ಈಜು-ಮೋಜು: ಬೆಂಗಳೂರಿನ ಮೂವರು ದೊಡ್ಡಬಳ್ಳಾಪುರ ಕೆರೆಯಲ್ಲಿ ನೀರುಪಾಲು

ದೊಡ್ಡಬಳ್ಳಾಪುರ: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರುಪಾಲು ಆದ ಘಟನೆ ಘಾಟಿ ಸುಬ್ರಹ್ಮಣ್ಯ ಬಳಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದ ಮೂವರು ನೀರುಪಾಲು ಆದವರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಜು(19), ಚಂದ್ರು(20) ಮತ್ತು ನವೀನ್(24) ಮೃತಪಟ್ಟವರು. 4 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಯುವಕರು, ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜುತ್ತಿದ್ದರು. ಈ ವೇಳೆ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿದ್ದರು. ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು […]

ಈಜು-ಮೋಜು: ಬೆಂಗಳೂರಿನ ಮೂವರು ದೊಡ್ಡಬಳ್ಳಾಪುರ ಕೆರೆಯಲ್ಲಿ ನೀರುಪಾಲು
ಸಾಧು ಶ್ರೀನಾಥ್​

Updated on: May 25, 2020 | 5:57 PM

ದೊಡ್ಡಬಳ್ಳಾಪುರ: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರುಪಾಲು ಆದ ಘಟನೆ ಘಾಟಿ ಸುಬ್ರಹ್ಮಣ್ಯ ಬಳಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದ ಮೂವರು ನೀರುಪಾಲು ಆದವರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಜು(19), ಚಂದ್ರು(20) ಮತ್ತು ನವೀನ್(24) ಮೃತಪಟ್ಟವರು.

4 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಯುವಕರು, ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜುತ್ತಿದ್ದರು. ಈ ವೇಳೆ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿದ್ದರು. ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರುಪಾಲು ಆಗಿದ್ದಾರೆ.

ಮೃತದೇಹಗಳಿಗಾಗಿ ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:53 pm, Mon, 25 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us