AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೂ ಕೂಡ ಉತ್ತರ ರಾಜ್ಯಗಳಿಗೆ 5 ಶ್ರಮಿಕ್ ರೈಲಿನಲ್ಲಿ 7500 ವಲಸಿಗರ ಪ್ರಯಾಣ

ನೆಲಮಂಗಲ: ಲಾಕ್‌ಡೌನ್‌ನಿಂದ ಇಡೀ ದೇಶವೇ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಕೂಲಿ ಕಾರ್ಮಿಕರ ಬದುಕಂತೋ ದುಸ್ಥಿತಿಯ ಹಂತಕ್ಕೆ ತಲುಪಿದೆ. ವಲಸೆ, ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಸಂಬಳವಿಲ್ಲದೆ ಪರದಾಡುವ ಪರಿಸ್ಥಿತಿ ಕಂಡು ಕೇಂದ್ರ ಸರ್ಕಾರ ಶ್ರಮಿಕ್ ಹೆಸರಿನ ವಿಶೇಷ ರೈಲು ಯೋಜನೆ ಜಾರಿಗೆ ತಂದಿದೆ. ಇದುವರೆಗೂ ರಾಜ್ಯಾದ್ಯಂತ ಸುಮಾರು 2.8 ಲಕ್ಷ ವಲಸಿಗರು ತಮ್ಮ ಊರುಗಳಿಗೆ ತೆರಳಿದ್ದು, ಇಂದು ಸಹ ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ 5 ಶ್ರಮಿಕ್ ರೈಲು ಪ್ರಯಾಣಿಸಲಿವೆ. ಬೆಂಗಳೂರಿನ ಚಿಕ್ಕಬಾಣವಾರ ರೈಲು ನಿಲ್ದಾಣದಿಂದ ಉತ್ತರಪ್ರದೇಶದ ಘೋರಕ್‌ಪುರಕ್ಕೆ ಸಂಜೆ […]

ಇಂದೂ ಕೂಡ ಉತ್ತರ ರಾಜ್ಯಗಳಿಗೆ 5 ಶ್ರಮಿಕ್ ರೈಲಿನಲ್ಲಿ 7500 ವಲಸಿಗರ ಪ್ರಯಾಣ
ಆಯೇಷಾ ಬಾನು
|

Updated on:Jun 01, 2020 | 2:54 PM

Share

ನೆಲಮಂಗಲ: ಲಾಕ್‌ಡೌನ್‌ನಿಂದ ಇಡೀ ದೇಶವೇ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಕೂಲಿ ಕಾರ್ಮಿಕರ ಬದುಕಂತೋ ದುಸ್ಥಿತಿಯ ಹಂತಕ್ಕೆ ತಲುಪಿದೆ. ವಲಸೆ, ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಸಂಬಳವಿಲ್ಲದೆ ಪರದಾಡುವ ಪರಿಸ್ಥಿತಿ ಕಂಡು ಕೇಂದ್ರ ಸರ್ಕಾರ ಶ್ರಮಿಕ್ ಹೆಸರಿನ ವಿಶೇಷ ರೈಲು ಯೋಜನೆ ಜಾರಿಗೆ ತಂದಿದೆ. ಇದುವರೆಗೂ ರಾಜ್ಯಾದ್ಯಂತ ಸುಮಾರು 2.8 ಲಕ್ಷ ವಲಸಿಗರು ತಮ್ಮ ಊರುಗಳಿಗೆ ತೆರಳಿದ್ದು, ಇಂದು ಸಹ ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ 5 ಶ್ರಮಿಕ್ ರೈಲು ಪ್ರಯಾಣಿಸಲಿವೆ.

ಬೆಂಗಳೂರಿನ ಚಿಕ್ಕಬಾಣವಾರ ರೈಲು ನಿಲ್ದಾಣದಿಂದ ಉತ್ತರಪ್ರದೇಶದ ಘೋರಕ್‌ಪುರಕ್ಕೆ ಸಂಜೆ 4 ಗಂಟೆಗೆ ರೈಲು ಹೊರಡಲಿದ್ದು, ಹೊಸೂರು ರಸ್ತೆ ರೈಲು ನಿಲ್ದಾಣದಿಂದ ಅಸ್ಸಾಂ ರಾಜ್ಯದ ದಿಬ್ರುಗರ್‌ ನಗರಕ್ಕೆ ಸಂಜೆ 4ಕ್ಕೆ ಮತ್ತೊಂದು ರೈಲು ಪ್ರಯಾಣ ಬೆಳಸಲಿದೆ. ಉಳಿದಂತೆ ಕ್ರಾಂತೀವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಿಂದ ಪಶ್ಚಿಮಬಂಗಾಳದ ಜಲ್ಪೈಗುರಿ ನಗರಕ್ಕೆ ಸಂಜೆ 6 ಗಂಟೆ ಹಾಗೂ ರಾತ್ರಿ 8 ಗಂಟೆಗೆ ಹೊರಡಲಿದ್ದು, ರಾತ್ರಿ 10ಕ್ಕೆ ಒಡಿಸ್ಸಾ ರಾಜ್ಯದ ಬಾಲಸೋರಗೆ ನಗರಕ್ಕೆ ಮತ್ತೊಂದು ರೈಲು ಪ್ರಯಾಣ ಆರಂಭಿಸಲಿದೆ. ಪ್ರತಿ ರೈಲಿನಲ್ಲೂ 1500 ಜನರಂತೆ 5 ರೈಲಿನಲ್ಲಿ 7500 ವಲಸಿಗರು ತಾಯ್ನಾಡಿಗೆ ಪ್ರಯಾಣ ಬೆಳಸಲಿದ್ದಾರೆ.

ನಾಗರಿಕ ರೈಲು ಸೇವೆ ಆರಂಭವಾಗಿದ್ದರೂ ಸಹ ಶ್ರಮಿಕ್ ರೈಲು ಯೋಜನೆ ಕೆಲ ದಿನಗಳ ಕಾಲ ಮುಂದುವರೆಯಲಿದ್ದು, ಸೇವಾ ಸಿಂಧು ಮೂಲಕ ನೋಂದಣಿ ಮಾಡಿಕೊಂಡಿರುವ ಪ್ರಯಾಣಿಕರಿಗೆ ಅವಕಾಶ ಮಾಡಿಕೊಡಲಾಗುವುದು. ಬೆಂಗಳೂರಿನ ವಿವಿಧೆಡೆ ನೆಲೆಸಿರುವ ಕಾರ್ಮಿಕರನ್ನು ಬಿಬಿಎಂಪಿ ಅಧಿಕಾರಿಗಳು ಬಿಎಂಟಿಸಿ ಬಸ್ ಮೂಲಕ ಕರೆತರಲಿದ್ದು ರೈಲು ನಿಲ್ದಾಣದ ಬಳಿ ಎಲ್ಲರಿಗೂ ಥರ್ಮಲ್‌ ಸ್ಕ್ರೀನಿಂಗ್ ಮಾಡಿ ಆರೋಗ್ಯ ಸ್ಥಿರವಾಗಿದ್ದರೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಎಲ್ಲಾ ಬಸ್‌ಗಳಿಗೂ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗುವುದು ಹಾಗೂ ಪ್ರತಿ ರೈಲು ನಿಲ್ದಾಣದಲ್ಲಿ ನಾಗರಿಕ‌ ಪೊಲೀಸ್ ಹಾಗೂ ರೈಲ್ವೆ ಪೊಲೀಸರನ್ನೂ ಭದ್ರತೆಗಾಗಿ ನಿಯೋಜಿಸಲಾಗುವುದು.

Published On - 11:39 am, Mon, 1 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ