲಸಿಗರು ಎಂದು ತಿಳಿದುಬಂದಿದೆ. ಬೆಳ್ಳಂದೂರಿನಲ್ಲಿ ಒಟ್ಟು 43 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿರುವ ಬಗ್ಗೆ ಎನ್​ಐಎ (National Investigation Agency -NIA) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮೊದಲು ಕೇವಲ ಮೂವರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಇತ್ತು.

ಬಾಂಗ್ಲಾ ಪ್ರಜೆಗಳು ದೇಶದಲ್ಲಿ 2011ರಿಂದ ಅಕ್ರಮವಾಗಿ ನೆಲೆಸಿರುವ ಮಾಹಿತಿಯಿದೆ. ಇವರೆಲ್ಲ ಬ್ರೋಕರ್​​ ಒಬ್ಬನಿಗೆ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಮಾಹಿತಿಯಿದೆ. ತಲಾ 20 ಸಾವಿರ ರೂ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಅಪ್ಪನ ಕೆರೆಯಲ್ಲಿ ಈಜಾಡಿದ ಎಮ್ಮೆಗಳು, ಮಾಲೀಕರ ವಿರುದ್ಧ ದೂರು ದಾಖಲು

ಈ ಬಾಂಗ್ಲಾದೇಶಿಯರು ಭಾರತದ ಆಧಾರ್ ಸೇರಿದಂತೆ ಹಲವು ಐಡಿ ಕಾರ್ಡ್​ ಮಾಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬೆಳ್ಳಂದೂರು ಪೊಲೀಸ್​ ಠಾಣೆಯಲ್ಲಿ (Bellandur, Bangalore) ಪ್ರಕರಣ ದಾಖಲಾಗಿದೆ. ಎನ್ಐಎ ಅಧಿಕಾರಿಗಳ ದೂರಿನ ಅನ್ವಯ ಫಾರಿನರ್ ಆಕ್ಟ್​, ಪಾಸ್‌ಪೋರ್ಟ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ.

ಬಿಟ್ ಕಾಯಿನ್ ಪ್ರಕರಣ -ಎಸ್ಐಟಿ ಯಿಂದ ತನಿಖೆ ಚುರುಕು

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣವನ್ನು (Bitcoin case) ಎಸ್ಐಟಿ (SIT) ತನಿಖೆಗೆ ಒಳಪಡಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. ತಾಜಾ ಆಗಿ ಹಿಂದಿನ ಸಿಸಿಬಿ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎಸ್ ಐ ಟಿ ಡಿವೈ ಎಸ್ ಪಿ ಕೆ ರವಿಶಂಕರ್ ಅವರು ಬೆಂಗಳೂರು (Bengaluru) ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. 2 ಪೆನ್ ಡ್ರೈವ್, ಹಾರ್ಡ್ ಡಿಸ್ಕ್ , ಹಾಗೂ ಆ್ಯಪ್ ಮ್ಯಾಕ್ ಬುಕ್ ನಲ್ಲಿ ಮೂಲ ಫೈಲ್ ಗಳನ್ನ ಅಳಿಸಲಾಗಿದೆ. ಅದೇ ಸ್ಥಳದಲ್ಲಿ ಹೆಚ್ಚುವರಿಯಾಗಿ ಫೈಲ್ ಗಳನ್ನ ಸೃಷ್ಟಿಸಲಾಗಿದೆ.

ಗಮನಾರ್ಹವೆಂದರೆ ಪ್ರಕರಣದ ತನಿಖೆಯನ್ನ ಸಿಸಿಬಿ ಕೈಗೆತ್ತಿಕೊಂಡ ಬಳಿಕವೇ ಸಾಕ್ಷ್ಯಗಳನ್ನ ತಿರುಚಲಾಗಿದೆ. ಸೆಪ್ಬಂಬರ್ 9 – 2020 ರಿಂದ ಡಿಸೆಂಬರ್ 16 – 2020 ರ ಅವಧಿಯಲ್ಲಿ ಸಿಸಿಬಿ ಕಚೇರಿ ಹಾಗು ಇತರೆಡೆ ಈ ಅಕ್ರಮ ನಡೆದಿದೆ. ಸಿಸಿಬಿ ತನಿಖಾಧಿಕಾರಿಗಳು ಹಾಗು ಇತರೆ ಅಧಿಕಾರಿಗಳು ಒಳಸಂಚು ರೂಪಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಡಿಜಿಟಲ್ ಉಪಕರಣಗಳಲ್ಲಿ ಹೆಚ್ಚುವರಿಯಾಗಿ ಫೈಲ್ ಸೃಷ್ಟಿಸಿದ್ದಾರೆ ಅಂತಾ ಎಸ್ ಐಟಿ ಡಿವೈ ಎಸ್ ಪಿ ಯಿಂದ ದೂರು ದಾಖಲಾಗಿದೆ. ಹಿಂದಿನ ಸಿಸಿಬಿ ತನಿಖಾಧಿಕಾರಿಗಳು ಹಾಗು ಇತರರಿಗೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ.

ಬೆಂಗಳೂರು ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:32 am, Fri, 11 August 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ