AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿಯ ಮದುವೆ’ಗೆ ಯುವಕನ ಮನೆಯ ನಾಲ್ವರ ಭೀಕರ ಹತ್ಯೆ, ಎಲ್ಲಿ?

ರಾಯಚೂರು:ಪ್ರೀತಿ ಅದೊಂದು ಮಾಯೆ, ಪ್ರೀತಿಯ ಬಲೆಗೆ ಬಿದ್ದವರಲ್ಲಿ ಕೆಲವರು ಸಮಾಜದ ಪರಿಧಿಗಳೆಲ್ಲವನ್ನೂ ಮೆಟ್ಟಿ ನಿಂತು ತಮ್ಮ ಕುಟುಂಬದವರನ್ನೆಲ್ಲ ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟರೆ, ಇನ್ನು ಕೆಲವರು ಸಮಾಜವನ್ನು ಗೆಲ್ಲಲಾಗದೆ ಆತ್ಮಹತ್ಯೆಯ ದಾರಿ ಹಿಡಿಯುತ್ತಾರೆ. ಒಂದಿಷ್ಟು ಜನ ಸಮಾಜದ ಅಥವಾ ಕುಟುಂಬದ ವಿರೋಧದ ನಡುವೆಯೂ ಪ್ರೇಮ ಬಂಧನಕ್ಕೊಳಗಾಗಿ ಮರ್ಯಾದಾ ಹತ್ಯೆ ಎಂಬ ಹೀನಕೃತ್ಯಗಳಿಗೆ ಬಲಿಯಾಗುತ್ತಾರೆ. ಈಗ ಇಂತಹುದೆ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ನಡೆದಿದ್ದು, ಸ್ಥಳಿಯಾರಾದ ಮೌನೇಶ್​​ ಮತ್ತು ಮಂಜುಳಾ ಕೆಲ ದಿನಗಳ ಹಿಂದೆ ಪ್ರೀತಿಸಿ […]

‘ಪ್ರೀತಿಯ ಮದುವೆ’ಗೆ ಯುವಕನ ಮನೆಯ ನಾಲ್ವರ ಭೀಕರ ಹತ್ಯೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 11, 2020 | 8:05 PM

Share

ರಾಯಚೂರು:ಪ್ರೀತಿ ಅದೊಂದು ಮಾಯೆ, ಪ್ರೀತಿಯ ಬಲೆಗೆ ಬಿದ್ದವರಲ್ಲಿ ಕೆಲವರು ಸಮಾಜದ ಪರಿಧಿಗಳೆಲ್ಲವನ್ನೂ ಮೆಟ್ಟಿ ನಿಂತು ತಮ್ಮ ಕುಟುಂಬದವರನ್ನೆಲ್ಲ ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟರೆ, ಇನ್ನು ಕೆಲವರು ಸಮಾಜವನ್ನು ಗೆಲ್ಲಲಾಗದೆ ಆತ್ಮಹತ್ಯೆಯ ದಾರಿ ಹಿಡಿಯುತ್ತಾರೆ. ಒಂದಿಷ್ಟು ಜನ ಸಮಾಜದ ಅಥವಾ ಕುಟುಂಬದ ವಿರೋಧದ ನಡುವೆಯೂ ಪ್ರೇಮ ಬಂಧನಕ್ಕೊಳಗಾಗಿ ಮರ್ಯಾದಾ ಹತ್ಯೆ ಎಂಬ ಹೀನಕೃತ್ಯಗಳಿಗೆ ಬಲಿಯಾಗುತ್ತಾರೆ.

ಈಗ ಇಂತಹುದೆ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ನಡೆದಿದ್ದು, ಸ್ಥಳಿಯಾರಾದ ಮೌನೇಶ್​​ ಮತ್ತು ಮಂಜುಳಾ ಕೆಲ ದಿನಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇದನ್ನೊಪ್ಪದ ಕಿಡಿಗೇಡಿಗಳು, ಯುವಕನ ಮನೆಯವರೇ ಆದ ಸುಮಿತ್ರಮ್ಮ(55), ಶ್ರೀದೇವಿ(38), ನಾಗರಾಜ್(28), ಹನುಮೇಶ(30) ಎಂಬುವವರನ್ನು ಭೀಕರವಾಗಿ ನಡುರಸ್ತೆಯಲ್ಲೇ ಕಲ್ಲು, ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಈರಪ್ಪ(60)ನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಿಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ತನಿಖೆಯನ್ನ ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Published On - 6:48 pm, Sat, 11 July 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್