‘ಪ್ರೀತಿಯ ಮದುವೆ’ಗೆ ಯುವಕನ ಮನೆಯ ನಾಲ್ವರ ಭೀಕರ ಹತ್ಯೆ, ಎಲ್ಲಿ?

ರಾಯಚೂರು:ಪ್ರೀತಿ ಅದೊಂದು ಮಾಯೆ, ಪ್ರೀತಿಯ ಬಲೆಗೆ ಬಿದ್ದವರಲ್ಲಿ ಕೆಲವರು ಸಮಾಜದ ಪರಿಧಿಗಳೆಲ್ಲವನ್ನೂ ಮೆಟ್ಟಿ ನಿಂತು ತಮ್ಮ ಕುಟುಂಬದವರನ್ನೆಲ್ಲ ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟರೆ, ಇನ್ನು ಕೆಲವರು ಸಮಾಜವನ್ನು ಗೆಲ್ಲಲಾಗದೆ ಆತ್ಮಹತ್ಯೆಯ ದಾರಿ ಹಿಡಿಯುತ್ತಾರೆ. ಒಂದಿಷ್ಟು ಜನ ಸಮಾಜದ ಅಥವಾ ಕುಟುಂಬದ ವಿರೋಧದ ನಡುವೆಯೂ ಪ್ರೇಮ ಬಂಧನಕ್ಕೊಳಗಾಗಿ ಮರ್ಯಾದಾ ಹತ್ಯೆ ಎಂಬ ಹೀನಕೃತ್ಯಗಳಿಗೆ ಬಲಿಯಾಗುತ್ತಾರೆ. ಈಗ ಇಂತಹುದೆ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ನಡೆದಿದ್ದು, ಸ್ಥಳಿಯಾರಾದ ಮೌನೇಶ್​​ ಮತ್ತು ಮಂಜುಳಾ ಕೆಲ ದಿನಗಳ ಹಿಂದೆ ಪ್ರೀತಿಸಿ […]

‘ಪ್ರೀತಿಯ ಮದುವೆ’ಗೆ ಯುವಕನ ಮನೆಯ ನಾಲ್ವರ ಭೀಕರ ಹತ್ಯೆ, ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Jul 11, 2020 | 8:05 PM

ರಾಯಚೂರು:ಪ್ರೀತಿ ಅದೊಂದು ಮಾಯೆ, ಪ್ರೀತಿಯ ಬಲೆಗೆ ಬಿದ್ದವರಲ್ಲಿ ಕೆಲವರು ಸಮಾಜದ ಪರಿಧಿಗಳೆಲ್ಲವನ್ನೂ ಮೆಟ್ಟಿ ನಿಂತು ತಮ್ಮ ಕುಟುಂಬದವರನ್ನೆಲ್ಲ ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟರೆ, ಇನ್ನು ಕೆಲವರು ಸಮಾಜವನ್ನು ಗೆಲ್ಲಲಾಗದೆ ಆತ್ಮಹತ್ಯೆಯ ದಾರಿ ಹಿಡಿಯುತ್ತಾರೆ. ಒಂದಿಷ್ಟು ಜನ ಸಮಾಜದ ಅಥವಾ ಕುಟುಂಬದ ವಿರೋಧದ ನಡುವೆಯೂ ಪ್ರೇಮ ಬಂಧನಕ್ಕೊಳಗಾಗಿ ಮರ್ಯಾದಾ ಹತ್ಯೆ ಎಂಬ ಹೀನಕೃತ್ಯಗಳಿಗೆ ಬಲಿಯಾಗುತ್ತಾರೆ.

ಈಗ ಇಂತಹುದೆ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ನಡೆದಿದ್ದು, ಸ್ಥಳಿಯಾರಾದ ಮೌನೇಶ್​​ ಮತ್ತು ಮಂಜುಳಾ ಕೆಲ ದಿನಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇದನ್ನೊಪ್ಪದ ಕಿಡಿಗೇಡಿಗಳು, ಯುವಕನ ಮನೆಯವರೇ ಆದ ಸುಮಿತ್ರಮ್ಮ(55), ಶ್ರೀದೇವಿ(38), ನಾಗರಾಜ್(28), ಹನುಮೇಶ(30) ಎಂಬುವವರನ್ನು ಭೀಕರವಾಗಿ ನಡುರಸ್ತೆಯಲ್ಲೇ ಕಲ್ಲು, ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಈರಪ್ಪ(60)ನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಿಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ತನಿಖೆಯನ್ನ ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Published On - 6:48 pm, Sat, 11 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us