AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ ತೆರಳಲಿವೆ 4 ಶ್ರಮಿಕ ವಿಶೇಷ ರೈಲು, 6000 ವಲಸಿಗರ ಪ್ರಯಾಣ

ನೆಲಮಂಗಲ: ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಮಂದಿ ಲಾಕ್‌ಡೌನ್‌ನಲ್ಲಿ ಸಿಲುಕಿಕೊಂಡು ಸಮಸ್ಯೆ ಎದುರಿಸುತ್ತಿದ್ದರು. ಇಂತಹ ವಲಸಿಗರನ್ನ ತಮ್ಮ ತಾಯ್ನಾಡಿಗೆ ಕಳುಹಿಸಲು ಸರ್ಕಾರ ಪ್ರಾರಂಭಿಸಿರುವ ಶ್ರಮಿಕ ವಿಶೇಷ ರೈಲು ಯೋಜನೆಯಲ್ಲಿ ಈಗಾಗಲೆ ಲಕ್ಷಾಂತರ ವಲಸಿಗರು ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಸೇವಾ ಸಿಂಧು ಪೋರ್ಟಲ್ ಮುಖಾಂತರ ನೋಂದಣಿ ಮಾಡಿಕೊಂಡ ವಲಸಿಗರಿಗಾಗಿ ಇಂದು ಸಹ 4 ಶ್ರಮಿಕ್ ರೈಲುಗಳು ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ ತೆರಳಲಿವೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಿಂದ ಉತ್ತರಪ್ರದೇಶದ […]

ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ ತೆರಳಲಿವೆ 4 ಶ್ರಮಿಕ ವಿಶೇಷ ರೈಲು, 6000 ವಲಸಿಗರ ಪ್ರಯಾಣ
ಆಯೇಷಾ ಬಾನು
|

Updated on:May 31, 2020 | 2:32 PM

Share

ನೆಲಮಂಗಲ: ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಮಂದಿ ಲಾಕ್‌ಡೌನ್‌ನಲ್ಲಿ ಸಿಲುಕಿಕೊಂಡು ಸಮಸ್ಯೆ ಎದುರಿಸುತ್ತಿದ್ದರು. ಇಂತಹ ವಲಸಿಗರನ್ನ ತಮ್ಮ ತಾಯ್ನಾಡಿಗೆ ಕಳುಹಿಸಲು ಸರ್ಕಾರ ಪ್ರಾರಂಭಿಸಿರುವ ಶ್ರಮಿಕ ವಿಶೇಷ ರೈಲು ಯೋಜನೆಯಲ್ಲಿ ಈಗಾಗಲೆ ಲಕ್ಷಾಂತರ ವಲಸಿಗರು ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಸೇವಾ ಸಿಂಧು ಪೋರ್ಟಲ್ ಮುಖಾಂತರ ನೋಂದಣಿ ಮಾಡಿಕೊಂಡ ವಲಸಿಗರಿಗಾಗಿ ಇಂದು ಸಹ 4 ಶ್ರಮಿಕ್ ರೈಲುಗಳು ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ ತೆರಳಲಿವೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಿಂದ ಉತ್ತರಪ್ರದೇಶದ ಘೋರಕ್‌ಪುರಕ್ಕೆ ಸಂಜೆ 4ಕ್ಕೆ ಹಾಗೂ ಪಶ್ಚಿಮಬಂಗಾಳದ ನ್ಯೂ ಜಲ್ಪೈಗುರಿ ನಗರಕ್ಕೆ ಸಂಜೆ 6ಕ್ಕೆ ರೈಲುಗಳು ಹೊರಡಲಿವೆ‌. ಚಿಕ್ಕಬಾಣವಾರ ರೈಲು ನಿಲ್ದಾಣದಿಂದ ಜಾರ್ಖಾಂಡ್‌ನ ಹರ್ಟೀಯಾಗೆ ಸಂಜೆ 4ಕ್ಕೆ ಹಾಗೂ ಜಾರ್ಖಾಂಡ್‌ನ ನಗರಕ್ಕೆ ಸಂಜೆ 6ಕ್ಕೆ ರೈಲುಗಳು ಹೊರಡಲಿವೆ‌.

ಬೆಂಗಳೂರಿನ ವಿವಿದೆಡೆ ನೆಲೆಸಿರುವ ವಲಸಿಗರು ತಾಯ್ನಾಡಿಗೆ ಮರಳಲು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಬಿಎಂ‌ಟಿಸಿ ಬಸ್ ಮುಖಾಂತರ ವಲಸಿಗರನ್ನು ರೈಲು ನಿಲ್ದಾಣಕ್ಕೆ ಕರೆತರಲಿದ್ದಾರೆ. ಪ್ರತಿಯೊಬ್ಬ ಪ್ರಯಾಣಿಕರಿಗೂ ರೈಲು ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಿದ್ದು, ರೋಗಲಕ್ಷಣಗಳು ಇಲ್ಲದಿದ್ದರೆ ಮಾತ್ರ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು. ಎಲ್ಲಾ ಬಸ್‌ಗಳಲ್ಲೂ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸ್ ಹಾಗೂ ನಾಗರೀಕ ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Published On - 1:59 pm, Sun, 31 May 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು