ಎಸಿಬಿ ಅಧಿಕಾರಿಗಳೆಂದು ಹೇಳಿ ವಂಚನೆ, ಐವರ ಬಂಧನ

ಚಿತ್ರದುರ್ಗ: ಎಸಿಬಿ ಅಧಿಕಾರಿಗಳೆಂದು ಹೇಳಿ ಹೆದರಿಸಿ ಹಣ ಪಡೆದು ವಂಚನೆ ಮಾಡಿದ್ದ ಐವರು ಆರೋಪಿಗಳನ್ನ ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಮುರಿಗೆಪ್ಪ, ಹಾಸನ ಮೂಲದ ರಜನಿ, ಚಿದಾನಂದ, ತಮಿಳುನಾಡಿನ ಅರುಳ್ ರೇಗನ್ ಮತ್ತು ಹೇದರ್ ಬಂಧಿತ ಆರೋಪಿಗಳು. ಇವರು ಎಸಿಬಿ ಅಧಿಕಾರಿಗಳೆಂದು ಹೇಳಿ ನಂಬಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿರುವ ಎಲ್.ಟಿ.ರಂಗಪ್ಪಗೆ ವಂಚನೆ ಮಾಡಿದ್ದಾರೆ. 1ಲಕ್ಷ 24 ಸಾವಿರ ರೂಪಾಯಿಯನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಬಂಧಿತರಿಂದ ಮೊಬೈಲ್, ಚಿನ್ನಾಭರಣ, 52 ಸಾವಿರ ನಗದು […]

ಎಸಿಬಿ ಅಧಿಕಾರಿಗಳೆಂದು ಹೇಳಿ ವಂಚನೆ, ಐವರ ಬಂಧನ
ಸಾಧು ಶ್ರೀನಾಥ್​

Updated on: Dec 27, 2019 | 5:21 PM

ಚಿತ್ರದುರ್ಗ: ಎಸಿಬಿ ಅಧಿಕಾರಿಗಳೆಂದು ಹೇಳಿ ಹೆದರಿಸಿ ಹಣ ಪಡೆದು ವಂಚನೆ ಮಾಡಿದ್ದ ಐವರು ಆರೋಪಿಗಳನ್ನ ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಮುರಿಗೆಪ್ಪ, ಹಾಸನ ಮೂಲದ ರಜನಿ, ಚಿದಾನಂದ, ತಮಿಳುನಾಡಿನ ಅರುಳ್ ರೇಗನ್ ಮತ್ತು ಹೇದರ್ ಬಂಧಿತ ಆರೋಪಿಗಳು.

ಇವರು ಎಸಿಬಿ ಅಧಿಕಾರಿಗಳೆಂದು ಹೇಳಿ ನಂಬಿಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿರುವ ಎಲ್.ಟಿ.ರಂಗಪ್ಪಗೆ ವಂಚನೆ ಮಾಡಿದ್ದಾರೆ. 1ಲಕ್ಷ 24 ಸಾವಿರ ರೂಪಾಯಿಯನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಬಂಧಿತರಿಂದ ಮೊಬೈಲ್, ಚಿನ್ನಾಭರಣ, 52 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:28 am, Fri, 27 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us