ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ. ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ […]

ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ
ಸಾಧು ಶ್ರೀನಾಥ್​

Updated on: Mar 05, 2020 | 10:18 AM

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ.

ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ ಆಸ್ಪತ್ರೆ, ಮಿಲಾದ್ ಪಾರ್ಕ್, ಆರ್.ಎಂ.ಸಿ‌ ವೃತ್ತ ಸೇರಿದಂತೆ ಹಲವು ಕಡೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಪ್ರಯಾಣಿಕರು ಹೇಳಿದ ಸ್ಥಳಕ್ಕೆ ಬಾರದ ಆಟೋ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us