AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷ ಕಳೆದ್ರೂ ಭ್ರಷ್ಟರಿಗಿಲ್ಲ ಶಿಕ್ಷೆ: ಹಲ್ಲುಕಿತ್ತ ಹಾವಿನಂತಾದ ಎಸಿಬಿ

ರಾಯಚೂರು: ಭಷ್ಟ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಲೆಂದೇ ಎಸಿಬಿ ಸ್ಥಾಪನೆಯಾಗಿದೆ. ಲೋಕಾಯುಕ್ತಕ್ಕೆ ಎಳ್ಳುನೀರು ಬಿಟ್ಟ ನಂತರ, ಎಸಿಬಿ ಅಸ್ತಿತ್ವಕ್ಕೆ ಬಂದಿದೆ. ಎಸಿಬಿ ಠಾಣೆ ಸ್ಥಾಪನೆ, ಕಚೇರಿಗಳ ಸ್ಥಾಪನೆಗೆ ಅಂತಾನೆ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಕೂಡ ಮಾಡಿದೆ. ಆದರೆ ಇದೆಲ್ಲವೂ ಈಗ ನೀರಲ್ಲಿ ಹೋಮ ಮಾಡಿದಂತಾಗಿದೆ. ಎಸಿಬಿ ಆಟಕ್ಕುಂಟು ಲೆಕ್ಕಕ್ಕಿಲ್ಲ: ದೇಶ ಹಾಗೂ ರಾಜ್ಯವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಲ್ಲಿ ಭ್ರಷ್ಟಾಚಾರವೂ ಒಂದು. ಬಡವರ ಹಾಗೂ ಸಮಸ್ಯೆ ಸುಳಿಯಲ್ಲಿ ಸಿಲುಕಿ ನರಳುತ್ತಿರುವವರ ಬಳಿ ಭ್ರಷ್ಟರು ಲೂಟಿಗಿಳಿದಿದ್ದಾರೆ. ಇದೆಲ್ಲದಕ್ಕೂ ಬ್ರೇಕ್ […]

3 ವರ್ಷ ಕಳೆದ್ರೂ ಭ್ರಷ್ಟರಿಗಿಲ್ಲ ಶಿಕ್ಷೆ: ಹಲ್ಲುಕಿತ್ತ ಹಾವಿನಂತಾದ ಎಸಿಬಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 28, 2020 | 8:01 AM

Share

ರಾಯಚೂರು: ಭಷ್ಟ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಲೆಂದೇ ಎಸಿಬಿ ಸ್ಥಾಪನೆಯಾಗಿದೆ. ಲೋಕಾಯುಕ್ತಕ್ಕೆ ಎಳ್ಳುನೀರು ಬಿಟ್ಟ ನಂತರ, ಎಸಿಬಿ ಅಸ್ತಿತ್ವಕ್ಕೆ ಬಂದಿದೆ. ಎಸಿಬಿ ಠಾಣೆ ಸ್ಥಾಪನೆ, ಕಚೇರಿಗಳ ಸ್ಥಾಪನೆಗೆ ಅಂತಾನೆ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಕೂಡ ಮಾಡಿದೆ. ಆದರೆ ಇದೆಲ್ಲವೂ ಈಗ ನೀರಲ್ಲಿ ಹೋಮ ಮಾಡಿದಂತಾಗಿದೆ.

ಎಸಿಬಿ ಆಟಕ್ಕುಂಟು ಲೆಕ್ಕಕ್ಕಿಲ್ಲ: ದೇಶ ಹಾಗೂ ರಾಜ್ಯವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಲ್ಲಿ ಭ್ರಷ್ಟಾಚಾರವೂ ಒಂದು. ಬಡವರ ಹಾಗೂ ಸಮಸ್ಯೆ ಸುಳಿಯಲ್ಲಿ ಸಿಲುಕಿ ನರಳುತ್ತಿರುವವರ ಬಳಿ ಭ್ರಷ್ಟರು ಲೂಟಿಗಿಳಿದಿದ್ದಾರೆ. ಇದೆಲ್ಲದಕ್ಕೂ ಬ್ರೇಕ್ ಹಾಕಿ ಭ್ರಷ್ಟರಿಗೆ ಪಾಠಕಲಿಸಲು ಸ್ಥಾಪನೆಯಾಗಿದ್ದ ಲೋಕಾಯುಕ್ತ ಸಂಸ್ಥೆಗೆ ಸಿದ್ದರಾಮಯ್ಯ ಸರ್ಕಾರ ಎಳ್ಳುನೀರು ಬಿಟ್ಟು ಎಸಿಬಿ ಸ್ಥಾಪನೆ ಮಾಡಲಾಗಿತ್ತು. ಆದ್ರೆ ಸರ್ಕಾರ ಅಂದುಕೊಂಡಿದ್ದೇ ಒಂದು, ಆಗಿರೋದು ಮತ್ತೊಂದು. ಎಸಿಬಿ ಸ್ಥಾಪನೆಯಾದ ಬಳಿಕ ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣವಾಗಲಿದೆ ಅನ್ನೋ ಭರವಸೆ ಹುಸಿಯಾಗಿದೆ. ಅದರಲ್ಲೂ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿರುವ ಕಲ್ಯಾಣ ಕರ್ನಾಟಕದಲ್ಲಿ ಎಸಿಬಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಬಡವರನ್ನು ಸುಲಿಗೆ ಮಾಡುವ ಭ್ರಷ್ಟರಿಗಿಲ್ಲ ಶಿಕ್ಷೆ? ಎಸಿಬಿ ಅಸ್ತಿತ್ವಕ್ಕೆ ಬಂದು 3 ವರ್ಷ ಕಳೆದರೂ ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆ ವ್ಯಾಪ್ತಿಯಲ್ಲಿ ಯಾವುದೇ ಭ್ರಷ್ಟ ಅಧಿಕಾರಿಗೆ ಶಿಕ್ಷೆಯಾಗಿಲ್ಲ. ನೆಪಮಾತ್ರಕ್ಕೆ ಎಸಿಬಿ ಠಾಣೆಗಳನ್ನ ಸ್ಥಾಪಿಸಿರುವ ಸರ್ಕಾರ ಲಂಚಕೋರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಭ್ರಷ್ಟಾಚಾರ ನಿಗ್ರಹದಳಕ್ಕೆ ಪೂರ್ಣವಾದ ಅಧಿಕಾರ ನೀಡಿಲ್ಲ. ಹೀಗೆ ಪ್ರತಿಹಂತದಲ್ಲೂ ಎಸಿಬಿ ಅಧಿಕಾರಿಗಳು ಸರ್ಕಾರದ ಅನುಮತಿ ಪಡೆಯಲೇಬೇಕಾಗಿದೆ. ಎಸಿಬಿ ಠಾಣೆಗಳಲ್ಲಿ ದಾಖಲಾಗಿರುವ ಬಹುತೇಕ ಕೇಸ್​ಗಳು ಇಂದಿಗೂ ತನಿಖಾ ಹಂತದಲ್ಲೇ ಧೂಳು ತಿನ್ನುತ್ತಿವೆ. 3 ವರ್ಷ ಅವಧಿಯಲ್ಲಿ ರಾಜ್ಯದ ಈಶಾನ್ಯ ಭಾಗದಲ್ಲಿ 79 ಕೇಸ್ ದಾಖಲಾಗಿದ್ರೆ 28 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. 4 ಪ್ರಕರಣಗಳಿಗೆ ಅಭಿಯೋಜಕರ ಅನುಮತಿ ಕೋರಲಾಗಿದ್ದು, ಇನ್ನೂ 47 ಪ್ರಕರಣಗಳು ತನಿಖಾ ಹಂತದಲ್ಲೇ ಇವೆ.

ಎಸಿಬಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ! ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿರುವ ಅಧಿಕಾರಿಗಳು. ಸಾರ್ವಜನಿಕರಿಂದ ಲಂಚ ಸ್ವಿಕರೀಸುತ್ತಿದ್ದಾಗ ಸಿಕ್ಕಿ ಬಿದ್ದ ಲಂಚಕೋರರ ವಿರುದ್ಧ ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಯಾದಗೀರಿ, ಬೀದರ್, ಕಲಬುರ್ಗಿ, ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ. ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯಡಿ ಕೇಸ್ ದಾಖಲಾಗಿದೆ.ಆದ್ರೆ ನಿರೀಕ್ಷಿತ ಮಟ್ಟದಲ್ಲಿ ಭ್ರಷ್ಟರಿಗೆ ಶಿಕ್ಷೆ ಕೊಡಿಸುವ ಕೆಲಸವಾಗ್ತಿಲ್ಲ ಅಂತಾ ಆಕ್ರೋಶ ವ್ಯಕ್ತವಾಗುತ್ತಿದೆ.

ಒಟ್ನಲ್ಲಿ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತುಹಾಕುವ ಸರ್ಕಾರದ ಕನಸು ಇನ್ನೂ ನನಸಾಗಿಲ್ಲ. ಈ ಹೊತ್ತಲ್ಲೇ ‘ಎಸಿಬಿ’ ಇದ್ದೂ ಇಲ್ಲದಂತಾಗಿದ್ದು, ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಮೇಜರ್ ಸರ್ಜರಿಗೆ ಮುಂದಾಗಬೇಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ