ಲಾಕ್‌ಡೌನ್‌ ನಡುವೆಯೂ ಆ್ಯಂಬುಲೆನ್ಸ್‌ ದುರ್ಬಳಕೆ, ಆರೋಪಿಗಳು ಅರೆಸ್ಟ್​

ಮಂಗಳೂರು: ಲಾಕ್​ಡೌನ್ ಮಧ್ಯೆಯೂ ಆ್ಯಂಬುಲೆನ್ಸ್‌ ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಂಬುಲೆನ್ಸ್‌ನಲ್ಲಿ ಜನರನ್ನು ತುಂಬಿಸಿಕೊಂಡು ಗಡಿ ದಾಟಲು ಯತ್ನಿಸಿದ್ದ ಪುತ್ತೂರು ತಾಲೂಕಿನ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು. ಆ್ಯಂಬುಲೆನ್ಸ್‌ನಲ್ಲಿ ರಾತ್ರಿ ಮೈಸೂರು ಕಡೆ ಈ 7 ಮಂದಿ ಹೊರಟಿದ್ದರು. ಕೊಡಗು ಜಿಲ್ಲೆ ಕುಶಾಲನಗರ ಸರಹದ್ದಿನ ಕೊಪ್ಪ ಎಂಬಲ್ಲಿ ಆ್ಯಂಬುಲೆನ್ಸ್‌ ತಡೆದು ಪೊಲೀಸರು ವಾಪಸ್ ಕಳುಹಿಸಿದ್ದರು. ಮತ್ತೆ […]

ಲಾಕ್‌ಡೌನ್‌ ನಡುವೆಯೂ ಆ್ಯಂಬುಲೆನ್ಸ್‌ ದುರ್ಬಳಕೆ, ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​

Updated on: Apr 19, 2020 | 12:25 PM

ಮಂಗಳೂರು: ಲಾಕ್​ಡೌನ್ ಮಧ್ಯೆಯೂ ಆ್ಯಂಬುಲೆನ್ಸ್‌ ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಂಬುಲೆನ್ಸ್‌ನಲ್ಲಿ ಜನರನ್ನು ತುಂಬಿಸಿಕೊಂಡು ಗಡಿ ದಾಟಲು ಯತ್ನಿಸಿದ್ದ ಪುತ್ತೂರು ತಾಲೂಕಿನ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು.

ಆ್ಯಂಬುಲೆನ್ಸ್‌ನಲ್ಲಿ ರಾತ್ರಿ ಮೈಸೂರು ಕಡೆ ಈ 7 ಮಂದಿ ಹೊರಟಿದ್ದರು. ಕೊಡಗು ಜಿಲ್ಲೆ ಕುಶಾಲನಗರ ಸರಹದ್ದಿನ ಕೊಪ್ಪ ಎಂಬಲ್ಲಿ ಆ್ಯಂಬುಲೆನ್ಸ್‌ ತಡೆದು ಪೊಲೀಸರು ವಾಪಸ್ ಕಳುಹಿಸಿದ್ದರು. ಮತ್ತೆ ದಕ್ಷಿಣ ಕನ್ನಡ ಗಡಿಭಾಗ ಪ್ರವೇಶಿಸುವ ವೇಳೆ ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us