AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿಕಾಯುವ ಯುವಕನಿಗೆ ಕೊರೊನಾ.. 40 ಕುರಿಗಳಿಗೆ ಕೋವಿಡ್‌ ಟೆಸ್ಟ್‌!

ತುಮಕೂರು: ಕೊರೊನಾ ಭಯ ಈಗ ಎಲ್ಲೆಡೆ ಅದ್ಯಾವ ಪರಿ ಹಬ್ಬಿದೆ ಅಂದ್ರೆ, ಯಾರಾದ್ರೂ ಕೆಮ್ಮಿದ್ರೆ ಸಾಕು, 360 ಡಿಗ್ರಿ ತಿರುಗಿ ನೋಡ್ತಾರೆ. ಕೊರೊನಾ ಹೆಮ್ಮಾರಿಯ ಆರ್ಭಟದಲ್ಲಿ ಪ್ರತಿಯೊಂದನ್ನೂ ಸಂಶಯದಿಂದ ನೋಡುವ ಮತ್ತು ನೋಡಲೇ ಬೇಕಾದಂಥ ಪರಿಸ್ಥಿತಿ ಬಂದುಬಿಟ್ಟಿದೆ. ಇದಕ್ಕೆ ತಾಜಾ ಉದಾಹರಣೆ ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಘಟನೆ. ಹೌದು, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದ ಕುರಿ ಕಾಯುವ 22 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈತ  ದಿನಾ ಸುಮಾರು 40 […]

ಕುರಿಕಾಯುವ ಯುವಕನಿಗೆ ಕೊರೊನಾ.. 40 ಕುರಿಗಳಿಗೆ ಕೋವಿಡ್‌ ಟೆಸ್ಟ್‌!
Guru
| Edited By: |

Updated on:Jun 30, 2020 | 4:28 PM

Share

ತುಮಕೂರು: ಕೊರೊನಾ ಭಯ ಈಗ ಎಲ್ಲೆಡೆ ಅದ್ಯಾವ ಪರಿ ಹಬ್ಬಿದೆ ಅಂದ್ರೆ, ಯಾರಾದ್ರೂ ಕೆಮ್ಮಿದ್ರೆ ಸಾಕು, 360 ಡಿಗ್ರಿ ತಿರುಗಿ ನೋಡ್ತಾರೆ. ಕೊರೊನಾ ಹೆಮ್ಮಾರಿಯ ಆರ್ಭಟದಲ್ಲಿ ಪ್ರತಿಯೊಂದನ್ನೂ ಸಂಶಯದಿಂದ ನೋಡುವ ಮತ್ತು ನೋಡಲೇ ಬೇಕಾದಂಥ ಪರಿಸ್ಥಿತಿ ಬಂದುಬಿಟ್ಟಿದೆ. ಇದಕ್ಕೆ ತಾಜಾ ಉದಾಹರಣೆ ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಘಟನೆ.

ಹೌದು, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದ ಕುರಿ ಕಾಯುವ 22 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈತ  ದಿನಾ ಸುಮಾರು 40 ಕುರಿಗಳನ್ನು ಮೇಯಿಸುತ್ತಿದ್ದ. ಹೀಗಾಗಿ ಈತನಿಗೆ ಸೋಂಕಿರೋದು ಕನ್‌ಫರ್ಮ್ ಆಗುತ್ತಿದ್ದಂತೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಈತನೊಂದಿಗೆ ಸಂಪರ್ಕದಲ್ಲಿ ಬಂದವರಿಗಾಗಿ ಶೋಧ ಆರಂಭಿಸಿದೆ. ಆಗ ಸಿಕ್ಕಿದ್ದೆ 40 ಕುರಿಗಳು!

ಹೇಳಿ ಕೇಳಿ ಕುರಿಕಾಯುವ ಕುರಿಗಾಹಿ ಈತ. ಪ್ರತಿದಿನ ಕುರಿಕಾಯುವುದೇ ಕಾಯಕ. ಹೀಗಾಗಿ ಅಧಿಕಾರಿಗಳು ಈ 40 ಕುರಿಗಳನ್ನೇ ಕೋವಿಡ್‌ ಟೆಸ್ಟ್‌ಗೊಳಪಡಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಎಲ್ಲ ಕುರಿಗಳ ಸ್ಯಾಂಪಲ್‌ಗಳನ್ನ ಪಡೆದುಕೊಂಡಿದ್ದಾರೆ. ಈಗ ಈ ಸ್ಯಾಂಪಲ್‌ಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳಿಸಿದ್ದು, ವರದಿ ಬರುವುದನ್ನೇ ಕಾಯುತ್ತಿದ್ದಾರೆ. ಕಾಲ ಯಾರು ಯಾರನ್ನು, ಯಾವಾಗ, ಹೇಗೆ ಆಟ್ಟಾಡಿಸುತ್ತೆ ನೋಡಿ ಅಂತಾ ಜನ ಈಗ ತುಮಕೂರಿನಾದ್ಯಂತ ಮಾತನಾಡಿಕೊಳ್ಳುವಂತಾಗಿದೆ.

Published On - 4:05 pm, Tue, 30 June 20

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ