ಎರಡು ಕಾರುಗಳ ಮುಖಾಮುಖಿ: ಸ್ವಾಮೀಜಿ ಸೇರಿ ಸ್ಥಳದಲ್ಲೇ ನಾಲ್ವರು ದುರ್ಮರಣ

ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯೊಡೆದು ಸ್ವಾಮೀಜಿ ಸೇರಿದಂತೆ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಲ್ಲಿ ಕುಂದಗೋಳ ಪಟ್ಟಣದ ಶಿವಾನಂದ ಮಠದ ಶ್ರೀ ಬಸವೇಶ್ವರ ಸ್ವಾಮೀಜಿ(50) ಮೃತಪಟ್ಟಿದ್ದಾರೆ. ಬೆಳಗ್ಗೆಯಷ್ಟೇ ಶಿವಾನಂದ ಮಠದ ಶಾಲೆಯ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸ್ವಾಮೀಜಿ ನೆರವೇರಿಸಿದ್ದರು. ಭಕ್ತರೊಬ್ಬರ ಮದುವೆಗೆ ಧಾರವಾಡಕ್ಕೆ ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ನಿವಾಸಿ ಶಂಕರಗೌಡ […]

ಎರಡು ಕಾರುಗಳ ಮುಖಾಮುಖಿ: ಸ್ವಾಮೀಜಿ ಸೇರಿ ಸ್ಥಳದಲ್ಲೇ ನಾಲ್ವರು ದುರ್ಮರಣ
ಸಾಧು ಶ್ರೀನಾಥ್​

Updated on: Jan 26, 2020 | 5:39 PM

ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯೊಡೆದು ಸ್ವಾಮೀಜಿ ಸೇರಿದಂತೆ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಘಾತದಲ್ಲಿ ಕುಂದಗೋಳ ಪಟ್ಟಣದ ಶಿವಾನಂದ ಮಠದ ಶ್ರೀ ಬಸವೇಶ್ವರ ಸ್ವಾಮೀಜಿ(50) ಮೃತಪಟ್ಟಿದ್ದಾರೆ. ಬೆಳಗ್ಗೆಯಷ್ಟೇ ಶಿವಾನಂದ ಮಠದ ಶಾಲೆಯ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸ್ವಾಮೀಜಿ ನೆರವೇರಿಸಿದ್ದರು. ಭಕ್ತರೊಬ್ಬರ ಮದುವೆಗೆ ಧಾರವಾಡಕ್ಕೆ ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ನಿವಾಸಿ ಶಂಕರಗೌಡ ಪಾಟೀಲ್ (60), ಚಿಕ್ಕೋಡಿ ತಾಲೂಕಿನ ಕಬ್ಬೂರ ಗ್ರಾಮದ ಮಹಾದೇವ ಕಾಡೇಶಗೌಳ (55), ಮಾರುತಿ ಕುಕನೂರು(30) ಮೃತ ದುರ್ದೈವಿಗಳು.

Published On - 2:25 pm, Sun, 26 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us