AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದಿದ್ದಕ್ಕೆ ಟ್ರಾಫಿಕ್ ಠಾಣೆಯ 6 ಸಿಬ್ಬಂದಿ ಅಮಾನತು

ಬೆಂಗಳೂರು: ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಜಾಲಹಳ್ಳಿ ಟ್ರಾಫಿಕ್ ಠಾಣೆಯ ಆರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹಾಗೂ ಅಮಾನತು ಅವಧಿಯಲ್ಲಿ ಖಾಸಗಿ ನೌಕರಿ ಹಾಗೂ ವ್ಯವಹಾರ ಮಾಡಿದರೆ ಜೀವನ ಭತ್ಯೆ ಮುಟ್ಟುಗೋಲು ಹಾಕಿಕೊಳ್ಳುವುದು, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಸೌಮ್ಯಲತಾ ಎಚ್ಚರಿಕೆ ನೀಡಿದ್ದಾರೆ. ಕರ್ತವ್ಯ ಬಿಟ್ಟು ಪಾರ್ಕ್‌ನಲ್ಲಿ ಗುಂಪು ಸೇರಿದ್ದ ಹಿನ್ನೆಲೆಯಲ್ಲಿ ಆರು ಮಂದಿ ಪೊಲೀಸರನ್ನ ಅಮಾನತು ಮಾಡಿ ಡಿಸಿಪಿ ಆದೇಶಿಸಿದ್ದಾರೆ. ಜಾಲಹಳ್ಳಿ ಸಂಚಾರ ಠಾಣೆಯ ಎಎಸ್‌ಐ ಮಂಜುನಾಥಯ್ಯ, ಹೆಡ್ […]

ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದಿದ್ದಕ್ಕೆ ಟ್ರಾಫಿಕ್ ಠಾಣೆಯ 6 ಸಿಬ್ಬಂದಿ ಅಮಾನತು
ಆಯೇಷಾ ಬಾನು
|

Updated on:Aug 21, 2020 | 3:28 PM

Share

ಬೆಂಗಳೂರು: ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಜಾಲಹಳ್ಳಿ ಟ್ರಾಫಿಕ್ ಠಾಣೆಯ ಆರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹಾಗೂ ಅಮಾನತು ಅವಧಿಯಲ್ಲಿ ಖಾಸಗಿ ನೌಕರಿ ಹಾಗೂ ವ್ಯವಹಾರ ಮಾಡಿದರೆ ಜೀವನ ಭತ್ಯೆ ಮುಟ್ಟುಗೋಲು ಹಾಕಿಕೊಳ್ಳುವುದು, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಸೌಮ್ಯಲತಾ ಎಚ್ಚರಿಕೆ ನೀಡಿದ್ದಾರೆ.

ಕರ್ತವ್ಯ ಬಿಟ್ಟು ಪಾರ್ಕ್‌ನಲ್ಲಿ ಗುಂಪು ಸೇರಿದ್ದ ಹಿನ್ನೆಲೆಯಲ್ಲಿ ಆರು ಮಂದಿ ಪೊಲೀಸರನ್ನ ಅಮಾನತು ಮಾಡಿ ಡಿಸಿಪಿ ಆದೇಶಿಸಿದ್ದಾರೆ. ಜಾಲಹಳ್ಳಿ ಸಂಚಾರ ಠಾಣೆಯ ಎಎಸ್‌ಐ ಮಂಜುನಾಥಯ್ಯ, ಹೆಡ್ ಕಾನ್ಸ್​ಟೇಬಲ್​ ನಾಗರಾಜು, ಕಾನ್ಸ್​ಟೇಬಲ್​ಗಳಾದ ಪದ್ಮನಾಭ್, ಮಧುಸೂದನ್, ವಿಶ್ವನಾಥ್, ಮಹಿಳಾ ಕಾನ್ಸ್​ಟೇಬಲ್ ಸುಜನಾ ಅಮಾನತು ಮಾಡಲಾಗಿದೆ.

ಜಾಲಹಳ್ಳಿ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಆಗಸ್ಟ್ 11ರಂದು ಠಾಣೆಯ ಆರು ಸಿಬ್ಬಂದಿಯನ್ನು ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಕೋಬ್ರಾ ಡ್ಯೂಟಿಗೆ, ಜಾಲಹಳ್ಳಿ ಜಂಕ್ಷನ್, ಗಂಗಮ್ಮನ ವೃತ್ತ, ಸಾಹಿತ್ಯ ಕೂಟ ಜಂಕ್ಷನ್ ಸೇರಿ ಹಲವೆಡೆ ಸಂಚಾರ ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜನೆ‌ ಮಾಡಲಾಗಿತ್ತು. ಕೊರೊನಾ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಆ ಸಿಬ್ಬಂದಿಗೆ ಸೂಚಿಸಲಾಗಿತ್ತು.

ಆದರೆ ಹಿರಿಯ ಅಧಿಕಾರಿಗಳ ಸಲಹೆಯನ್ನು ಲೆಕ್ಕಿಸದೇ, ಆರು ಮಂದಿ ಸಿಬ್ಬಂದಿ ಸಾಹಿತ್ಯ ಕೂಟ ಬಳಿಯ ಪಾರ್ಕ್‌ನಲ್ಲಿ ಗುಂಪು ಸೇರಿದ್ದರು‌. ಈ ವೇಳೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳದ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಆರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

Published On - 10:15 am, Fri, 21 August 20

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!