AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ 4 ದಿನದ ಮಗು ಜೀರೋ ಟ್ರಾಫಿಕ್​ನಲ್ಲಿ ಆಸ್ಪತ್ರೆಗೆ

ಶಿವಮೊಗ್ಗ: ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ನಾಲ್ಕು ದಿನದ ಮಗುವನ್ನು ಶಿವಮೊಗ್ಗದಿಂದ ಉಡುಪಿಗೆ ಝೀರೋ ಟ್ರಾಫಿಕ್​ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅಶ್ವತ್ಥ್​ನಗರದ ದೇವೇಂದ್ರ ಮತ್ತು ಸುಪ್ರಿಯಾ ದಂಪತಿಯ 4 ದಿನದ ಮಗು ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿತ್ತು. ಮಗುವನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಬೇಕಿತ್ತು. ಹೀಗಾಗಿ ಶಿವಮೊಗ್ಗ ಎಸ್​ಪಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ […]

ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ 4 ದಿನದ ಮಗು ಜೀರೋ ಟ್ರಾಫಿಕ್​ನಲ್ಲಿ ಆಸ್ಪತ್ರೆಗೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 9:15 PM

Share

ಶಿವಮೊಗ್ಗ: ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ನಾಲ್ಕು ದಿನದ ಮಗುವನ್ನು ಶಿವಮೊಗ್ಗದಿಂದ ಉಡುಪಿಗೆ ಝೀರೋ ಟ್ರಾಫಿಕ್​ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅಶ್ವತ್ಥ್​ನಗರದ ದೇವೇಂದ್ರ ಮತ್ತು ಸುಪ್ರಿಯಾ ದಂಪತಿಯ 4 ದಿನದ ಮಗು ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿತ್ತು. ಮಗುವನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಬೇಕಿತ್ತು. ಹೀಗಾಗಿ ಶಿವಮೊಗ್ಗ ಎಸ್​ಪಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿ ಌಂಬುಲೆನ್ಸ್ ಮೂಲಕ ಶಿವಮೊಗ್ಗದಿಂದ ಉಡುಪಿಗೆ ಮಗುವನ್ನು ಶಿಫ್ಟ್ ಮಾಡಲಾಗಿದೆ. ಈ ಕಾರ್ಯಕ್ಕೆ ಸಹಾಯ ಮಾಡಿದ ಎಲ್ಲರಿಗೂ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ.

Published On - 1:26 pm, Wed, 29 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.