ಕೊರೊನಾಗೆ ಬೆಚ್ಚಿಬಿದ್ದ ಬೆಸ್ಕಾಂ ಸಿಬ್ಬಂದಿ, ಇಂದು 6 ಮಂದಿಗೆ ಪಾಸಿಟಿವ್

ಬೆಂಗಳೂರು: ಬೆಸ್ಕಾಂ ಹೆಲ್ಪ್ ಲೈನ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಇಂದು 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಕಚೇರಿಯಲ್ಲಿ ನಾವು ಕೆಲಸ ಮಾಡಲ್ಲ ಎಂದು ಸಿಬ್ಬಂದಿ ವರ್ಗದವರು ಪ್ರತಿಭಟನೆ ಮಾಡಿದ ಘಟನೆ ಬೆಸ್ಕಾಂ ಹೆಲ್ಪ್ ಲೈನ್ ಕಚೇರಿಯಲ್ಲಿ ನಡೆದಿದೆ. ಮೊದಲು ಒಂದು ಪಾಸಿಟಿವ್ ಕೇಸ್ ಬಂದಾಗ ಕಂಟ್ರೋಲ್ ರೂಮ್ ವಿಭಾಗವನ್ನ ಸ್ಯಾನಿಟೈಸ್ ಮಾಡದೆ ಮೇಲಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಆದರೆ ಈಗ ಒಂದೇ ದಿನ 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಿಬ್ಬಂದಿ ವರ್ಗದವರಲ್ಲಿ ಆತಂಕವನ್ನುಂಟು […]

ಕೊರೊನಾಗೆ ಬೆಚ್ಚಿಬಿದ್ದ ಬೆಸ್ಕಾಂ ಸಿಬ್ಬಂದಿ, ಇಂದು 6 ಮಂದಿಗೆ ಪಾಸಿಟಿವ್
ಸಾಧು ಶ್ರೀನಾಥ್​

Updated on: Jul 18, 2020 | 6:32 PM

ಬೆಂಗಳೂರು: ಬೆಸ್ಕಾಂ ಹೆಲ್ಪ್ ಲೈನ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಇಂದು 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಕಚೇರಿಯಲ್ಲಿ ನಾವು ಕೆಲಸ ಮಾಡಲ್ಲ ಎಂದು ಸಿಬ್ಬಂದಿ ವರ್ಗದವರು ಪ್ರತಿಭಟನೆ ಮಾಡಿದ ಘಟನೆ ಬೆಸ್ಕಾಂ ಹೆಲ್ಪ್ ಲೈನ್ ಕಚೇರಿಯಲ್ಲಿ ನಡೆದಿದೆ.

ಮೊದಲು ಒಂದು ಪಾಸಿಟಿವ್ ಕೇಸ್ ಬಂದಾಗ ಕಂಟ್ರೋಲ್ ರೂಮ್ ವಿಭಾಗವನ್ನ ಸ್ಯಾನಿಟೈಸ್ ಮಾಡದೆ ಮೇಲಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಆದರೆ ಈಗ ಒಂದೇ ದಿನ 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಿಬ್ಬಂದಿ ವರ್ಗದವರಲ್ಲಿ ಆತಂಕವನ್ನುಂಟು ಮಾಡಿದೆ. ಜೊತೆಗೆ ನಮಗೆ ರೋಗ ಬಂದ್ರೆ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸುವ ಭರವಸೆಯನ್ನು ಸಹ ನೀಡ್ತಿಲ್ಲ ಅಂತಾ ಸಿಬ್ಬಂದಿ ವರ್ಗದವರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us