ಕೊರೊನಾಗೆ ಹೆದರಿ ಕ್ವಾರಂಟೈನ್​ನಲ್ಲಿದ್ದ ಅಜ್ಜಿ ಆತ್ಮಹತ್ಯೆ! ಎಲ್ಲಿ?

ಕಾರವಾರ: ಮೊಮ್ಮಗನಿಗೆ ಕೊರೊನಾ ಸೋಂಕು ತಗುಲಿರುವ  ಹಿನ್ನೆಲೆಯಲ್ಲಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದ ವೃದ್ಧೆ ನೇಣಿಗೆ ಶರಣಾಗಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾಗೆ ಹೆದರಿ 62 ವರ್ಷದ ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಜರಾತ್​ನಿಂದ ಮೇ 18ರಿಂದ ಬಂದಿದ್ದ 1313 ನೇ ಸೋಂಕಿತ 24 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢವಾಗಿತ್ತು. ಯುವಕನ ಜೊತೆ ಸಂಪರ್ಕದಲ್ಲಿದ್ದ ಕಾರಣಕ್ಕೆ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಅಜ್ಜಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಅಜ್ಜಿ ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾಗೆ ಹೆದರಿ ಕ್ವಾರಂಟೈನ್​ನಲ್ಲಿದ್ದ ಅಜ್ಜಿ ಆತ್ಮಹತ್ಯೆ! ಎಲ್ಲಿ?
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: May 22, 2020 | 1:23 PM

ಕಾರವಾರ: ಮೊಮ್ಮಗನಿಗೆ ಕೊರೊನಾ ಸೋಂಕು ತಗುಲಿರುವ  ಹಿನ್ನೆಲೆಯಲ್ಲಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದ ವೃದ್ಧೆ ನೇಣಿಗೆ ಶರಣಾಗಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾಗೆ ಹೆದರಿ 62 ವರ್ಷದ ವೃದ್ಧೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುಜರಾತ್​ನಿಂದ ಮೇ 18ರಿಂದ ಬಂದಿದ್ದ 1313 ನೇ ಸೋಂಕಿತ 24 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢವಾಗಿತ್ತು. ಯುವಕನ ಜೊತೆ ಸಂಪರ್ಕದಲ್ಲಿದ್ದ ಕಾರಣಕ್ಕೆ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಅಜ್ಜಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಅಜ್ಜಿ ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 11:24 am, Fri, 22 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us