
ಮೈಸೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಕಾರು ಸುಟ್ಟುಭಸ್ಮವಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ರಸ್ತೆಯ ಮೊಸಂಬಾಯನಹಳ್ಳಿ ಬಳಿ ನಡೆದಿದೆ. ನಿವೃತ್ತ ಹೆಡ್ ಕಾನ್ಸ್ ಟೇಬಲ್ ಬಸವಣ್ಣ ಎಂಬುವರಿಗೆ ಸೇರಿದ ಕಾರಾಗಿದ್ದು, ಇದರಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು.
ಈ ವೇಳೆ ಕ್ಷಣಮಾತ್ರದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನೋಡಿ ಗಾಬರಿಗೊಳಗಾದ ಪ್ರಯಾಣಿಕರು ಸಮಯ ಪ್ರಜ್ಞೆಯಿಂದ ತಕ್ಷಣ ಕಾರಿನಿಂದ ಇಳಿದಿದ್ದಾರೆ. ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 9:56 am, Thu, 11 June 20