ಕೊರೊನಾಗೆ ಹೆದರಿ ಆಸ್ಪತ್ರೆಯಲ್ಲೇ ಸೋಂಕಿತ ಆತ್ಮಹತ್ಯೆ

ಮಂಡ್ಯ: ನರ ಹಂತಕ ಕೊರೊನಾಗೆ ಹೆದರಿ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮಳವಳ್ಳಿ ಮೂಲದ 60 ವರ್ಷದ ವೃದ್ಧ ಮಧ್ಯರಾತ್ರಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಮೃತ ಸೋಂಕಿತ ವೃದ್ಧ ಒಂದು ವಾರದಿಂದ ನಾರ್ಮಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್‌ ಮಾಡಲಾಗಿತ್ತು. ICUಗೆ ಶಿಫ್ಟ್‌ ಆಗ್ತಿದ್ದಂತೆ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಿನ ಜಾವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ […]

ಕೊರೊನಾಗೆ ಹೆದರಿ ಆಸ್ಪತ್ರೆಯಲ್ಲೇ ಸೋಂಕಿತ ಆತ್ಮಹತ್ಯೆ
ಆಯೇಷಾ ಬಾನು Edited By:

Updated on: Jul 24, 2020 | 4:06 PM

ಮಂಡ್ಯ: ನರ ಹಂತಕ ಕೊರೊನಾಗೆ ಹೆದರಿ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಮಳವಳ್ಳಿ ಮೂಲದ 60 ವರ್ಷದ ವೃದ್ಧ ಮಧ್ಯರಾತ್ರಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಮೃತ ಸೋಂಕಿತ ವೃದ್ಧ ಒಂದು ವಾರದಿಂದ ನಾರ್ಮಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್‌ ಮಾಡಲಾಗಿತ್ತು. ICUಗೆ ಶಿಫ್ಟ್‌ ಆಗ್ತಿದ್ದಂತೆ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಳಗಿನ ಜಾವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧೆ ಆತ್ಮಹತ್ಯೆ

Published On - 8:51 am, Thu, 23 July 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us